<p>ಬಸವಕಲ್ಯಾಣ: ‘ದೇಶದ ಉತ್ತರದ ಹಾಗೂ ಇತರೆ ಎಲ್ಲ ರಾಜ್ಯಗಳ ಪಠ್ಯದಲ್ಲಿ ಅಕ್ಕಮಹಾದೇವಿಯ ಚರಿತ್ರೆ ಅಳವಡಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಲಹೆ ನೀಡಿದರು.</p>.<p>ನಗರದ ಬಂದವರ ಓಣಿಯಲ್ಲಿ ಅಕ್ಕಮಹಾದೇವಿ ಅನುಭಾವ ಪೀಠದಿಂದ ಗುರುವಾರ ಆಯೋಜಿಸಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಬಂದವರ ಓಣಿಯು 12ನೇ ಶತಮಾನದಲ್ಲಿ ಕಲ್ಯಾಣಕ್ಕೆ ಬಂದ ಶರಣರಿಗೆ ಪ್ರಥಮ ಆಶ್ರಯ ತಾಣವಾಗಿತ್ತು. ಇಲ್ಲಿ ಅಕ್ಕ ಮಹಾದೇವಿ ಅವರ ಗವಿ ಸಹ ಇದ್ದು ಸುಂದರ ಪರಿಸರವಿದೆ. ಅಕ್ಕನಂತೆ ಜೀವನದಲ್ಲಿ ಗುರಿ ಹೊಂದಿರಬೇಕು. ಯಾವುದೇ ಕೆಲಸದಲ್ಲಿ ಸ್ಪಷ್ಟತೆ ಇರಬೇಕು’ ಎಂದರು.</p>.<p>ಲಿಂಗವಂತ ಹರಳಯ್ಯ ಪೀಠಾಧ್ಯಕ್ಷೆ ಅಕ್ಕ ಗಂಗಾಂಬಿಕಾ ಮಾತನಾಡಿ, ‘ಅಕ್ಕನ ವಚನಗಳು ಸ್ತ್ರೀ ಕುಲಕ್ಕೆ ಧೈರ್ಯ ತುಂಬುತ್ತವೆ. ಆತ್ಮವಿಶ್ವಾಸ ಹೆಚ್ಚಿಸುತ್ತವೆ. ಅಕ್ಕ ಅಧ್ಯಾತ್ಮ ಸಾಧನೆಯ ನವಯುಗ ಆರಂಭಿಸಿದರು’ ಎಂದರು.</p>.<p>ಸತ್ಯಕ್ಕತಾಯಿ ಮಾತನಾಡಿ, ‘ಅಕ್ಕನ ಜೀವನ ಭಕ್ತಿ, ತ್ಯಾಗ ಮತ್ತು ಆತ್ಮಸಾಕ್ಷಾತ್ಕಾರದ ಪ್ರತೀಕ’ ಎಂದರು.</p>.<p>ಹಂದಿಗುಂದ ಶಿವಾನಂದ ಸ್ವಾಮೀಜಿ, ಸಿದ್ದಬಸವ ಕಬೀರ ಸ್ವಾಮೀಜಿ, ಸಂಗಮೇಶ ತೊಗರಖೇಡೆ, ನಿರ್ಮಲಾ ಶಿವಣಕರ್ ಮಾತನಾಡಿದರು.</p>.<p>ಬಸವೇಶ್ವರ ದೇವಸ್ಥಾನ ಸಮಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಕುರಕೋಟೆ ಧ್ವಜಾರೋಹಣಗೈದರು. ರಂಜನಾ ಭೂಶೆಟ್ಟೆ, ಮಂಜುನಾಥ ಹೇಮಶೆಟ್ಟಿ ಸಂಗೀತ ಪ್ರಸ್ತುತಪಡಿಸಿದರು. ಇದಕ್ಕೂ ಮೊದಲು ತೊಟ್ಟಿಲು ಕಾರ್ಯಕ್ರಮ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-33-1646718497</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ‘ದೇಶದ ಉತ್ತರದ ಹಾಗೂ ಇತರೆ ಎಲ್ಲ ರಾಜ್ಯಗಳ ಪಠ್ಯದಲ್ಲಿ ಅಕ್ಕಮಹಾದೇವಿಯ ಚರಿತ್ರೆ ಅಳವಡಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಲಹೆ ನೀಡಿದರು.</p>.<p>ನಗರದ ಬಂದವರ ಓಣಿಯಲ್ಲಿ ಅಕ್ಕಮಹಾದೇವಿ ಅನುಭಾವ ಪೀಠದಿಂದ ಗುರುವಾರ ಆಯೋಜಿಸಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಬಂದವರ ಓಣಿಯು 12ನೇ ಶತಮಾನದಲ್ಲಿ ಕಲ್ಯಾಣಕ್ಕೆ ಬಂದ ಶರಣರಿಗೆ ಪ್ರಥಮ ಆಶ್ರಯ ತಾಣವಾಗಿತ್ತು. ಇಲ್ಲಿ ಅಕ್ಕ ಮಹಾದೇವಿ ಅವರ ಗವಿ ಸಹ ಇದ್ದು ಸುಂದರ ಪರಿಸರವಿದೆ. ಅಕ್ಕನಂತೆ ಜೀವನದಲ್ಲಿ ಗುರಿ ಹೊಂದಿರಬೇಕು. ಯಾವುದೇ ಕೆಲಸದಲ್ಲಿ ಸ್ಪಷ್ಟತೆ ಇರಬೇಕು’ ಎಂದರು.</p>.<p>ಲಿಂಗವಂತ ಹರಳಯ್ಯ ಪೀಠಾಧ್ಯಕ್ಷೆ ಅಕ್ಕ ಗಂಗಾಂಬಿಕಾ ಮಾತನಾಡಿ, ‘ಅಕ್ಕನ ವಚನಗಳು ಸ್ತ್ರೀ ಕುಲಕ್ಕೆ ಧೈರ್ಯ ತುಂಬುತ್ತವೆ. ಆತ್ಮವಿಶ್ವಾಸ ಹೆಚ್ಚಿಸುತ್ತವೆ. ಅಕ್ಕ ಅಧ್ಯಾತ್ಮ ಸಾಧನೆಯ ನವಯುಗ ಆರಂಭಿಸಿದರು’ ಎಂದರು.</p>.<p>ಸತ್ಯಕ್ಕತಾಯಿ ಮಾತನಾಡಿ, ‘ಅಕ್ಕನ ಜೀವನ ಭಕ್ತಿ, ತ್ಯಾಗ ಮತ್ತು ಆತ್ಮಸಾಕ್ಷಾತ್ಕಾರದ ಪ್ರತೀಕ’ ಎಂದರು.</p>.<p>ಹಂದಿಗುಂದ ಶಿವಾನಂದ ಸ್ವಾಮೀಜಿ, ಸಿದ್ದಬಸವ ಕಬೀರ ಸ್ವಾಮೀಜಿ, ಸಂಗಮೇಶ ತೊಗರಖೇಡೆ, ನಿರ್ಮಲಾ ಶಿವಣಕರ್ ಮಾತನಾಡಿದರು.</p>.<p>ಬಸವೇಶ್ವರ ದೇವಸ್ಥಾನ ಸಮಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಕುರಕೋಟೆ ಧ್ವಜಾರೋಹಣಗೈದರು. ರಂಜನಾ ಭೂಶೆಟ್ಟೆ, ಮಂಜುನಾಥ ಹೇಮಶೆಟ್ಟಿ ಸಂಗೀತ ಪ್ರಸ್ತುತಪಡಿಸಿದರು. ಇದಕ್ಕೂ ಮೊದಲು ತೊಟ್ಟಿಲು ಕಾರ್ಯಕ್ರಮ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-33-1646718497</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>