ಕರ್ನಾಟಕ ಲೋಕಸೇವಾ ಆಯೋಗವುಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವ್ಯಕ್ತಿತ್ವ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಿದೆ.
1:5ರ ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯ ದಿನಾಂಕವನ್ನು ಆಯೋಗ ಇನ್ನು ಪ್ರಕಟಿಸಿಲ್ಲ.
ಆಯೋಗದ ವೆಬ್ಸೈಟ್ನಲ್ಲಿಶೀಘ್ರದಲ್ಲೇ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿಗಳು ಪ್ರವೇಶ ಪತ್ರದ ಜತೆಗೆ, ಅಗತ್ಯ ಇತರೆ ದಾಖಲೆಗಳನ್ನು ತೆಗೆದುಕೊಂಡು ಪರೀಕ್ಷೆಗೆ ಹಾಕರಾಗಬೇಕು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.