<p>ಭಾಲ್ಕಿ: ವೈರಾಗ್ಯನಿಧಿ, ವೀರವಿರಾಗಿಣಿ ಅಕ್ಕಮಹಾದೇವಿಯವರು ಸ್ತ್ರೀ ಕುಲದ ಧೈರ್ಯ, ಸ್ಥೈರ್ಯ, ಸ್ವಾಭಿಮಾನದ ನಿಧಿಯಾಗಿದ್ದಾರೆ ಎಂದು ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವ ಪರಮೇಶ್ವರ ನಾಯ್ಕ ಟಿ. ಹೇಳಿದರು.</p>.<p>ತಾಲ್ಲೂಕಿನ ಹಾಲಹಳ್ಳಿ (ಕೆ) ಗ್ರಾಮದ ಬೀದರ್ ವಿಶ್ವವಿದ್ಯಾಲಯದಲ್ಲಿ ಅಕ್ಕಮಹಾದೇವಿ ಜಯಂತಿ ನಿಮಿತ್ತ ಅಕ್ಕಮಹಾದೇವಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಅಕ್ಕ ಮಹಾದೇವಿಯವರ 434 ವಚನಗಳು ತುಂಬಾ ಭಾವಗೀತಾತ್ಮಕವಾಗಿವೆ. ಅಕ್ಕನ ಅಂತರಂಗದ ದರ್ಶನವಾಗುವುದು ಅವರ ಅಮೂಲ್ಯ ವಚನಗಳಲ್ಲಿ. ಉಡುತಡಿಯಿಂದ ಕಲ್ಯಾಣ, ಕಲ್ಯಾಣದಿಂದ ಶ್ರೀಶೈಲದ ಕದಳಿವನದವರೆಗಿನ ಅಕ್ಕನವರ ಪಯಣ ಅಗ್ರಗಣ್ಯವಾದುದು’ ಎಂದು ತಿಳಿಸಿದರು.</p>.<p>ಅಕ್ಕಮಹಾದೇವಿ ಅವರ ಜೀವನ, ಸಾಧನೆ ಕುರಿತು ರಾಮಚಂದ್ರ ಗಣಾಪೂರ ವಿಶೇಷ ಉಪನ್ಯಾಸ ನೀಡಿದರು.</p>.<p>ವಿಶೇಷಾಧಿಕಾರಿ ರವೀಂದ್ರನಾಥ ವಿ.ಗಬಾಡಿ ಸೇರಿದಂತೆ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-33-700214275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ವೈರಾಗ್ಯನಿಧಿ, ವೀರವಿರಾಗಿಣಿ ಅಕ್ಕಮಹಾದೇವಿಯವರು ಸ್ತ್ರೀ ಕುಲದ ಧೈರ್ಯ, ಸ್ಥೈರ್ಯ, ಸ್ವಾಭಿಮಾನದ ನಿಧಿಯಾಗಿದ್ದಾರೆ ಎಂದು ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವ ಪರಮೇಶ್ವರ ನಾಯ್ಕ ಟಿ. ಹೇಳಿದರು.</p>.<p>ತಾಲ್ಲೂಕಿನ ಹಾಲಹಳ್ಳಿ (ಕೆ) ಗ್ರಾಮದ ಬೀದರ್ ವಿಶ್ವವಿದ್ಯಾಲಯದಲ್ಲಿ ಅಕ್ಕಮಹಾದೇವಿ ಜಯಂತಿ ನಿಮಿತ್ತ ಅಕ್ಕಮಹಾದೇವಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಅಕ್ಕ ಮಹಾದೇವಿಯವರ 434 ವಚನಗಳು ತುಂಬಾ ಭಾವಗೀತಾತ್ಮಕವಾಗಿವೆ. ಅಕ್ಕನ ಅಂತರಂಗದ ದರ್ಶನವಾಗುವುದು ಅವರ ಅಮೂಲ್ಯ ವಚನಗಳಲ್ಲಿ. ಉಡುತಡಿಯಿಂದ ಕಲ್ಯಾಣ, ಕಲ್ಯಾಣದಿಂದ ಶ್ರೀಶೈಲದ ಕದಳಿವನದವರೆಗಿನ ಅಕ್ಕನವರ ಪಯಣ ಅಗ್ರಗಣ್ಯವಾದುದು’ ಎಂದು ತಿಳಿಸಿದರು.</p>.<p>ಅಕ್ಕಮಹಾದೇವಿ ಅವರ ಜೀವನ, ಸಾಧನೆ ಕುರಿತು ರಾಮಚಂದ್ರ ಗಣಾಪೂರ ವಿಶೇಷ ಉಪನ್ಯಾಸ ನೀಡಿದರು.</p>.<p>ವಿಶೇಷಾಧಿಕಾರಿ ರವೀಂದ್ರನಾಥ ವಿ.ಗಬಾಡಿ ಸೇರಿದಂತೆ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-33-700214275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>