<p>ಮೈಸೂರು: ‘ಗ್ರಂಥಾಲಯ ವಿದ್ಯಾರ್ಥಿಗಳಿಗೆ ಅನೇಕ ಉದ್ಯೋಗ ಅವಕಾಶಗಳಿವೆ. ಅವುಗಳ ಮಾಹಿತಿ ಪಡೆದು ಬಳಸಿಕೊಳ್ಳಬೇಕು’ ಎಂದು ಬೆಂಗಳೂರು ರಾಮನ್ ಸಂಶೋಧನಾ ಸಂಸ್ಥೆಯ ನಿವೃತ್ತ ಗ್ರಂಥಪಾಲಕರಾದ ಡಾ.ಬಿ.ಎಂ.ಮೀರಾ ತಿಳಿಸಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ಮೈಸೂರು ವಿವಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿದ್ಯಾರ್ಥಿಗಳ ಸಂಘದ 2025– 26ನೇ ಸಾಲಿನ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಹಲವು ವರ್ಷಗಳಿಂದ ಮೈಸೂರು ವಿವಿ ಗ್ರಂಥಾಲಯ ವಿಭಾಗದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಿ, ವಿದ್ಯಾರ್ಥಿಗಳಿಗೆ ಬೇಕಾದ ಮಾಹಿತಿ ಒದಗಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಮುಲಿಸಾದ ಶಿಕ್ಷಕ ಸಲಹೆಗಾರ ಎಂ.ಸುನೀಲ್ ಕುಮಾರ್ ವರದಿ ಮಂಡಿಸಿದರು. ಖಜಾಂಚಿ ಡಿ.ಸುಪ್ರಿತ ಅವರು ಸಂಘಟನೆಯ ಖರ್ಚು-ವೆಚ್ಚ ಮಂಡಿಸಿದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು. ಮೈಸೂರು ವಿವಿ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಜಿ.ಆರ್.ಜನಾರ್ಧನ, ಮುಲಿಸಾ ಅಧ್ಯಕ್ಷ ಪ್ರೊ. ಎನ್. ಎಸ್. ಹರಿನಾರಾಯಣ, ಪ್ರಾಧ್ಯಾಪಕಿ ಪ್ರೊ.ಎಚ್. ಆದಿತ್ಯಕುಮಾರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-38-1023492705</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಗ್ರಂಥಾಲಯ ವಿದ್ಯಾರ್ಥಿಗಳಿಗೆ ಅನೇಕ ಉದ್ಯೋಗ ಅವಕಾಶಗಳಿವೆ. ಅವುಗಳ ಮಾಹಿತಿ ಪಡೆದು ಬಳಸಿಕೊಳ್ಳಬೇಕು’ ಎಂದು ಬೆಂಗಳೂರು ರಾಮನ್ ಸಂಶೋಧನಾ ಸಂಸ್ಥೆಯ ನಿವೃತ್ತ ಗ್ರಂಥಪಾಲಕರಾದ ಡಾ.ಬಿ.ಎಂ.ಮೀರಾ ತಿಳಿಸಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ಮೈಸೂರು ವಿವಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿದ್ಯಾರ್ಥಿಗಳ ಸಂಘದ 2025– 26ನೇ ಸಾಲಿನ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಹಲವು ವರ್ಷಗಳಿಂದ ಮೈಸೂರು ವಿವಿ ಗ್ರಂಥಾಲಯ ವಿಭಾಗದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಿ, ವಿದ್ಯಾರ್ಥಿಗಳಿಗೆ ಬೇಕಾದ ಮಾಹಿತಿ ಒದಗಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಮುಲಿಸಾದ ಶಿಕ್ಷಕ ಸಲಹೆಗಾರ ಎಂ.ಸುನೀಲ್ ಕುಮಾರ್ ವರದಿ ಮಂಡಿಸಿದರು. ಖಜಾಂಚಿ ಡಿ.ಸುಪ್ರಿತ ಅವರು ಸಂಘಟನೆಯ ಖರ್ಚು-ವೆಚ್ಚ ಮಂಡಿಸಿದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು. ಮೈಸೂರು ವಿವಿ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಜಿ.ಆರ್.ಜನಾರ್ಧನ, ಮುಲಿಸಾ ಅಧ್ಯಕ್ಷ ಪ್ರೊ. ಎನ್. ಎಸ್. ಹರಿನಾರಾಯಣ, ಪ್ರಾಧ್ಯಾಪಕಿ ಪ್ರೊ.ಎಚ್. ಆದಿತ್ಯಕುಮಾರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-38-1023492705</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>