<p>ಉಡುಪಿ: ನೇತ್ರಜ್ಯೋತಿ ಕಾಲೇಜು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವತಿಯಿಂದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಜರುಗಿತು.</p>.<p>ಕಾರ್ಮಿಕ ಅಧಿಕಾರಿ ಕಮಲ್ ಶಾ ಅಲ್ತಾಫ್ ಅಹ್ಮದ್ ಪಾಲ್ಗೊಂಡಿದ್ದರು. ಕುಂದಾಪುರದ ಕಾರ್ಮಿಕ ಅಧಿಕಾರಿ ವಿಜಯೇಂದ್ರ ಅವರು ಕಾರ್ಮಿಕ ಕಾನೂನುಗಳ ಬಗ್ಗೆ ಹಾಗೂ ಉಡುಪಿಯ ಕಾರ್ಮಿಕ ಅಧಿಕಾರಿ ಮಲ್ಲಿಕ್ ಪ್ರಸಾದ್ ಅವರು ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಬಗ್ಗೆ ಮಾತನಾಡಿದರು.</p>.<p>ಅಧ್ಯಕ್ಷತೆಯನ್ನು ನೇತ್ರಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಕೃಷ್ಣ ಪ್ರಸಾದ್ ಕೂಡ್ಲು ವಹಿಸಿದ್ದರು.</p>.<p>ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಸಿಒಒ ಡಾ. ಗೌರಿ ಪ್ರಭು ಉಪಸ್ಥಿತರಿದ್ದರು. ಅನಿಷಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರಸಾದ್ ನೇತ್ರಾಲಯದ ಆಡಳಿತಾಧಿಕಾರಿ ಮಧ್ವ ವಲ್ಲಭ ಸ್ವಾಗತಿಸಿದರು.</p>.<p>ಮಾಧವ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.</p>.<p>ಕಾರ್ಯಕ್ರಮದಲ್ಲಿ ನಗರಸಭೆಯ ಕರ್ಮಚಾರಿಗಳಾದ ಆನಂದ, ಮಹದೇವ್, ಸುರೇಶ್, ರಾಜೇಶ್ ಹಾಗೂ ನೇತ್ರಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯ ಉಡುಪಿಯ ಸ್ವಚ್ಛತಾ ಸಿಬ್ಬಂದಿ ಜಯಂತಿ, ವನಜ, ಸುಮಾ, ಲಲಿತಾ ಮತ್ತು ವಿನಯ ಅವರನ್ನು ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-28-1550291827</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ನೇತ್ರಜ್ಯೋತಿ ಕಾಲೇಜು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವತಿಯಿಂದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಜರುಗಿತು.</p>.<p>ಕಾರ್ಮಿಕ ಅಧಿಕಾರಿ ಕಮಲ್ ಶಾ ಅಲ್ತಾಫ್ ಅಹ್ಮದ್ ಪಾಲ್ಗೊಂಡಿದ್ದರು. ಕುಂದಾಪುರದ ಕಾರ್ಮಿಕ ಅಧಿಕಾರಿ ವಿಜಯೇಂದ್ರ ಅವರು ಕಾರ್ಮಿಕ ಕಾನೂನುಗಳ ಬಗ್ಗೆ ಹಾಗೂ ಉಡುಪಿಯ ಕಾರ್ಮಿಕ ಅಧಿಕಾರಿ ಮಲ್ಲಿಕ್ ಪ್ರಸಾದ್ ಅವರು ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಬಗ್ಗೆ ಮಾತನಾಡಿದರು.</p>.<p>ಅಧ್ಯಕ್ಷತೆಯನ್ನು ನೇತ್ರಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಕೃಷ್ಣ ಪ್ರಸಾದ್ ಕೂಡ್ಲು ವಹಿಸಿದ್ದರು.</p>.<p>ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಸಿಒಒ ಡಾ. ಗೌರಿ ಪ್ರಭು ಉಪಸ್ಥಿತರಿದ್ದರು. ಅನಿಷಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರಸಾದ್ ನೇತ್ರಾಲಯದ ಆಡಳಿತಾಧಿಕಾರಿ ಮಧ್ವ ವಲ್ಲಭ ಸ್ವಾಗತಿಸಿದರು.</p>.<p>ಮಾಧವ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.</p>.<p>ಕಾರ್ಯಕ್ರಮದಲ್ಲಿ ನಗರಸಭೆಯ ಕರ್ಮಚಾರಿಗಳಾದ ಆನಂದ, ಮಹದೇವ್, ಸುರೇಶ್, ರಾಜೇಶ್ ಹಾಗೂ ನೇತ್ರಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯ ಉಡುಪಿಯ ಸ್ವಚ್ಛತಾ ಸಿಬ್ಬಂದಿ ಜಯಂತಿ, ವನಜ, ಸುಮಾ, ಲಲಿತಾ ಮತ್ತು ವಿನಯ ಅವರನ್ನು ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-28-1550291827</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>