<p>ಅಜ್ಜಂಪುರ: ‘ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ನೆಲ-ಜಲ, ಭಾಷೆ, ಕಲೆ-ಸಾಹಿತ್ಯ- ಸಂಗೀತ ಸಂರಕ್ಷಿಸಲು ನಿರಂತರವಾಗಿ ಶ್ರಮಿಸುತ್ತಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಎಚ್.ಆರ್. ಚಂದ್ರಪ್ಪ ನುಡಿದರು.</p>.<p>ಪಟ್ಟಣದ ಕೈಲಾಸಂ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ‘ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.</p>.<p>‘ಪರಿಷತ್ತು ಹೋಬಳಿ, ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವ ಮೂಲಕ ಕನ್ನಡ ಭಾಷೆ ಸಾಹಿತ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. ಕಲೆ–ಸಂಗೀತ–ಸಾಹಿತ್ಯದಲ್ಲಿ ಸಾಧನೆ ಮಾಡುತ್ತಿರುವ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಗೌರವಿಸುವ ಕೆಲಸ ನಿರ್ವಹಿಸುತ್ತಿದೆ’ ಎಂದರು.</p>.<p>ಪರಿಷತ್ತಿನ ಟಿ.ಸಿ. ಶಿವಕುಮಾರ ಸ್ವಾಮಿ, ‘ಸರ್ಕಾರ, ಭಾಷೆ–ಸಾಹಿತ್ಯ ಉಳಿಸಲು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡುತ್ತಿದೆ. ಮತ್ತೊಂದೆಡೆ ಪ್ರತಿವರ್ಷ ನೂರಾರು ಆಂಗ್ಲ ಮಾಧ್ಯಮ ಶಾಲೆ ತೆರೆಯಲು ಪರವಾನಗಿ ನೀಡುತ್ತಿದೆ. ಈ ಮೂಲಕ ಕನ್ನಡ ಭಾಷೆ ವಿಷಯದಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದೆ’ ಎಂದರು.</p>.<p>ಸಾಹಿತಿ ಚಂದ್ರ ಪ್ರಕಾಶ್, ‘ಯುವಜ ನಾಂಗ ಕನ್ನಡ ಭಾಷೆ ನಿರ್ಲಕ್ಷಿಸಿ, ಆಂಗ್ಲ ಭಾಷಾ ಬಳಕೆಗೆ ಒಲವು ತೋರುತ್ತಿರುವುದು ದುರದೃಷ್ಟಕರ’ ಎಂದರು. ಕಾರ್ಯಕ್ರಮದಲ್ಲಿ ವಿಜಯ ಕುಮಾರಿ ಮಾತನಾಡಿದರು.</p>.<p>ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಪಿ. ರಾಜಪ್ಪ, ರಂಗ ಕಲಾವಿದ ಎ.ಎಸ್. ಕೃಷ್ಣಮೂರ್ತಿ, ಗಡೀಹಳ್ಳಿ ಪ್ರಸನ್ನ, ರವಿ, ಮಧು ಮಾಲತಿ, ಮೋಹನ್ ಜಾಧವ್, ನವೀನ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-126-1797064505</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಜ್ಜಂಪುರ: ‘ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ನೆಲ-ಜಲ, ಭಾಷೆ, ಕಲೆ-ಸಾಹಿತ್ಯ- ಸಂಗೀತ ಸಂರಕ್ಷಿಸಲು ನಿರಂತರವಾಗಿ ಶ್ರಮಿಸುತ್ತಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಎಚ್.ಆರ್. ಚಂದ್ರಪ್ಪ ನುಡಿದರು.</p>.<p>ಪಟ್ಟಣದ ಕೈಲಾಸಂ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ‘ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.</p>.<p>‘ಪರಿಷತ್ತು ಹೋಬಳಿ, ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವ ಮೂಲಕ ಕನ್ನಡ ಭಾಷೆ ಸಾಹಿತ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. ಕಲೆ–ಸಂಗೀತ–ಸಾಹಿತ್ಯದಲ್ಲಿ ಸಾಧನೆ ಮಾಡುತ್ತಿರುವ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಗೌರವಿಸುವ ಕೆಲಸ ನಿರ್ವಹಿಸುತ್ತಿದೆ’ ಎಂದರು.</p>.<p>ಪರಿಷತ್ತಿನ ಟಿ.ಸಿ. ಶಿವಕುಮಾರ ಸ್ವಾಮಿ, ‘ಸರ್ಕಾರ, ಭಾಷೆ–ಸಾಹಿತ್ಯ ಉಳಿಸಲು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡುತ್ತಿದೆ. ಮತ್ತೊಂದೆಡೆ ಪ್ರತಿವರ್ಷ ನೂರಾರು ಆಂಗ್ಲ ಮಾಧ್ಯಮ ಶಾಲೆ ತೆರೆಯಲು ಪರವಾನಗಿ ನೀಡುತ್ತಿದೆ. ಈ ಮೂಲಕ ಕನ್ನಡ ಭಾಷೆ ವಿಷಯದಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದೆ’ ಎಂದರು.</p>.<p>ಸಾಹಿತಿ ಚಂದ್ರ ಪ್ರಕಾಶ್, ‘ಯುವಜ ನಾಂಗ ಕನ್ನಡ ಭಾಷೆ ನಿರ್ಲಕ್ಷಿಸಿ, ಆಂಗ್ಲ ಭಾಷಾ ಬಳಕೆಗೆ ಒಲವು ತೋರುತ್ತಿರುವುದು ದುರದೃಷ್ಟಕರ’ ಎಂದರು. ಕಾರ್ಯಕ್ರಮದಲ್ಲಿ ವಿಜಯ ಕುಮಾರಿ ಮಾತನಾಡಿದರು.</p>.<p>ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಪಿ. ರಾಜಪ್ಪ, ರಂಗ ಕಲಾವಿದ ಎ.ಎಸ್. ಕೃಷ್ಣಮೂರ್ತಿ, ಗಡೀಹಳ್ಳಿ ಪ್ರಸನ್ನ, ರವಿ, ಮಧು ಮಾಲತಿ, ಮೋಹನ್ ಜಾಧವ್, ನವೀನ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-126-1797064505</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>