<p>ಅಫಜಲಪುರ: ‘ಹಿಂದಿ ವಿಷಯಕ್ಕೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರದಿಂದ ಭಾಷಾ ವೈವಿಧ್ಯ ಮತ್ತು ಶಿಕ್ಷಣದ ಸಮತೋಲನಕ್ಕೆ ಧಕ್ಕೆಯಾಗಬಹುದು’ ಎಂದು ವಕೀಲ ಹಾಗೂ ಹೋರಾಟಗಾರ ನಾಗೇಶ ಕೊಳ್ಳಿ ಹೇಳಿದ್ದಾರೆ.</p>.<p>‘ಭಾರತ ಬಹುಭಾಷಾ ದೇಶವಾಗಿದೆ. ವಿವಿಧ ಭಾಷೆಗಳ ಜ್ಞಾನ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಸಹಕಾರಿ. ಹಿಂದಿ ಭಾಷೆ ದೇಶದ ಅನೇಕ ಭಾಗಗಳಲ್ಲಿ ಸಂವಹನಕ್ಕೆ ಬಳಸಲಾಗುತ್ತಿರುವ ಕಾರಣ ಅದನ್ನು ಶಿಕ್ಷಣ ವ್ಯವಸ್ಥೆಯಿಂದ ದೂರ ಮಾಡುವುದು ಸೂಕ್ತವಲ್ಲ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಸರ್ಕಾರ ಭಾಷಾ ನೀತಿಯಲ್ಲಿ ಸಮತೋಲನ ಕಾಪಾಡಬೇಕು. ಪ್ರಾದೇಶಿಕ ಭಾಷೆಗಳ ಅಭಿವೃದ್ಧಿ ಜೊತೆಗೆ ಇತರೆ ಭಾಷೆಗಳಿಗೂ ಅವಕಾಶ ನೀಡುವುದು ಅಗತ್ಯ. ಈ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಹಾಗೂ ಸಾರ್ವಜನಿಕ ಚರ್ಚೆಯ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಕಾಗಿತ್ತು. ಸರ್ಕಾರ ಭಾಷಾ ವೈವಿಧ್ಯವನ್ನು ಕಾಪಾಡುವ ದೃಷ್ಟಿಯಿಂದ ತನ್ನ ನಿರ್ಧಾರವನ್ನು ಮರು ಪರಿಶೀಲಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-31-2063209385</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಫಜಲಪುರ: ‘ಹಿಂದಿ ವಿಷಯಕ್ಕೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರದಿಂದ ಭಾಷಾ ವೈವಿಧ್ಯ ಮತ್ತು ಶಿಕ್ಷಣದ ಸಮತೋಲನಕ್ಕೆ ಧಕ್ಕೆಯಾಗಬಹುದು’ ಎಂದು ವಕೀಲ ಹಾಗೂ ಹೋರಾಟಗಾರ ನಾಗೇಶ ಕೊಳ್ಳಿ ಹೇಳಿದ್ದಾರೆ.</p>.<p>‘ಭಾರತ ಬಹುಭಾಷಾ ದೇಶವಾಗಿದೆ. ವಿವಿಧ ಭಾಷೆಗಳ ಜ್ಞಾನ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಸಹಕಾರಿ. ಹಿಂದಿ ಭಾಷೆ ದೇಶದ ಅನೇಕ ಭಾಗಗಳಲ್ಲಿ ಸಂವಹನಕ್ಕೆ ಬಳಸಲಾಗುತ್ತಿರುವ ಕಾರಣ ಅದನ್ನು ಶಿಕ್ಷಣ ವ್ಯವಸ್ಥೆಯಿಂದ ದೂರ ಮಾಡುವುದು ಸೂಕ್ತವಲ್ಲ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಸರ್ಕಾರ ಭಾಷಾ ನೀತಿಯಲ್ಲಿ ಸಮತೋಲನ ಕಾಪಾಡಬೇಕು. ಪ್ರಾದೇಶಿಕ ಭಾಷೆಗಳ ಅಭಿವೃದ್ಧಿ ಜೊತೆಗೆ ಇತರೆ ಭಾಷೆಗಳಿಗೂ ಅವಕಾಶ ನೀಡುವುದು ಅಗತ್ಯ. ಈ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಹಾಗೂ ಸಾರ್ವಜನಿಕ ಚರ್ಚೆಯ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಕಾಗಿತ್ತು. ಸರ್ಕಾರ ಭಾಷಾ ವೈವಿಧ್ಯವನ್ನು ಕಾಪಾಡುವ ದೃಷ್ಟಿಯಿಂದ ತನ್ನ ನಿರ್ಧಾರವನ್ನು ಮರು ಪರಿಶೀಲಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-31-2063209385</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>