<p>ಹಳಿಯಾಳ: ‘ತಾಂತ್ರಿಕ ಜ್ಞಾನ, ಪ್ರಾಮಾಣಿಕತೆ, ಶಿಸ್ತಿನ ಜೊತೆ ನಿರಂತರ ಅಧ್ಯಯನವೇ ದೀರ್ಘಕಾಲಿಕ ಯಶಸ್ಸಿಗೆ ಕಾರಣವಾಗುತ್ತದೆ’ ಎಂದು ಕೆಪಿಸಿ, ಗಣೇಶಗುಡಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ಘೋಷಣಟ್ಟಿ ಹೇಳಿದರು.</p>.<p>ಇಲ್ಲಿನ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿಯಲ್ಲಿ ಬುಧವಾರ ಆಯೋಜಿಸಿದ್ದ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್, ರಿಪೇರಿ ಮತ್ತು ಸರ್ವಿಸಿಂಗ್ ಉಚಿತ ತರಬೇತಿ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.</p>.<p>‘ತರಬೇತಿಯಲ್ಲಿ ಕಲಿತ ಕೌಶಲಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ. ಇಂದಿನ ದಿನಗಳಲ್ಲಿ ರಿಪೇರಿ ಮತ್ತು ಸರ್ವಿಸಿಂಗ್ ಕ್ಷೇತ್ರದಲ್ಲಿ ಪರಿಣಿತ ತಾಂತ್ರಿಕರಿಗೆ ಹೆಚ್ಚಿನ ಬೇಡಿಕೆ ಇದೆ. ಸ್ಥಳೀಯ ಉದ್ಯಮಗಳ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು’ ಎಂದರು.</p>.<p>ಸಂಸ್ಥೆಯ ಯೋಜನಾ ಸಂಯೋಜಕ ವಿನಾಯಕ ಚವ್ವಾಣ ಮಾತನಾಡಿ, ‘ಗ್ರಾಮೀಣ ಯುವಕರಿಗೆ ತಾಂತ್ರಿಕ ಕೌಶಲಗಳನ್ನು ನೀಡುವ ಮೂಲಕ ಸ್ವಯಂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.</p>.<p>ಉದ್ಯಮಿ ಆಕಾಶ ಪೋಕಲೆ ಮಾತನಾಡಿದರು. ಉಪನ್ಯಾಸಕ ಕೊಂಡು ಕೋಕರೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-20-1926342884</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಳಿಯಾಳ: ‘ತಾಂತ್ರಿಕ ಜ್ಞಾನ, ಪ್ರಾಮಾಣಿಕತೆ, ಶಿಸ್ತಿನ ಜೊತೆ ನಿರಂತರ ಅಧ್ಯಯನವೇ ದೀರ್ಘಕಾಲಿಕ ಯಶಸ್ಸಿಗೆ ಕಾರಣವಾಗುತ್ತದೆ’ ಎಂದು ಕೆಪಿಸಿ, ಗಣೇಶಗುಡಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ಘೋಷಣಟ್ಟಿ ಹೇಳಿದರು.</p>.<p>ಇಲ್ಲಿನ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿಯಲ್ಲಿ ಬುಧವಾರ ಆಯೋಜಿಸಿದ್ದ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್, ರಿಪೇರಿ ಮತ್ತು ಸರ್ವಿಸಿಂಗ್ ಉಚಿತ ತರಬೇತಿ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.</p>.<p>‘ತರಬೇತಿಯಲ್ಲಿ ಕಲಿತ ಕೌಶಲಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ. ಇಂದಿನ ದಿನಗಳಲ್ಲಿ ರಿಪೇರಿ ಮತ್ತು ಸರ್ವಿಸಿಂಗ್ ಕ್ಷೇತ್ರದಲ್ಲಿ ಪರಿಣಿತ ತಾಂತ್ರಿಕರಿಗೆ ಹೆಚ್ಚಿನ ಬೇಡಿಕೆ ಇದೆ. ಸ್ಥಳೀಯ ಉದ್ಯಮಗಳ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು’ ಎಂದರು.</p>.<p>ಸಂಸ್ಥೆಯ ಯೋಜನಾ ಸಂಯೋಜಕ ವಿನಾಯಕ ಚವ್ವಾಣ ಮಾತನಾಡಿ, ‘ಗ್ರಾಮೀಣ ಯುವಕರಿಗೆ ತಾಂತ್ರಿಕ ಕೌಶಲಗಳನ್ನು ನೀಡುವ ಮೂಲಕ ಸ್ವಯಂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.</p>.<p>ಉದ್ಯಮಿ ಆಕಾಶ ಪೋಕಲೆ ಮಾತನಾಡಿದರು. ಉಪನ್ಯಾಸಕ ಕೊಂಡು ಕೋಕರೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-20-1926342884</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>