<p>ಬೆಂಗಳೂರು: ‘ರಾಜ್ಯದ ಯುವಕರಿಗೆ ನೆರವಾಗುವ ಉದ್ದೇಶದಿಂದ ಮಲ್ಲೇಶ್ವರ ದಲ್ಲಿ ಉದ್ಯೋಗ ಮೇಳವನ್ನು ಆಯೋಜಿ ಸಲಾಗಿತ್ತು’ ಎಂದು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಡಾ.ಸಿ.ಎನ್. ಅಶ್ವತ್ಥನಾರಾಯಣ ಫೌಂಡೇಷನ್ ಸೋಮವಾರ ಹಮ್ಮಿ ಕೊಂಡಿದ್ದ ಯುವೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಹಾಗೂ ಅವರಿಗೆ ನೆರವಾಗಲು ಉದ್ಯೋಗ ಮೇಳಗಳು ಸಹಕಾರಿಯಾಗಿವೆ. ಇಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗದ ಬಗ್ಗೆ ಮಾರ್ಗದರ್ಶನ ನೀಡಲಾಗಿದೆ. ನಮ್ಮ ಈ ಕಾರ್ಯಕ್ರಮಕ್ಕೆ ಹಲವಾರು ಸಂಘ–ಸಂಸ್ಥೆಗಳು ಕೈ ಜೋಡಿಸಿವೆ’ ಎಂದರು.</p>.<p>‘ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ದೊರೆತರೆ ಸದೃಢ ಸಮಾಜ ನಿರ್ಮಿಸಬಹುದು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉದ್ಯೋಗ ಅವಕಾಶ ಸೃಷ್ಟಿಸಲು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಲಕ್ಷಾಂತರ ಉದ್ಯೋಗಾವ ಕಾಶಗಳು ಸೃಷ್ಟಿ ಆಗಿವೆ. ಬಸವೇಶ್ವರರ ಜಯಂತಿಯ ದಿನವೇ ಈ ಮೇಳ ಆಯೋಜಿಸಲಾಗಿದೆ. ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಾತಿನಂತೆ ಸಮಾನತೆಯ ಸಮಾಜ ಕಟ್ಟಲು ಎಲ್ಲರೂ ಬದ್ಧರಾಗೋಣ’ ಎಂದು ಅವರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-4-913181910</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ರಾಜ್ಯದ ಯುವಕರಿಗೆ ನೆರವಾಗುವ ಉದ್ದೇಶದಿಂದ ಮಲ್ಲೇಶ್ವರ ದಲ್ಲಿ ಉದ್ಯೋಗ ಮೇಳವನ್ನು ಆಯೋಜಿ ಸಲಾಗಿತ್ತು’ ಎಂದು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಡಾ.ಸಿ.ಎನ್. ಅಶ್ವತ್ಥನಾರಾಯಣ ಫೌಂಡೇಷನ್ ಸೋಮವಾರ ಹಮ್ಮಿ ಕೊಂಡಿದ್ದ ಯುವೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಹಾಗೂ ಅವರಿಗೆ ನೆರವಾಗಲು ಉದ್ಯೋಗ ಮೇಳಗಳು ಸಹಕಾರಿಯಾಗಿವೆ. ಇಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗದ ಬಗ್ಗೆ ಮಾರ್ಗದರ್ಶನ ನೀಡಲಾಗಿದೆ. ನಮ್ಮ ಈ ಕಾರ್ಯಕ್ರಮಕ್ಕೆ ಹಲವಾರು ಸಂಘ–ಸಂಸ್ಥೆಗಳು ಕೈ ಜೋಡಿಸಿವೆ’ ಎಂದರು.</p>.<p>‘ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ದೊರೆತರೆ ಸದೃಢ ಸಮಾಜ ನಿರ್ಮಿಸಬಹುದು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉದ್ಯೋಗ ಅವಕಾಶ ಸೃಷ್ಟಿಸಲು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಲಕ್ಷಾಂತರ ಉದ್ಯೋಗಾವ ಕಾಶಗಳು ಸೃಷ್ಟಿ ಆಗಿವೆ. ಬಸವೇಶ್ವರರ ಜಯಂತಿಯ ದಿನವೇ ಈ ಮೇಳ ಆಯೋಜಿಸಲಾಗಿದೆ. ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಾತಿನಂತೆ ಸಮಾನತೆಯ ಸಮಾಜ ಕಟ್ಟಲು ಎಲ್ಲರೂ ಬದ್ಧರಾಗೋಣ’ ಎಂದು ಅವರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-4-913181910</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>