<p>ಹುಬ್ಬಳ್ಳಿ: ಇಲ್ಲಿನ ಐಇಎಂಎಸ್ ಎಂಬಿಎ ಕಾಲೇಜಿನಲ್ಲಿ ಭಾನುವಾರ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಮೇಳ ಉದ್ಘಾಟಿಸಿದ ಆರ್ಎನ್ಎಸ್ ಮೋಟಾರ್ಸ್ನ ಮಾನವ ಸಂಪನ್ಮೂಲ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಮಾತನಾಡಿ, ‘ನಿರಂತರ ಕಲಿಕೆ, ಉತ್ಸಾಹ, ಕೌಶಲವನ್ನು ಉದ್ಯಮ ಕ್ಷೇತ್ರವು ಉದ್ಯೋಗಾಕಾಂಕ್ಷಿಗಳಿಂದ ನಿರೀಕ್ಷಿಸುತ್ತದೆ’ ಎಂದರು.</p>.<p>‘ವೃತ್ತಿ ಜೀವನದ ಆರಂಭಿಕ ಹಂತಗಳಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕು. ಬದ್ಧತೆಯಿಂದ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಹೇಳಿದರು.</p>.<p>ಸಂಸ್ಥೆಯ ನಿರ್ದೇಶಕ ವೀರಣ್ಣ ಡಿ.ಕೆ., ಅಧ್ಯಕ್ಷ ಎನ್.ಎ.ಚರಂತಿಮಠ ಮಾತನಾಡಿದರು. ಮುತ್ತೂಟ್ ಫೈನಾನ್ಸ್, ಆಕ್ಸಿಸ್ ಬ್ಯಾಂಕ್, ಕೋಟಕ್ ಮಹಿಂದ್ರಾ, ಫ್ಲಿಪ್ಕಾರ್ಟ್, ನೈಕಾ, ಅಡೆಕೊ, ಎಚ್ಡಿಎಫ್ಸಿ ಬ್ಯಾಂಕ್, ಟಾಟಾ ಎಲೆಕ್ಟ್ರಾನಿಕ್ಸ್, ಆರ್ಎನ್ಎಸ್ ಮೋಟಾರ್ಸ್ ಸೇರಿದಂತೆ 33 ಕಂಪನಿಗಳು, 300 ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.</p>.<p>ಸಂಸ್ಥೆಯ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಮೇಳವನ್ನು ಆಯೋಜಿಸಲಾಗಿತ್ತು. ಪ್ರೊ.ವಿ.ವಿ.ಹಿರೇಮಠ, ಪ್ರೊ.ಲಾಜರಸ್ ಚೆಲ್ಲಿ, ಪ್ರೊ.ವಿಶಾಲ್ ಪಾಟೀಲ, ವಾಣಿ ಪಿಸೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-24-1152470762</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಇಲ್ಲಿನ ಐಇಎಂಎಸ್ ಎಂಬಿಎ ಕಾಲೇಜಿನಲ್ಲಿ ಭಾನುವಾರ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಮೇಳ ಉದ್ಘಾಟಿಸಿದ ಆರ್ಎನ್ಎಸ್ ಮೋಟಾರ್ಸ್ನ ಮಾನವ ಸಂಪನ್ಮೂಲ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಮಾತನಾಡಿ, ‘ನಿರಂತರ ಕಲಿಕೆ, ಉತ್ಸಾಹ, ಕೌಶಲವನ್ನು ಉದ್ಯಮ ಕ್ಷೇತ್ರವು ಉದ್ಯೋಗಾಕಾಂಕ್ಷಿಗಳಿಂದ ನಿರೀಕ್ಷಿಸುತ್ತದೆ’ ಎಂದರು.</p>.<p>‘ವೃತ್ತಿ ಜೀವನದ ಆರಂಭಿಕ ಹಂತಗಳಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕು. ಬದ್ಧತೆಯಿಂದ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಹೇಳಿದರು.</p>.<p>ಸಂಸ್ಥೆಯ ನಿರ್ದೇಶಕ ವೀರಣ್ಣ ಡಿ.ಕೆ., ಅಧ್ಯಕ್ಷ ಎನ್.ಎ.ಚರಂತಿಮಠ ಮಾತನಾಡಿದರು. ಮುತ್ತೂಟ್ ಫೈನಾನ್ಸ್, ಆಕ್ಸಿಸ್ ಬ್ಯಾಂಕ್, ಕೋಟಕ್ ಮಹಿಂದ್ರಾ, ಫ್ಲಿಪ್ಕಾರ್ಟ್, ನೈಕಾ, ಅಡೆಕೊ, ಎಚ್ಡಿಎಫ್ಸಿ ಬ್ಯಾಂಕ್, ಟಾಟಾ ಎಲೆಕ್ಟ್ರಾನಿಕ್ಸ್, ಆರ್ಎನ್ಎಸ್ ಮೋಟಾರ್ಸ್ ಸೇರಿದಂತೆ 33 ಕಂಪನಿಗಳು, 300 ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.</p>.<p>ಸಂಸ್ಥೆಯ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಮೇಳವನ್ನು ಆಯೋಜಿಸಲಾಗಿತ್ತು. ಪ್ರೊ.ವಿ.ವಿ.ಹಿರೇಮಠ, ಪ್ರೊ.ಲಾಜರಸ್ ಚೆಲ್ಲಿ, ಪ್ರೊ.ವಿಶಾಲ್ ಪಾಟೀಲ, ವಾಣಿ ಪಿಸೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-24-1152470762</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>