ಯಾವುದೇ ಜಾತಿ, ವರ್ಗ, ಲಿಂಗ, ಭಾಷೆಯ ಧರ್ಮದ ಆಧಾರದ ಮೇಲೆ ಶಿಕ್ಷಣ ನೀಡಬಾರದು, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ತಾರತಮ್ಯಗಳಿಗೆ ಅವಕಾಶ ಕೊಡುವ ಪಠ್ಯಗಳನ್ನು ಅಳವಡಿಸಬಾರದು. ರಾಜ್ಯದ ಎಲ್ಲ ಮಕ್ಕಳಿಗೂ ಶಿಕ್ಷಣ ತಲುಪಬೇಕು. ಎಷ್ಟೋ ಕುಟುಂಬಗಳ ಮಕ್ಕಳು ಕೂಲಿ ಮಾಡಿಕೊಂಡು ಕಾಲೇಜು ಶಿಕ್ಷಣ ಪಡೆಯುತ್ತಿದ್ದಾರೆ. ಪರೀಕ್ಷಾ ಶುಲ್ಕ ಪಾವತಿಸಲೂ ಸಾಧ್ಯವಾಗದ ಎಷ್ಟೋ ಮಕ್ಕಳು ಇದ್ದಾರೆ. ಸಮೀಕ್ಷೆ ನಡೆಸಲು ಹೋದಾಗಲೂ ಸಾಕಷ್ಟು ಸಂಖ್ಯೆಯ ಮಕ್ಕಳು ಸಿಗಲಿಲ್ಲ. ಅವರ ಅಭಿಪ್ರಾಯ ದಾಖಲಿಸಲು ಸಾಧ್ಯವಾಗಲಿಲ್ಲ. ಹಾಗಾಗಿ, ಸರ್ಕಾರ ಎಲ್ಲರಿಗೂ ಉಚಿತವಾಗಿ ಸಿಗುವ, ಸೌಹಾರ್ದ ಶಿಕ್ಷಣ ನೀತಿ ರೂಪಿಸಬೇಕು ಎನ್ನುವ ಅಶಯ ಇಟ್ಟುಕೊಂಡು ಸಮೀಕ್ಷೆ ನಡೆಸಲಾಗಿದೆ ಎಂದು ಸಂಘಟನೆ ಹೇಳಿದೆ.