<p>ಹುಕ್ಕೇರಿ: ‘ಮಹಿಳೆಯರು ವೃತ್ತಿ ತರಬೇತಿ ಪಡೆದುಕೊಂಡು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿಯಾಗಬೇಕು’ ಎಂದು ಮಹಿಳಾ ಕಲ್ಯಾಣ ಸಂಸ್ಥೆಯ ಸಂಯೋಜಕಿ ಸುರೇಖಾ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಎಫ್ವಿಟಿಆರ್ಎಸ್ ಬೆಂಗಳೂರು ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಶಕ್ತಿ ಸದನ ಮಹಿಳೆಯರ ಪುನರ್ವಸತಿ ಕೇಂದ್ರ ಹಿಡಕಲ್ ಡ್ಯಾಂ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 4 ತಿಂಗಳ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.</p>.<p>‘ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಮಾತ್ರ ಕುಟುಂಬದ ಏಳಿಗೆಗೆ ಪೂರಕ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಜಯಶ್ರೀ ಮತ್ತಿಕೊಪ್ಪ, ‘ಗ್ರಾಮೀಣ ಭಾಗದ ಮಹಿಳೆಯರಿಗೆ ಇಂತಹ ತರಬೇತಿಗಳು ಅಗತ್ಯ’ ಎಂದು ಶ್ಲಾಘಿಸಿದರು.</p>.<p>ಬಸವರಾಜ ಮಣ್ಣಿಕೇರಿ, ಶಕ್ತಿ ಸದನ ಮಹಿಳಾ ಪುನರ್ವಸತಿ ಕೇಂದ್ರದ ಅಧೀಕ್ಷಕಿ ದ್ರಾಕ್ಷಾಯಿನಿ ಮಠಪತಿ ಹಾಗೂ ತರಬೇತಿದಾರ ಮಂದಾಕಿನಿ ಹಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-21-775796862</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಕ್ಕೇರಿ: ‘ಮಹಿಳೆಯರು ವೃತ್ತಿ ತರಬೇತಿ ಪಡೆದುಕೊಂಡು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿಯಾಗಬೇಕು’ ಎಂದು ಮಹಿಳಾ ಕಲ್ಯಾಣ ಸಂಸ್ಥೆಯ ಸಂಯೋಜಕಿ ಸುರೇಖಾ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಎಫ್ವಿಟಿಆರ್ಎಸ್ ಬೆಂಗಳೂರು ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಶಕ್ತಿ ಸದನ ಮಹಿಳೆಯರ ಪುನರ್ವಸತಿ ಕೇಂದ್ರ ಹಿಡಕಲ್ ಡ್ಯಾಂ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 4 ತಿಂಗಳ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.</p>.<p>‘ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಮಾತ್ರ ಕುಟುಂಬದ ಏಳಿಗೆಗೆ ಪೂರಕ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಜಯಶ್ರೀ ಮತ್ತಿಕೊಪ್ಪ, ‘ಗ್ರಾಮೀಣ ಭಾಗದ ಮಹಿಳೆಯರಿಗೆ ಇಂತಹ ತರಬೇತಿಗಳು ಅಗತ್ಯ’ ಎಂದು ಶ್ಲಾಘಿಸಿದರು.</p>.<p>ಬಸವರಾಜ ಮಣ್ಣಿಕೇರಿ, ಶಕ್ತಿ ಸದನ ಮಹಿಳಾ ಪುನರ್ವಸತಿ ಕೇಂದ್ರದ ಅಧೀಕ್ಷಕಿ ದ್ರಾಕ್ಷಾಯಿನಿ ಮಠಪತಿ ಹಾಗೂ ತರಬೇತಿದಾರ ಮಂದಾಕಿನಿ ಹಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-21-775796862</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>