ಬಿ.ಎಸ್. ಯಡಿಯೂರಪ್ಪ ಅವರಿಗೆ ಬೇರೆ ಕೆಲಸ ಇಲ್ಲ. ಅದಕ್ಕಾಗಿ ಟೀಕೆ, ವಿರೋಧ, ಭಾಷಣ, ಹತ್ತು–ಹನ್ನೆರಡು ಮಂದಿಯನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ತಾನು ಮುಖ್ಯಮಂತ್ರಿಯಾಗಬಹುದು ಎಂದು ಅವರು ತಿಳಿದುಕೊಂಡಿದ್ದಾರೆ. ಅವರ ಪಕ್ಷದಲ್ಲಿಯೇ ಗುಂಪುಗಾರಿಕೆ ಇದೆ. ಅವರನ್ನು ಮುಖ್ಯಮಂತ್ರಿಯಾಗಲು ಆ ಪಕ್ಷದವರೇ ಬಿಡುವುದಿಲ್ಲ. ಅಲ್ಲದೇ ಯಡಿಯೂರಪ್ಪ ಅವರಿಗೂ ಹಿಂದಿನ ಶಕ್ತಿ ಈಗ ಇಲ್ಲ ಎಂದು ಟೀಕಿಸಿದರು.