<p>ರಿಪ್ಪನ್ಪೇಟೆ: ‘ರಾಜ್ಯ ಸರ್ಕಾರ ಯುವ ಜನರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ‘ಯುವನಿಧಿ’ ಯೋಜನೆಯ ಪ್ರಯೋಜನವನ್ನು ಪದವಿ ಪೂರ್ಣಗೊಳಿಸಿದ ಗ್ರಾಮೀಣ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ, ರೋವರ್– ರೇಂಜರ್ಸ್, ಎನ್ಎಸ್ಎಸ್ ಚಟುವಟಿಕೆಗಳ ಸಮಾ ರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಪೋಷಕರ ಹೊರೆ ತಗ್ಗಿಸಲು, ಉದ್ಯೋಗ ಲಭಿಸುವವರೆಗೆ ಸರ್ಕಾರದ ಸಹಾಯಧನ ಪಡೆದುಕೊಳ್ಳಿ’ ಎಂದು ನೀಡಿದರು.</p>.<p>‘ಉನ್ನತ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು, ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಪಡೆದು ಕುಟುಂಬಕ್ಕೆ ಆಸರೆಯಾಗುವಂತಹ ಬದುಕು ಕಟ್ಟಿಕೊಂಡಲ್ಲಿ ಪಡೆದ ಶಿಕ್ಷಣ ಸಾರ್ಥಕವಾಗಲಿದೆ’ ಎಂದರು.</p>.<p>ಕಣ್ಣೂರು ಟಾಕಪ್ಪ ಮಾತನಾಡಿದರು. ಕಾಲೇಜಿನಲ್ಲಿ ಅತ್ಯುತ್ತಮ ಅಂಕ ಗಳಿಸಿದ ಹಾಗೂ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.</p>.<p>ಪ್ರಾಂಶುಪಾಲ ಬಿ.ಎಲ್. ರಾಜು, ಸಿಡಿಸಿ ಉಪಾಧ್ಯಕ್ಷ ಶ್ರೀನಿವಾಸ ಆಚಾರ್, ಸದಸ್ಯರಾದ ಮಂಜುನಾಥ ಕಾಮತ್, ಫ್ಯಾನ್ಸಿ ರಮೇಶ್, ರಘು, ಪ್ರಾಧ್ಯಾಪಕ ಎಂ. ಕುಮಾರ, ರಜನಿಕಾಂತ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-42-1909592931</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಿಪ್ಪನ್ಪೇಟೆ: ‘ರಾಜ್ಯ ಸರ್ಕಾರ ಯುವ ಜನರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ‘ಯುವನಿಧಿ’ ಯೋಜನೆಯ ಪ್ರಯೋಜನವನ್ನು ಪದವಿ ಪೂರ್ಣಗೊಳಿಸಿದ ಗ್ರಾಮೀಣ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ, ರೋವರ್– ರೇಂಜರ್ಸ್, ಎನ್ಎಸ್ಎಸ್ ಚಟುವಟಿಕೆಗಳ ಸಮಾ ರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಪೋಷಕರ ಹೊರೆ ತಗ್ಗಿಸಲು, ಉದ್ಯೋಗ ಲಭಿಸುವವರೆಗೆ ಸರ್ಕಾರದ ಸಹಾಯಧನ ಪಡೆದುಕೊಳ್ಳಿ’ ಎಂದು ನೀಡಿದರು.</p>.<p>‘ಉನ್ನತ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು, ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಪಡೆದು ಕುಟುಂಬಕ್ಕೆ ಆಸರೆಯಾಗುವಂತಹ ಬದುಕು ಕಟ್ಟಿಕೊಂಡಲ್ಲಿ ಪಡೆದ ಶಿಕ್ಷಣ ಸಾರ್ಥಕವಾಗಲಿದೆ’ ಎಂದರು.</p>.<p>ಕಣ್ಣೂರು ಟಾಕಪ್ಪ ಮಾತನಾಡಿದರು. ಕಾಲೇಜಿನಲ್ಲಿ ಅತ್ಯುತ್ತಮ ಅಂಕ ಗಳಿಸಿದ ಹಾಗೂ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.</p>.<p>ಪ್ರಾಂಶುಪಾಲ ಬಿ.ಎಲ್. ರಾಜು, ಸಿಡಿಸಿ ಉಪಾಧ್ಯಕ್ಷ ಶ್ರೀನಿವಾಸ ಆಚಾರ್, ಸದಸ್ಯರಾದ ಮಂಜುನಾಥ ಕಾಮತ್, ಫ್ಯಾನ್ಸಿ ರಮೇಶ್, ರಘು, ಪ್ರಾಧ್ಯಾಪಕ ಎಂ. ಕುಮಾರ, ರಜನಿಕಾಂತ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-42-1909592931</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>