<p><strong>ಬೆಂಗಳೂರು:</strong> ಗೌರವ ಧನ ಹೆಚ್ಚಳವೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.</p>.<p>‘2025ರ ಜನವರಿಯಲ್ಲಿ ಮುಖ್ಯಮಂತ್ರಿ ಅವರೇ ಘೋಷಿಸಿದ ರೀತಿಯಲ್ಲಿ ಗೌರವ ಧನವನ್ನು ಕನಿಷ್ಠ ₹10 ಸಾವಿರ ನೀಡಲು ಕ್ರಮ ವಹಿಸ ಬೇಕು. ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ₹1,000 ಗೌರವ ಧನ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆ ಯರಿಗೆ ಹೆಚ್ಚಳ ಮಾಡಬೇಕು. ಬೇಡಿಕೆ ಗಳ ಕುರಿತು ಚರ್ಚಿಸಲು ಕೂಡಲೇ ಸಭೆ ಕರೆಯಬೇಕು’ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಟಿ.ಸಿ.ರಮಾ ಆಗ್ರಹಿಸಿದರು.</p>.<p>‘ಒಂದು ವರ್ಷದಿಂದ ಕಾರ್ಯಕರ್ತೆಯರಿಗೆ ಗೌರವಧನ, ಪ್ರೋತ್ಸಾಹಧನ ಪ್ರತೀ ತಿಂಗಳು ನಿಗದಿತ ಸಮಯಕ್ಕೆ ಬರುತ್ತಿಲ್ಲ. ಈಗಲೂ 3–4 ತಿಂಗಳ ಕೇಂದ್ರದ ಪ್ರೋತ್ಸಾಹಧನ ಬಾಕಿ ಇದೆ. 1–2 ತಿಂಗಳ ರಾಜ್ಯ ಸರ್ಕಾರದ ಗೌರವಧನ ಬಾಕಿ ಇದೆ. ಇದನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು’ ಎಂದರು.</p>.<p>‘ಆ್ಯಪ್ ಮೂಲಕ ದಾಖಲಾತಿ ಮಾಡಿಸುವುದನ್ನು ಕೈಬಿಡಬೇಕು. ಮೌಲ್ಯಮಾಪನದ ಹೆಸರಲ್ಲಿ ಆಶಾ ಗಳಿಗೆ ಆಗುತ್ತಿರುವ ಶೋಷಣೆ ನಿಲ್ಲಿಸಬೇಕು. ನಿವೃತ್ತಿ ಆಗಿರುವ ಆಶಾಗಳಿಗೆಇರುವ ಇಡುಗಂಟು ನೀಡಬೇಕು. ಆಶಾಸುಗಮಕಾರರನ್ನು ಸೂಕ್ತ ವೇತನ ದೊಂದಿಗೆ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಆಶಾ ನಿಧಿ ತಂತ್ರಾಂಶದಲ್ಲಿ ಆಶಾ ಸೇವೆಗಳನ್ನು ನಿಷ್ಕ್ರಿಯಗೊಳಿಸಿ ರುವುದರಿಂದ ಕಾರ್ಯಕರ್ತರಿಗೆ ಮಾಸಿಕ ₹ 500ರಿಂದ ₹1000 ವರೆಗೆ ಪ್ರೋತ್ಸಾಹಧನ ಕಡಿತವಾಗಿದೆ. ಈ ಸೇವೆ ಮುಂದುವರಿಸಬೇಕು’ ಎಂದರು.</p>.<p>ಸಂಘದ ಪ್ರಮುಖರಾದ ಮಹಾಲಕ್ಷ್ಮಿ, ಫರ್ಹಾನ, ದೀಪಾ, ಮುನಿರತ್ನ, ಭವ್ಯಾ, ಲಕ್ಷ್ಮಿದೇವಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-4-745281219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗೌರವ ಧನ ಹೆಚ್ಚಳವೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.</p>.<p>‘2025ರ ಜನವರಿಯಲ್ಲಿ ಮುಖ್ಯಮಂತ್ರಿ ಅವರೇ ಘೋಷಿಸಿದ ರೀತಿಯಲ್ಲಿ ಗೌರವ ಧನವನ್ನು ಕನಿಷ್ಠ ₹10 ಸಾವಿರ ನೀಡಲು ಕ್ರಮ ವಹಿಸ ಬೇಕು. ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ₹1,000 ಗೌರವ ಧನ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆ ಯರಿಗೆ ಹೆಚ್ಚಳ ಮಾಡಬೇಕು. ಬೇಡಿಕೆ ಗಳ ಕುರಿತು ಚರ್ಚಿಸಲು ಕೂಡಲೇ ಸಭೆ ಕರೆಯಬೇಕು’ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಟಿ.ಸಿ.ರಮಾ ಆಗ್ರಹಿಸಿದರು.</p>.<p>‘ಒಂದು ವರ್ಷದಿಂದ ಕಾರ್ಯಕರ್ತೆಯರಿಗೆ ಗೌರವಧನ, ಪ್ರೋತ್ಸಾಹಧನ ಪ್ರತೀ ತಿಂಗಳು ನಿಗದಿತ ಸಮಯಕ್ಕೆ ಬರುತ್ತಿಲ್ಲ. ಈಗಲೂ 3–4 ತಿಂಗಳ ಕೇಂದ್ರದ ಪ್ರೋತ್ಸಾಹಧನ ಬಾಕಿ ಇದೆ. 1–2 ತಿಂಗಳ ರಾಜ್ಯ ಸರ್ಕಾರದ ಗೌರವಧನ ಬಾಕಿ ಇದೆ. ಇದನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು’ ಎಂದರು.</p>.<p>‘ಆ್ಯಪ್ ಮೂಲಕ ದಾಖಲಾತಿ ಮಾಡಿಸುವುದನ್ನು ಕೈಬಿಡಬೇಕು. ಮೌಲ್ಯಮಾಪನದ ಹೆಸರಲ್ಲಿ ಆಶಾ ಗಳಿಗೆ ಆಗುತ್ತಿರುವ ಶೋಷಣೆ ನಿಲ್ಲಿಸಬೇಕು. ನಿವೃತ್ತಿ ಆಗಿರುವ ಆಶಾಗಳಿಗೆಇರುವ ಇಡುಗಂಟು ನೀಡಬೇಕು. ಆಶಾಸುಗಮಕಾರರನ್ನು ಸೂಕ್ತ ವೇತನ ದೊಂದಿಗೆ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಆಶಾ ನಿಧಿ ತಂತ್ರಾಂಶದಲ್ಲಿ ಆಶಾ ಸೇವೆಗಳನ್ನು ನಿಷ್ಕ್ರಿಯಗೊಳಿಸಿ ರುವುದರಿಂದ ಕಾರ್ಯಕರ್ತರಿಗೆ ಮಾಸಿಕ ₹ 500ರಿಂದ ₹1000 ವರೆಗೆ ಪ್ರೋತ್ಸಾಹಧನ ಕಡಿತವಾಗಿದೆ. ಈ ಸೇವೆ ಮುಂದುವರಿಸಬೇಕು’ ಎಂದರು.</p>.<p>ಸಂಘದ ಪ್ರಮುಖರಾದ ಮಹಾಲಕ್ಷ್ಮಿ, ಫರ್ಹಾನ, ದೀಪಾ, ಮುನಿರತ್ನ, ಭವ್ಯಾ, ಲಕ್ಷ್ಮಿದೇವಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-4-745281219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>