<p>ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯ ಮಂಡಳಿಯು ಬೆಂಗಳೂರು, ಬೆಳಗಾವಿ ಮತ್ತು ಕಲಬುರ್ಗಿ ಪೀಠಗಳಲ್ಲಿ ಖಾಲಿಯಿರುವ ಏಳು ಶೀಘ್ರಲಿಪಿಗಾರ(ಸ್ಟೆನೊಗ್ರಾಫರ್) ಹುದ್ದೆಗಳ ಭರ್ತಿಗಾಗಿ ಆರ್ಜಿ ಆಹ್ವಾನಿಸಿದೆ.</p>.<p>ಈ ಕುರಿತು ಅಧಿಸೂಚನೆ ಹೊರಡಿಸಿದ್ದು <em>(ದಿನಾಂಕ: ಜ 6, 2023)</em>, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. <em><strong>ಜನವರಿ 31 ಅರ್ಜಿ ಸಲ್ಲಿಕೆಗೆ ಕೊನೆ ದಿನ</strong></em>ವಾಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.</p>.<p><strong>ಶೈಕ್ಷಣಿಕ ವಿದ್ಯಾರ್ಹತೆ:</strong></p>.<p>ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲಭಾಷಾ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ(ಸೀನಿಯರ್ ಗ್ರೇಡ್) ಹಾಗೂ ಇಂಗ್ಲಿಷ್ ಮತ್ತು ಕನ್ನಡ ಭಾಷೆಯ ಶೀಘ್ರಲಿಪಿ ಪ್ರೌಢದರ್ಜೆ(ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.</p>.<p>ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ಜಾಲತಾಣ www. Ksat.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು(ಉಳಿದ ಮೂಲ ವೃಂದಕ್ಕೆ ನಿಗದಿಪಡಿಸಿರುವ ಅರ್ಜಿಯನ್ನು ಮಾತ್ರ ಡೌನ್ಲೋಡ್ ಮಾಡಿಕೊಳ್ಳಬೇಕು).</p>.<p>ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಮಂಡಳಿಯು ನಿಗದಿಪಡಿಸಿರುವ ನಮೂನೆಯಲ್ಲಿಯೇ ಅರ್ಜಿ ಸಲ್ಲಿಸಬೇಕು. ಇತರೆ ಯಾವುದೇ ನಮೂನೆಯಲ್ಲಾಗಲಿ ಅಥವಾ ಬೆರಳಚ್ಚು/ಝೆರಾಕ್ಸ್ ಪ್ರತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.</p>.<p>ಭರ್ತಿ ಮಾಡಿದ ಅರ್ಜಿಗಳನ್ನು ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು – 560009 ಇಲ್ಲಿಗೆ ಸಲ್ಲಿಸಬೇಕು.</p>.<p><strong>ಅರ್ಜಿ ಶುಲ್ಕ:</strong> ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹150. ಎಸ್ಸಿ, ಎಸ್ಟಿ, ಪ್ರವರ್ಗ–1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಿದೆ. ಅರ್ಜಿ ಶುಲ್ಕವನ್ನು ರಿಜಿಸ್ಟ್ರಾರ್, ಕೆಎಸ್ಎಟಿ, 7ನೇ ಮಹಡಿ, ಕಂದಾಯಭವನ, ಕೆ.ಜಿ.ರಸ್ತೆ ಬೆಂಗಳೂರು ಇವರ ಹೆಸರಿನಲ್ಲಿ ಡಿಡಿ/ ಐಪಿಒ ಮೂಲಕ ಸಲ್ಲಿಸಬೇಕು.</p>.<p><strong>ವಯೋಮಿತಿ:</strong> ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು. ಎಸ್.ಸಿ, ಎಸ್ಟಿ , ಪ್ರವರ್ಗ –1 ರ ಅಭ್ಯರ್ಥಿಗಳಿಗೆ 40 ವರ್ಷಗಳು, 2ಎ, 2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷಗಳನ್ನು ನಿಗದಿಪಡಿಸಲಾಗಿದೆ.</p>.<p><strong>ವೇತನ ಶ್ರೇಣಿ:</strong> ಮಾಸಿಕ ₹30350 ರಿಂದ ₹58,250 </p>.<p>ಹೆಚ್ಚಿನ ಮಾಹಿತಿಗೆ <strong><em>www.ksat.karnataka.gov.in</em></strong> ಜಾಲತಾಣಕ್ಕೆ ಭೇಟಿ ನೀಡಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯ ಮಂಡಳಿಯು ಬೆಂಗಳೂರು, ಬೆಳಗಾವಿ ಮತ್ತು ಕಲಬುರ್ಗಿ ಪೀಠಗಳಲ್ಲಿ ಖಾಲಿಯಿರುವ ಏಳು ಶೀಘ್ರಲಿಪಿಗಾರ(ಸ್ಟೆನೊಗ್ರಾಫರ್) ಹುದ್ದೆಗಳ ಭರ್ತಿಗಾಗಿ ಆರ್ಜಿ ಆಹ್ವಾನಿಸಿದೆ.</p>.<p>ಈ ಕುರಿತು ಅಧಿಸೂಚನೆ ಹೊರಡಿಸಿದ್ದು <em>(ದಿನಾಂಕ: ಜ 6, 2023)</em>, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. <em><strong>ಜನವರಿ 31 ಅರ್ಜಿ ಸಲ್ಲಿಕೆಗೆ ಕೊನೆ ದಿನ</strong></em>ವಾಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.</p>.<p><strong>ಶೈಕ್ಷಣಿಕ ವಿದ್ಯಾರ್ಹತೆ:</strong></p>.<p>ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲಭಾಷಾ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ(ಸೀನಿಯರ್ ಗ್ರೇಡ್) ಹಾಗೂ ಇಂಗ್ಲಿಷ್ ಮತ್ತು ಕನ್ನಡ ಭಾಷೆಯ ಶೀಘ್ರಲಿಪಿ ಪ್ರೌಢದರ್ಜೆ(ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.</p>.<p>ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ಜಾಲತಾಣ www. Ksat.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು(ಉಳಿದ ಮೂಲ ವೃಂದಕ್ಕೆ ನಿಗದಿಪಡಿಸಿರುವ ಅರ್ಜಿಯನ್ನು ಮಾತ್ರ ಡೌನ್ಲೋಡ್ ಮಾಡಿಕೊಳ್ಳಬೇಕು).</p>.<p>ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಮಂಡಳಿಯು ನಿಗದಿಪಡಿಸಿರುವ ನಮೂನೆಯಲ್ಲಿಯೇ ಅರ್ಜಿ ಸಲ್ಲಿಸಬೇಕು. ಇತರೆ ಯಾವುದೇ ನಮೂನೆಯಲ್ಲಾಗಲಿ ಅಥವಾ ಬೆರಳಚ್ಚು/ಝೆರಾಕ್ಸ್ ಪ್ರತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.</p>.<p>ಭರ್ತಿ ಮಾಡಿದ ಅರ್ಜಿಗಳನ್ನು ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು – 560009 ಇಲ್ಲಿಗೆ ಸಲ್ಲಿಸಬೇಕು.</p>.<p><strong>ಅರ್ಜಿ ಶುಲ್ಕ:</strong> ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹150. ಎಸ್ಸಿ, ಎಸ್ಟಿ, ಪ್ರವರ್ಗ–1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಿದೆ. ಅರ್ಜಿ ಶುಲ್ಕವನ್ನು ರಿಜಿಸ್ಟ್ರಾರ್, ಕೆಎಸ್ಎಟಿ, 7ನೇ ಮಹಡಿ, ಕಂದಾಯಭವನ, ಕೆ.ಜಿ.ರಸ್ತೆ ಬೆಂಗಳೂರು ಇವರ ಹೆಸರಿನಲ್ಲಿ ಡಿಡಿ/ ಐಪಿಒ ಮೂಲಕ ಸಲ್ಲಿಸಬೇಕು.</p>.<p><strong>ವಯೋಮಿತಿ:</strong> ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು. ಎಸ್.ಸಿ, ಎಸ್ಟಿ , ಪ್ರವರ್ಗ –1 ರ ಅಭ್ಯರ್ಥಿಗಳಿಗೆ 40 ವರ್ಷಗಳು, 2ಎ, 2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷಗಳನ್ನು ನಿಗದಿಪಡಿಸಲಾಗಿದೆ.</p>.<p><strong>ವೇತನ ಶ್ರೇಣಿ:</strong> ಮಾಸಿಕ ₹30350 ರಿಂದ ₹58,250 </p>.<p>ಹೆಚ್ಚಿನ ಮಾಹಿತಿಗೆ <strong><em>www.ksat.karnataka.gov.in</em></strong> ಜಾಲತಾಣಕ್ಕೆ ಭೇಟಿ ನೀಡಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>