<p>ಹುಬ್ಬಳ್ಳಿ: ‘ವ್ಯಕ್ತಿಯಲ್ಲಿ ಎಷ್ಟೇ ಪ್ರತಿಭೆ ಇದ್ದರೂ ಪರಿಶ್ರಮವೂ ಅಗತ್ಯವಿರುತ್ತದೆ. ಪ್ರಾಮಾಣಿಕತೆ ಹಾಗೂ ಪರಿಶ್ರಮವನ್ನೇ ಎಲ್ಲ ಕ್ಷೇತ್ರಗಳು ಬಯಸುತ್ತವೆ’ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪನ್ವಾರ್ ಹೇಳಿದರು.</p>.<p>ಇಲ್ಲಿನ ವಿದ್ಯಾನಗರದ ಕೆಎಲ್ಇ ಸಂಸ್ಥೆಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಆ್ಯಂಡ್ ರಿಸರ್ಚ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮ್ಯಾಡ್ಸ್ ಮೀಟ್–ಪದವಿ ವಿದ್ಯಾರ್ಥಿಗಳಿಗಾಗಿ ನವೋದ್ಯಮ ಉತ್ಸವ’ದಲ್ಲಿ ಮಾತನಾಡಿದರು.</p>.<p>‘ಉದ್ಯಮ ರಂಗದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಕ್ಷೇತ್ರದಲ್ಲಿನ ಸಮಸ್ಯೆ ಗುರುತಿಸಿ, ಮಾನವೀಯ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳಬೇಕು. ಉದ್ಯಮಿಗಳು ವೈಫಲ್ಯವನ್ನೂ ಸ್ವೀಕರಿಸಬೇಕು. ಪ್ರತಿದಿನ ಪರಿಶ್ರಮದಿಂದ ಕೆಲಸ ನಿರ್ವಹಿಸುವುದೇ ಯಶಸ್ಸಿನ ಸೂತ್ರ’ ಎಂದರು.</p>.<p>‘ಆಧುನಿಕ ತಂತ್ರಜ್ಞಾನ ಅನೇಕ ಅವಕಾಶಗಳನ್ನು ನೀಡಿದರೂ, ನಾವೇನು ಮಾಡುತ್ತೇವೆ ಎಂಬುದೇ ಅಂತಿಮವಾಗಿರುತ್ತದೆ. ಯಾವುದೇ ಕ್ಷೇತ್ರದಲ್ಲಿ ಉತ್ತಮ ಆಲೋಚನೆಯೊಂದಿಗೆ ಕಾರ್ಯಪ್ರವೃತ್ತರಾಗಿ. ಆತ್ಮವಿಶ್ವಾಸ, ಸಮಾಜದ ಬಗ್ಗೆ ಕಾಳಜಿ, ಅಂದುಕೊಂಡಿದ್ದನ್ನು ಸಾಧಿಸುವ ಹಠ ಅತ್ಯವಶ್ಯ’ ಎಂದು ತಿಳಿಸಿದರು.</p>.<p>ಸಂಸ್ಥೆಯ ನಿರ್ದೇಶಕ ರಾಜೇಂದ್ರಪ್ರಸಾದ್ ಹನಗಂಡಿ ಮಾತನಾಡಿ, ‘ಸಾಮಾಜಿಕ ಸಮಸ್ಯೆ ಪರಿಹರಿಸಲು, ಜನರಿಗೆ ನೆರವಾಗುವ ಉದ್ದೇಶದಿಂದ ಸ್ಥಾಪಿಸುವ ಉದ್ಯಮ ಯಶಸ್ವಿಯಾಗುತ್ತದೆ. ದೇಶದಲ್ಲಿ ಸದ್ಯ 1.56 ಲಕ್ಷ ನವೋದ್ಯಮಗಳಿದ್ದು, ಹೊಸ ಆಲೋಚನೆ ಉಳ್ಳವರಿಗೆ ಇದು ಸಕಾಲ. ಆದರೆ, ತಪ್ಪುಗಳಾದಾಗ ಹಿಂಜರಿಯಬಾರದು; ಮತ್ತದೇ ತಪ್ಪುಗಳನ್ನು ಮಾಡಬಾರದು’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದ ಸಂಯೋಜಕಿ ಪ್ರೊ.ಅರುಣಾ ಬಟ್ಟೂರ ಸಹ ಪ್ರಾಧ್ಯಾಪಕ ಅಮಿತ್ ಅಂಗಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-24-480063989</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ವ್ಯಕ್ತಿಯಲ್ಲಿ ಎಷ್ಟೇ ಪ್ರತಿಭೆ ಇದ್ದರೂ ಪರಿಶ್ರಮವೂ ಅಗತ್ಯವಿರುತ್ತದೆ. ಪ್ರಾಮಾಣಿಕತೆ ಹಾಗೂ ಪರಿಶ್ರಮವನ್ನೇ ಎಲ್ಲ ಕ್ಷೇತ್ರಗಳು ಬಯಸುತ್ತವೆ’ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪನ್ವಾರ್ ಹೇಳಿದರು.</p>.<p>ಇಲ್ಲಿನ ವಿದ್ಯಾನಗರದ ಕೆಎಲ್ಇ ಸಂಸ್ಥೆಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಆ್ಯಂಡ್ ರಿಸರ್ಚ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮ್ಯಾಡ್ಸ್ ಮೀಟ್–ಪದವಿ ವಿದ್ಯಾರ್ಥಿಗಳಿಗಾಗಿ ನವೋದ್ಯಮ ಉತ್ಸವ’ದಲ್ಲಿ ಮಾತನಾಡಿದರು.</p>.<p>‘ಉದ್ಯಮ ರಂಗದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಕ್ಷೇತ್ರದಲ್ಲಿನ ಸಮಸ್ಯೆ ಗುರುತಿಸಿ, ಮಾನವೀಯ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳಬೇಕು. ಉದ್ಯಮಿಗಳು ವೈಫಲ್ಯವನ್ನೂ ಸ್ವೀಕರಿಸಬೇಕು. ಪ್ರತಿದಿನ ಪರಿಶ್ರಮದಿಂದ ಕೆಲಸ ನಿರ್ವಹಿಸುವುದೇ ಯಶಸ್ಸಿನ ಸೂತ್ರ’ ಎಂದರು.</p>.<p>‘ಆಧುನಿಕ ತಂತ್ರಜ್ಞಾನ ಅನೇಕ ಅವಕಾಶಗಳನ್ನು ನೀಡಿದರೂ, ನಾವೇನು ಮಾಡುತ್ತೇವೆ ಎಂಬುದೇ ಅಂತಿಮವಾಗಿರುತ್ತದೆ. ಯಾವುದೇ ಕ್ಷೇತ್ರದಲ್ಲಿ ಉತ್ತಮ ಆಲೋಚನೆಯೊಂದಿಗೆ ಕಾರ್ಯಪ್ರವೃತ್ತರಾಗಿ. ಆತ್ಮವಿಶ್ವಾಸ, ಸಮಾಜದ ಬಗ್ಗೆ ಕಾಳಜಿ, ಅಂದುಕೊಂಡಿದ್ದನ್ನು ಸಾಧಿಸುವ ಹಠ ಅತ್ಯವಶ್ಯ’ ಎಂದು ತಿಳಿಸಿದರು.</p>.<p>ಸಂಸ್ಥೆಯ ನಿರ್ದೇಶಕ ರಾಜೇಂದ್ರಪ್ರಸಾದ್ ಹನಗಂಡಿ ಮಾತನಾಡಿ, ‘ಸಾಮಾಜಿಕ ಸಮಸ್ಯೆ ಪರಿಹರಿಸಲು, ಜನರಿಗೆ ನೆರವಾಗುವ ಉದ್ದೇಶದಿಂದ ಸ್ಥಾಪಿಸುವ ಉದ್ಯಮ ಯಶಸ್ವಿಯಾಗುತ್ತದೆ. ದೇಶದಲ್ಲಿ ಸದ್ಯ 1.56 ಲಕ್ಷ ನವೋದ್ಯಮಗಳಿದ್ದು, ಹೊಸ ಆಲೋಚನೆ ಉಳ್ಳವರಿಗೆ ಇದು ಸಕಾಲ. ಆದರೆ, ತಪ್ಪುಗಳಾದಾಗ ಹಿಂಜರಿಯಬಾರದು; ಮತ್ತದೇ ತಪ್ಪುಗಳನ್ನು ಮಾಡಬಾರದು’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದ ಸಂಯೋಜಕಿ ಪ್ರೊ.ಅರುಣಾ ಬಟ್ಟೂರ ಸಹ ಪ್ರಾಧ್ಯಾಪಕ ಅಮಿತ್ ಅಂಗಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-24-480063989</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>