ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ಈ ಬಾರಿಯ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 250ನೇ ರ್ಯಾಂಕ್ ಪಡೆದಿದ್ದಾರೆ. ಆ ಮೂಲಕ, ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನಲ್ಲಿ, ಸಿವಿಲ್ ಸರ್ವಿಸ್ ಅಧಿಕಾರಿಯಾಗಲಿರುವ ಮೊದಲ ಯುವತಿ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಏನು ಓದಬೇಕು ಎಂಬುದು ಎಷ್ಟು ಮುಖ್ಯವೋ, ಏನು ಓದಬಾರದು ಎಂಬುದೂ ಅಷ್ಟೇ ಮುಖ್ಯ ಎನ್ನುವುದು ಅವರ ಸಲಹೆ.