<p>ಬಸವಕಲ್ಯಾಣ: ‘ಕೌಶಲವಿದ್ದವರಿಗೆ ಉದ್ಯೋಗದಲ್ಲಿ ಅಷ್ಟೇ ಅಲ್ಲ, ಎಲ್ಲ ಕ್ಷೇತ್ರಗಳಲ್ಲೂ ಮೊದಲ ಆದ್ಯತೆ ನೀಡಲಾಗುತ್ತದೆ’ ಎಂದು ಕಾಲೇಜಿನ ಉದ್ಯೋಗ ಕೋಶದ ಸಂಚಾಲಕ ನಾಗರಾಜ ನಿಂಬಾಳ್ಕರ್ ಹೇಳಿದ್ದಾರೆ.</p>.<p>ನಗರದ ಎಸ್.ಎಸ್.ಕೆ.ಬಸವೇಶ್ವರ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕೌಶಲಾಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ಕೌಶಲ ಇಲ್ಲದಿದ್ದರೆ ಯಾವುದೇ ಕ್ಷೇತ್ರದಲ್ಲಿ ಅವಕಾಶಗಳು ಕಡಿಮೆ. ಆದ್ದರಿಂದ ಎಲ್ಲರೂ ಯಾವುದರಲ್ಲಾದರೂ ಕೌಶಲ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಹುಬ್ಬಳ್ಳಿಯ ದೇಶಪಾಂಡೆ ಕೌಶಲ್ಯಾಭಿವೃದ್ಧಿ ಕೇಂದ್ರದ ವಿಭಾಗೀಯ ವ್ಯವಸ್ಥಾಪಕ ಉಮೇಶ ಪೂಜಾರಿ ಮಾತನಾಡಿ, ‘ದೇಶಪಾಂಡೆ ಕೌಶಲ್ಯಾಭಿವೃದ್ಧಿ ಕೇಂದ್ರದಿಂದ ಯುವಕರಿಗೆ ವಿವಿಧ ರೀತಿಯ ತರಬೇತಿ ನೀಡಲಾಗುತ್ತದೆ. ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ’ ಎಂದರು.</p>.<p>ಪ್ರಾಂಶುಪಾಲ ಶಿವಕುಮಾರ ಪಾಟೀಲ, ಸಂಪನ್ಮೂಲ ವ್ಯಕ್ತಿ ಅಜಿತ್ ಕುಲಕರ್ಣಿ, ದೀಪಿಕಾ, ಕೀರ್ತಿ ಮಾತನಾಡಿದರು. ಸಂಯೋಜಕ ವಿಜಯಕುಮಾರ, ಶಿಲ್ಪಾ ಬಿರಾದಾರ, ನಾಗಮ್ಮ, ಜ್ಯೋತಿ, ಸಾಕ್ಷಿ, ಕಲ್ಯಾಣಪ್ಪ ನಾವದಗಿ, ಶಶಿಧರ ಪಾಟೀಲ, ಮಹಾದೇವ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-33-824770941</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ‘ಕೌಶಲವಿದ್ದವರಿಗೆ ಉದ್ಯೋಗದಲ್ಲಿ ಅಷ್ಟೇ ಅಲ್ಲ, ಎಲ್ಲ ಕ್ಷೇತ್ರಗಳಲ್ಲೂ ಮೊದಲ ಆದ್ಯತೆ ನೀಡಲಾಗುತ್ತದೆ’ ಎಂದು ಕಾಲೇಜಿನ ಉದ್ಯೋಗ ಕೋಶದ ಸಂಚಾಲಕ ನಾಗರಾಜ ನಿಂಬಾಳ್ಕರ್ ಹೇಳಿದ್ದಾರೆ.</p>.<p>ನಗರದ ಎಸ್.ಎಸ್.ಕೆ.ಬಸವೇಶ್ವರ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕೌಶಲಾಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ಕೌಶಲ ಇಲ್ಲದಿದ್ದರೆ ಯಾವುದೇ ಕ್ಷೇತ್ರದಲ್ಲಿ ಅವಕಾಶಗಳು ಕಡಿಮೆ. ಆದ್ದರಿಂದ ಎಲ್ಲರೂ ಯಾವುದರಲ್ಲಾದರೂ ಕೌಶಲ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಹುಬ್ಬಳ್ಳಿಯ ದೇಶಪಾಂಡೆ ಕೌಶಲ್ಯಾಭಿವೃದ್ಧಿ ಕೇಂದ್ರದ ವಿಭಾಗೀಯ ವ್ಯವಸ್ಥಾಪಕ ಉಮೇಶ ಪೂಜಾರಿ ಮಾತನಾಡಿ, ‘ದೇಶಪಾಂಡೆ ಕೌಶಲ್ಯಾಭಿವೃದ್ಧಿ ಕೇಂದ್ರದಿಂದ ಯುವಕರಿಗೆ ವಿವಿಧ ರೀತಿಯ ತರಬೇತಿ ನೀಡಲಾಗುತ್ತದೆ. ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ’ ಎಂದರು.</p>.<p>ಪ್ರಾಂಶುಪಾಲ ಶಿವಕುಮಾರ ಪಾಟೀಲ, ಸಂಪನ್ಮೂಲ ವ್ಯಕ್ತಿ ಅಜಿತ್ ಕುಲಕರ್ಣಿ, ದೀಪಿಕಾ, ಕೀರ್ತಿ ಮಾತನಾಡಿದರು. ಸಂಯೋಜಕ ವಿಜಯಕುಮಾರ, ಶಿಲ್ಪಾ ಬಿರಾದಾರ, ನಾಗಮ್ಮ, ಜ್ಯೋತಿ, ಸಾಕ್ಷಿ, ಕಲ್ಯಾಣಪ್ಪ ನಾವದಗಿ, ಶಶಿಧರ ಪಾಟೀಲ, ಮಹಾದೇವ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-33-824770941</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>