<p>ಸಿದ್ದಾಪುರ: ‘ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿಗಳಾಗಬೇಕು. ಸಂಜೀವಿನಿ ಒಕ್ಕೂಟದ ಮೂಲಕ ಮನೆಯಲ್ಲಿ ಜೇನು ಕೃಷಿ ಮಾಡಿ, ಜೇನುತುಪ್ಪ ಮಾರಾಟ ಮಾಡುತ್ತಿರುವುದು ಶ್ಲಾಘನೀಯ’ ಎಂದು ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಇಒ ರಾಜೇಶ್ ಹೇಳಿದರು.</p>.<p>ಗ್ರಾಮದ ಮಹಿಳೆಯರು ಮನೆಯಲ್ಲಿ ಜೇನುಕೃಷಿ ಮಾಡಿ ಸಿದ್ಧಪಡಿಸಲಾದ ಜೇನುತುಪ್ಪ ಮಾರಾಟಕ್ಕೆ ಇಲ್ಲಿನ ಸಂಜೀವಿನಿ ಒಕ್ಕೂಟ ಮತ್ತು ಬೆಂಗಳೂರಿನ ಇಂಡಸ್ಟ್ರಿ ಫೌಂಡೇಷನ್ ವತಿಯಿಂದ ಸಿದ್ದಾಪುರದ ಗ್ರಾ.ಪಂ. ಸಭಾಂಗಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಂಜೀವಿನಿ ಒಕ್ಕೂಟ ಪ್ರಮುಖರಾದ ಯಮುನಾ ಮಾತನಾಡಿ, ‘ಸಿದ್ದಾಪುರದ ಸಂಜೀವಿನಿ ಒಕ್ಕೂಟ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಯನ್ನು ರೂಪಿಸಿದೆ. ಮನೆಯಲ್ಲಿ ತಿಂಡಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಇದೀಗ ಜೇನುತುಪ್ಪ ಮಾರಾಟ ಆರಂಭಿಸಿದೆ’ ಎಂದರು.</p>.<p>ಸಿದ್ದಾಪುರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ಜಿಲ್ಲಾ ವ್ಯವಸ್ಥಾಪಕಿ ಚಾಂದಿನಿ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಾದ ರೀನಾ ತುಳಸಿ, ಸುಮತಿ, ವಸಂತಿ, ಇಂದಿರಾ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪಳನಿ ಸ್ವಾಮಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-51-93926231</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ‘ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿಗಳಾಗಬೇಕು. ಸಂಜೀವಿನಿ ಒಕ್ಕೂಟದ ಮೂಲಕ ಮನೆಯಲ್ಲಿ ಜೇನು ಕೃಷಿ ಮಾಡಿ, ಜೇನುತುಪ್ಪ ಮಾರಾಟ ಮಾಡುತ್ತಿರುವುದು ಶ್ಲಾಘನೀಯ’ ಎಂದು ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಇಒ ರಾಜೇಶ್ ಹೇಳಿದರು.</p>.<p>ಗ್ರಾಮದ ಮಹಿಳೆಯರು ಮನೆಯಲ್ಲಿ ಜೇನುಕೃಷಿ ಮಾಡಿ ಸಿದ್ಧಪಡಿಸಲಾದ ಜೇನುತುಪ್ಪ ಮಾರಾಟಕ್ಕೆ ಇಲ್ಲಿನ ಸಂಜೀವಿನಿ ಒಕ್ಕೂಟ ಮತ್ತು ಬೆಂಗಳೂರಿನ ಇಂಡಸ್ಟ್ರಿ ಫೌಂಡೇಷನ್ ವತಿಯಿಂದ ಸಿದ್ದಾಪುರದ ಗ್ರಾ.ಪಂ. ಸಭಾಂಗಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಂಜೀವಿನಿ ಒಕ್ಕೂಟ ಪ್ರಮುಖರಾದ ಯಮುನಾ ಮಾತನಾಡಿ, ‘ಸಿದ್ದಾಪುರದ ಸಂಜೀವಿನಿ ಒಕ್ಕೂಟ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಯನ್ನು ರೂಪಿಸಿದೆ. ಮನೆಯಲ್ಲಿ ತಿಂಡಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಇದೀಗ ಜೇನುತುಪ್ಪ ಮಾರಾಟ ಆರಂಭಿಸಿದೆ’ ಎಂದರು.</p>.<p>ಸಿದ್ದಾಪುರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ಜಿಲ್ಲಾ ವ್ಯವಸ್ಥಾಪಕಿ ಚಾಂದಿನಿ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಾದ ರೀನಾ ತುಳಸಿ, ಸುಮತಿ, ವಸಂತಿ, ಇಂದಿರಾ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪಳನಿ ಸ್ವಾಮಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-51-93926231</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>