<p>ಧಾರವಾಡ: ‘ರಾಜ್ಯ ಸರ್ಕಾರವು ಆರು ತಿಂಗಳಲ್ಲಿ 56,432 ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕು, ಇದೇ ವರ್ಷ ಇನ್ನೂ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಅಧ್ಯಕ್ಷ ಕಾಂತಕುಮಾರ್ ಒತ್ತಾಯಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘43 ಇಲಾಖೆಗಳಲ್ಲಿ ಖಾಲಿ 2.84 ಲಕ್ಷ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಬೇಕು. ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಒಟ್ಟಿಗೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>‘ನೇಮಕಾತಿ ಪ್ರಕ್ರಿಯೆ ನಿಟ್ಟಿನಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು, ಕಾಲಹರಣ ಮಾಡಬಾರದು. ಅಧಿಸೂಚನೆ ಪ್ರಕಟಿಸುವವರೆಗೆ ಹೋರಾಟ ಮಾಡುತ್ತೇವೆ. ಸರ್ಕಾರವು ಹೋರಾಟ ಮಾಡುವುದನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ’ ಎಂದು ದೂರಿದರು.</p>.<p>‘ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಪ್ರತಿಭಟನೆ (100 ಜನರ ಮಿತಿ) ನಡೆಸಲು ಕೋರ್ಟ್ ಸೂಚಿಸಿರುವ ಕುರಿತು ಮೇಲ್ಮನವಿ ಸಲ್ಲಿಸಿದ್ಧೇವೆ. ಧಾರವಾಡದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಮತ್ತೆ ಮನವಿ ಮಾಡಿದ್ದೇವೆ. ಈಗ ಕೋರ್ಟ್ ರಜೆ ಇದೆ’ ಎಂದು ಪ್ರತಿಕ್ರಿಯಿಸಿದರು.</p>.<p>ನಾಗಪ್ಪ ಹುಂಡಿ ಸುದ್ದಿಗೋಷ್ಠಿಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-24-667352188</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ರಾಜ್ಯ ಸರ್ಕಾರವು ಆರು ತಿಂಗಳಲ್ಲಿ 56,432 ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕು, ಇದೇ ವರ್ಷ ಇನ್ನೂ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಅಧ್ಯಕ್ಷ ಕಾಂತಕುಮಾರ್ ಒತ್ತಾಯಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘43 ಇಲಾಖೆಗಳಲ್ಲಿ ಖಾಲಿ 2.84 ಲಕ್ಷ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಬೇಕು. ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಒಟ್ಟಿಗೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>‘ನೇಮಕಾತಿ ಪ್ರಕ್ರಿಯೆ ನಿಟ್ಟಿನಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು, ಕಾಲಹರಣ ಮಾಡಬಾರದು. ಅಧಿಸೂಚನೆ ಪ್ರಕಟಿಸುವವರೆಗೆ ಹೋರಾಟ ಮಾಡುತ್ತೇವೆ. ಸರ್ಕಾರವು ಹೋರಾಟ ಮಾಡುವುದನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ’ ಎಂದು ದೂರಿದರು.</p>.<p>‘ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಪ್ರತಿಭಟನೆ (100 ಜನರ ಮಿತಿ) ನಡೆಸಲು ಕೋರ್ಟ್ ಸೂಚಿಸಿರುವ ಕುರಿತು ಮೇಲ್ಮನವಿ ಸಲ್ಲಿಸಿದ್ಧೇವೆ. ಧಾರವಾಡದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಮತ್ತೆ ಮನವಿ ಮಾಡಿದ್ದೇವೆ. ಈಗ ಕೋರ್ಟ್ ರಜೆ ಇದೆ’ ಎಂದು ಪ್ರತಿಕ್ರಿಯಿಸಿದರು.</p>.<p>ನಾಗಪ್ಪ ಹುಂಡಿ ಸುದ್ದಿಗೋಷ್ಠಿಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-24-667352188</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>