<p>ಸಿಂದಗಿ: ‘ಗ್ರಾಮೀಣ ಭಾಗದ ವಿದ್ಯಾವಂತರು ಕೃಷಿಯತ್ತ ಮುಖ ಮಾಡಬೇಕು. ಕೃಷಿಯನ್ನೇ ಉದ್ಯೋಗವನ್ನಾಗಿ ಮಾಡಿಕೊಂಡು ಅದರಲ್ಲಿ ಯಶಸ್ಸು ಹೊಂದಿ ಬೇರೆಯವರಿಗೆ ಉದ್ಯೋಗ ಕೊಡುವವರಾಗಬೇಕು’ ಎಂದು ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರಮನ್ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.</p>.<p>ನಗರದ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣ ಎನ್ಜಿಒ ಸಂಸ್ಥೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಸರ್ಕಾರಿ ಮತ್ತು ಸರ್ಕಾರೇತರ ಉದ್ಯೋಗಿಗಳು ಜೊತೆ, ಜೊತೆಗೆ ಕೃಷಿಯತ್ತ ಆಸಕ್ತಿ ತೋರಿಸಿದರೆ ಆದಾಯ ದ್ವಿಗುಣಗೊಂಡು ರಾಷ್ಟ್ರೀಯ ವರಮಾನ ಹೆಚ್ಚುತ್ತದೆ. ಇದುವೇ ದೇಶಸೇವೆ‘ ಎಂದರು.</p>.<p>ಪ್ರಾಚಾರ್ಯ ಡಿ.ಎಂ.ಸರಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿರ್ಮಾಣ ಸಂಸ್ಥೆ ನಿರ್ದೇಶಕ ಯಹತೀಶ್ ಶ್ಯಾಮ ಅವರನ್ನು ಗೌರವಿಸಲಾಯಿತು. ಪ್ರಾಧ್ಯಾಪಕರಾದ ನಾಗರಾಜ ಮುರಗೋಡ, ರವಿ ಗೋಲಾ, ಪ್ರಕಾಶ ರಾಠೋಡ, ಭೀಮಾಶಂಕರ ಅರಳಗುಂಡಗಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-26-1231825867</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂದಗಿ: ‘ಗ್ರಾಮೀಣ ಭಾಗದ ವಿದ್ಯಾವಂತರು ಕೃಷಿಯತ್ತ ಮುಖ ಮಾಡಬೇಕು. ಕೃಷಿಯನ್ನೇ ಉದ್ಯೋಗವನ್ನಾಗಿ ಮಾಡಿಕೊಂಡು ಅದರಲ್ಲಿ ಯಶಸ್ಸು ಹೊಂದಿ ಬೇರೆಯವರಿಗೆ ಉದ್ಯೋಗ ಕೊಡುವವರಾಗಬೇಕು’ ಎಂದು ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರಮನ್ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.</p>.<p>ನಗರದ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣ ಎನ್ಜಿಒ ಸಂಸ್ಥೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಸರ್ಕಾರಿ ಮತ್ತು ಸರ್ಕಾರೇತರ ಉದ್ಯೋಗಿಗಳು ಜೊತೆ, ಜೊತೆಗೆ ಕೃಷಿಯತ್ತ ಆಸಕ್ತಿ ತೋರಿಸಿದರೆ ಆದಾಯ ದ್ವಿಗುಣಗೊಂಡು ರಾಷ್ಟ್ರೀಯ ವರಮಾನ ಹೆಚ್ಚುತ್ತದೆ. ಇದುವೇ ದೇಶಸೇವೆ‘ ಎಂದರು.</p>.<p>ಪ್ರಾಚಾರ್ಯ ಡಿ.ಎಂ.ಸರಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿರ್ಮಾಣ ಸಂಸ್ಥೆ ನಿರ್ದೇಶಕ ಯಹತೀಶ್ ಶ್ಯಾಮ ಅವರನ್ನು ಗೌರವಿಸಲಾಯಿತು. ಪ್ರಾಧ್ಯಾಪಕರಾದ ನಾಗರಾಜ ಮುರಗೋಡ, ರವಿ ಗೋಲಾ, ಪ್ರಕಾಶ ರಾಠೋಡ, ಭೀಮಾಶಂಕರ ಅರಳಗುಂಡಗಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-26-1231825867</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>