<p>ಹುಣಸೂರು: ಮಹಿಳೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ವಯಂ ಉದ್ಯೋಗ ಹೊಂದಬೇಕಿದ್ದು, ಆ ದಿಕ್ಕಿನಲ್ಲಿ ವಿವೇಕ ಗ್ರಾಮೀಣ ಜೀವನಧಾರ ಕೇಂದ್ರ ಹಲವು ವರ್ಷಗಳಿಂದ ವಿವಿಧ ಕೌಶಲ ತರಬೇತಿ ನೀಡುತ್ತಿದೆ ಎಂದು ತರಬೇತಿ ಶಿಬಿರದ ಸಂಯೋಜಕ ರಾಜು ಹೇಳಿದರು.</p>.<p>ನಗರದ ಕೇಂದ್ರೀಯ ಕಚೇರಿಯಲ್ಲಿ ಈಚೆಗೆ ಬ್ಯೂಟಿಷಿಯನ್ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.</p>.<p>ಕೇಂದ್ರದಲ್ಲಿ ಹಲವು ವರ್ಷಗಳಿಂದ ವಿವಿಧ ತರಬೇತಿಯನ್ನು ಸಂಬಂಧಿಸಿದ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ತರಬೇತಿ ಮತ್ತು ಸರ್ಕಾರದ ಯೋಜನೆಗಳ ಪರಿಚಯ ಮಾಡಿಸುವ ಕೆಲಸ ನಿರಂತರವಾಗಿ ನಡೆಸಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆದ ಬಹುತೇಕ ಶಿಬಿರಾರ್ಥಿಗಳು ಸ್ವಯಂ ಉದ್ಯೋಗ ಮಾಡುತ್ತಿದ್ದಾರೆ ಎಂದರು.</p>.<p>ಆರೋಗ್ಯ ಇಲಾಖೆ ತಾಲ್ಲೂಕು ಅಧಿಕಾರಿ ರಾಜೇಶ್ವರಿ, ‘ಮೂರು ತಿಂಗಳ ಅವಧಿಯಲ್ಲಿ ಕಲಿತ ವಿದ್ಯೆಯನ್ನು ಮರೆಯದೆ ನಿಮ್ಮ ಆರ್ಥಿಕ ಭದ್ರತೆಗೆ ಒತ್ತು ನೀಡುವ ಮೂಲಕ ಸಬಲರಾಗಬೇಕು. ಆರ್ಥಿಕ ಸಬಲೀಕರಣದೊಂದಿಗೆ ಆರೋಗ್ಯ ಕುಟುಂಬವನ್ನು ರೂಪಿಸಿಕೊಳ್ಳುವತ್ತ ಗಮನ ನೀಡಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ಸೋಮಯ್ಯ ಮಾತನಾಡಿ, ‘ಮಹಿಳೆಯರು ಪುರುಷರಿಗೆ ಸರಿಸಮನಾಗಿ ಬದುಕುವ ಎಲ್ಲಾ ಅವಕಾಶಗಳನ್ನು ಸರ್ಕಾರ ರೂಪಿಸಿದೆ. ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಪಡೆದು ಅದರ ಲಾಭವನ್ನು ಪಡೆದು ಹೊಸ ಬದುಕು ಕಟ್ಟಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೃಷ್ಣಕುಮಾರ್, ಕೆಂಚನಹಳ್ಳಿ ವಿವೇಕಾನಂದ ಯೂತ್ ಮೂಮೆಂಟ್ ವ್ಯವಸ್ಥಾಪಕ ರವಿಕುಮಾರ್, ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರದ ಚಂದ್ರೇಶ್, ಮಾದನಾಯಕ, ರೇಖಾ, ಹರ್ಷಿತಾ, ತರಬೇತಿ ಶಿಕ್ಷಕರಾದ ಗೀತಾ,ಪಲ್ಲವಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-38-1609538997</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ಮಹಿಳೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ವಯಂ ಉದ್ಯೋಗ ಹೊಂದಬೇಕಿದ್ದು, ಆ ದಿಕ್ಕಿನಲ್ಲಿ ವಿವೇಕ ಗ್ರಾಮೀಣ ಜೀವನಧಾರ ಕೇಂದ್ರ ಹಲವು ವರ್ಷಗಳಿಂದ ವಿವಿಧ ಕೌಶಲ ತರಬೇತಿ ನೀಡುತ್ತಿದೆ ಎಂದು ತರಬೇತಿ ಶಿಬಿರದ ಸಂಯೋಜಕ ರಾಜು ಹೇಳಿದರು.</p>.<p>ನಗರದ ಕೇಂದ್ರೀಯ ಕಚೇರಿಯಲ್ಲಿ ಈಚೆಗೆ ಬ್ಯೂಟಿಷಿಯನ್ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.</p>.<p>ಕೇಂದ್ರದಲ್ಲಿ ಹಲವು ವರ್ಷಗಳಿಂದ ವಿವಿಧ ತರಬೇತಿಯನ್ನು ಸಂಬಂಧಿಸಿದ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ತರಬೇತಿ ಮತ್ತು ಸರ್ಕಾರದ ಯೋಜನೆಗಳ ಪರಿಚಯ ಮಾಡಿಸುವ ಕೆಲಸ ನಿರಂತರವಾಗಿ ನಡೆಸಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆದ ಬಹುತೇಕ ಶಿಬಿರಾರ್ಥಿಗಳು ಸ್ವಯಂ ಉದ್ಯೋಗ ಮಾಡುತ್ತಿದ್ದಾರೆ ಎಂದರು.</p>.<p>ಆರೋಗ್ಯ ಇಲಾಖೆ ತಾಲ್ಲೂಕು ಅಧಿಕಾರಿ ರಾಜೇಶ್ವರಿ, ‘ಮೂರು ತಿಂಗಳ ಅವಧಿಯಲ್ಲಿ ಕಲಿತ ವಿದ್ಯೆಯನ್ನು ಮರೆಯದೆ ನಿಮ್ಮ ಆರ್ಥಿಕ ಭದ್ರತೆಗೆ ಒತ್ತು ನೀಡುವ ಮೂಲಕ ಸಬಲರಾಗಬೇಕು. ಆರ್ಥಿಕ ಸಬಲೀಕರಣದೊಂದಿಗೆ ಆರೋಗ್ಯ ಕುಟುಂಬವನ್ನು ರೂಪಿಸಿಕೊಳ್ಳುವತ್ತ ಗಮನ ನೀಡಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ಸೋಮಯ್ಯ ಮಾತನಾಡಿ, ‘ಮಹಿಳೆಯರು ಪುರುಷರಿಗೆ ಸರಿಸಮನಾಗಿ ಬದುಕುವ ಎಲ್ಲಾ ಅವಕಾಶಗಳನ್ನು ಸರ್ಕಾರ ರೂಪಿಸಿದೆ. ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಪಡೆದು ಅದರ ಲಾಭವನ್ನು ಪಡೆದು ಹೊಸ ಬದುಕು ಕಟ್ಟಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೃಷ್ಣಕುಮಾರ್, ಕೆಂಚನಹಳ್ಳಿ ವಿವೇಕಾನಂದ ಯೂತ್ ಮೂಮೆಂಟ್ ವ್ಯವಸ್ಥಾಪಕ ರವಿಕುಮಾರ್, ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರದ ಚಂದ್ರೇಶ್, ಮಾದನಾಯಕ, ರೇಖಾ, ಹರ್ಷಿತಾ, ತರಬೇತಿ ಶಿಕ್ಷಕರಾದ ಗೀತಾ,ಪಲ್ಲವಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-38-1609538997</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>