<p><strong>ಜೈಪುರ</strong>: ಜೋಧ್ಪುರದ ಬೀದಿಗಳಲ್ಲಿ ಕಸ ಗುಡಿಸುತ್ತಿದ್ದ ಪೌರಕಾರ್ಮಿಕ ಮಹಿಳೆಯೊಬ್ಬರು ರಾಜಸ್ಥಾನದ ಆಡಳಿತಾತ್ಮಕ ಸೇವೆ(ಆರ್ಎಎಸ್) ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.</p>.<p>ಆಶಾ ಕಂದಾರ ಎಂಬ ಮಹಿಳೆಯು ತಮ್ಮ ಜೀವನ ನಿರ್ವಹಣೆಗಾಗಿ ಜೋಧ್ಪುರದಲ್ಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು 2018ರಲ್ಲಿ ನಡೆದ ಪ್ರತಿಷ್ಠಿತ ಆರ್ಎಎಸ್ ಪರೀಕ್ಷೆಗೆ ಹಾಜರಾಗಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಆರ್ಎಎಸ್ ಪರೀಕ್ಷೆಯ ಫಲಿತಾಂಶ ವಿಳಂಬವಾಗಿತ್ತು. ಎರಡು ದಿನಗಳ ಹಿಂದೆ ಫಲಿತಾಂಶ ಪ್ರಕಟವಾಗಿದ್ದು ಆಶಾ ಕಂದಾರ ಅವರು ಆರ್ಎಎಸ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಅವರಿಗೆ ಶೀಘ್ರದಲ್ಲೇ ಜಿಲ್ಲಾಧಿಕಾರಿ ಹುದ್ದೆ ದೊರೆಯಲಿದೆ ಎಂದು 'ಟೈಮ್ಸ್ ನೌ' ವರದಿ ಮಾಡಿದೆ.</p>.<p>ಎಂಟು ವರ್ಷಗಳ ಹಿಂದೆ ಪತಿಯಿಂದ ದೂರವಾಗಿರುವ ಆಶಾ ಕಂದಾರ ಅವರಿಗೆ ಇಬ್ಬರು ಮಕ್ಕಳನ್ನು ಸಾಕುವ ಜವಾಬ್ದಾರಿ ಇದೆ. ಬೇರೆ ವಿಧಿ ಇಲ್ಲದೇ ಜೋಧ್ಪುರ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದರು.</p>.<p>ಸಮಾಜದಲ್ಲಿ ತಾವು ಎದುರಿಸಿದ ತಾರತಮ್ಯವು ಅಂತಿಮವಾಗಿ ತಮ್ಮ ಆಲೋಚನೆಗಳನ್ನು ಬದಲಿಸಿಕೊಳ್ಳಲು ಪ್ರೇರಣೆಯಾಯಿತು ಎಂದು ಟೌಮ್ಸ್ ನೌಗೆ ನೀಡಿದ ಸಂದರ್ಶನದಲ್ಲಿ ಆಶಾ ಹೇಳಿದ್ದಾರೆ.</p>.<p>'ನಾನು ಐಎಎಸ್ ಅಧಿಕಾರಿಯಾಗಲು ಬಯಸಿದ್ದೆ. ಆದರೆ, ವಯಸ್ಸಿಗೆ ಸಂಬಂಧಿಸಿದ ನಿರ್ಬಂಧಗಳಿಂದಾಗಿ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಿಲ್ಲ' ಎಂದೂ ಆಶಾ ತಿಳಿಸಿದ್ದಾರೆ.</p>.<p>'ಈಗ ಪಡೆದಿರುವ ಹೊಸ ಹುದ್ದೆಯ ಮೂಲಕ ಉತ್ತಮ ಸಮಾಜವನ್ನು ನಿರ್ಮಿಸಲು ಶ್ರಮಿಸುತ್ತೇನೆ. ಅಗತ್ಯವಿರುವ ಜನರಿಗೆ ನಾನು ಸಹಾಯ ಮಾಡುತ್ತೇನೆ' ಎಂದು ಆಶಾ ಕಂದಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ಜೋಧ್ಪುರದ ಬೀದಿಗಳಲ್ಲಿ ಕಸ ಗುಡಿಸುತ್ತಿದ್ದ ಪೌರಕಾರ್ಮಿಕ ಮಹಿಳೆಯೊಬ್ಬರು ರಾಜಸ್ಥಾನದ ಆಡಳಿತಾತ್ಮಕ ಸೇವೆ(ಆರ್ಎಎಸ್) ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.</p>.<p>ಆಶಾ ಕಂದಾರ ಎಂಬ ಮಹಿಳೆಯು ತಮ್ಮ ಜೀವನ ನಿರ್ವಹಣೆಗಾಗಿ ಜೋಧ್ಪುರದಲ್ಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು 2018ರಲ್ಲಿ ನಡೆದ ಪ್ರತಿಷ್ಠಿತ ಆರ್ಎಎಸ್ ಪರೀಕ್ಷೆಗೆ ಹಾಜರಾಗಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಆರ್ಎಎಸ್ ಪರೀಕ್ಷೆಯ ಫಲಿತಾಂಶ ವಿಳಂಬವಾಗಿತ್ತು. ಎರಡು ದಿನಗಳ ಹಿಂದೆ ಫಲಿತಾಂಶ ಪ್ರಕಟವಾಗಿದ್ದು ಆಶಾ ಕಂದಾರ ಅವರು ಆರ್ಎಎಸ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಅವರಿಗೆ ಶೀಘ್ರದಲ್ಲೇ ಜಿಲ್ಲಾಧಿಕಾರಿ ಹುದ್ದೆ ದೊರೆಯಲಿದೆ ಎಂದು 'ಟೈಮ್ಸ್ ನೌ' ವರದಿ ಮಾಡಿದೆ.</p>.<p>ಎಂಟು ವರ್ಷಗಳ ಹಿಂದೆ ಪತಿಯಿಂದ ದೂರವಾಗಿರುವ ಆಶಾ ಕಂದಾರ ಅವರಿಗೆ ಇಬ್ಬರು ಮಕ್ಕಳನ್ನು ಸಾಕುವ ಜವಾಬ್ದಾರಿ ಇದೆ. ಬೇರೆ ವಿಧಿ ಇಲ್ಲದೇ ಜೋಧ್ಪುರ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದರು.</p>.<p>ಸಮಾಜದಲ್ಲಿ ತಾವು ಎದುರಿಸಿದ ತಾರತಮ್ಯವು ಅಂತಿಮವಾಗಿ ತಮ್ಮ ಆಲೋಚನೆಗಳನ್ನು ಬದಲಿಸಿಕೊಳ್ಳಲು ಪ್ರೇರಣೆಯಾಯಿತು ಎಂದು ಟೌಮ್ಸ್ ನೌಗೆ ನೀಡಿದ ಸಂದರ್ಶನದಲ್ಲಿ ಆಶಾ ಹೇಳಿದ್ದಾರೆ.</p>.<p>'ನಾನು ಐಎಎಸ್ ಅಧಿಕಾರಿಯಾಗಲು ಬಯಸಿದ್ದೆ. ಆದರೆ, ವಯಸ್ಸಿಗೆ ಸಂಬಂಧಿಸಿದ ನಿರ್ಬಂಧಗಳಿಂದಾಗಿ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಿಲ್ಲ' ಎಂದೂ ಆಶಾ ತಿಳಿಸಿದ್ದಾರೆ.</p>.<p>'ಈಗ ಪಡೆದಿರುವ ಹೊಸ ಹುದ್ದೆಯ ಮೂಲಕ ಉತ್ತಮ ಸಮಾಜವನ್ನು ನಿರ್ಮಿಸಲು ಶ್ರಮಿಸುತ್ತೇನೆ. ಅಗತ್ಯವಿರುವ ಜನರಿಗೆ ನಾನು ಸಹಾಯ ಮಾಡುತ್ತೇನೆ' ಎಂದು ಆಶಾ ಕಂದಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>