<p>ಅಳ್ಳಾವರ: ‘ವಿದ್ಯಾರ್ಥಿಗಳು ತಮ್ಮ ಸ್ವಸಾಮರ್ಥ್ಯ ಮತ್ತು ತಂತ್ರಜ್ಞಾನದ ಸದ್ಬಳಕೆಯಿಂದ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಪ್ರಗತಿಪರ ರೈತ ಮಹಿಳೆ ಲಕ್ಷ್ಮೀ ಲೋಕೂರ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಒಕ್ಕೂಟ, ಕ್ರೀಡಾ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್, ಯೂತ್ ರೆಡ್ಕ್ರಾಸ್ ಘಟಕಗಳ ಆಶ್ರಯದಲ್ಲಿ ಮಂಗಳವಾರ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಿದ್ದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಕಳೆದ ವರ್ಷದ ಬಿಎ ಮತ್ತು ಬಿಕಾಂ ವಿಭಾಗಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ಸೋನಿಯಾ, ತೃಪ್ತಿ ಬೋಬಾಟೆ, ಬಿಷ್ಟಮ್ಮ, ತೇಜಲ್, ಲಲಿತಾ ಸುಳಗೇಕರ್, ಶ್ವೇತಾ ದುಗ್ಗಾಣಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಕಾಲೇಜಿನ ಉಪನ್ಯಾಸಕರಾದ ಡಾ.ಬಿ.ಸೋನೇಖಾನ್ ಹಾಗೂ ರೂಪಾ ನಾಯ್ಕ್ ಅವರು ಪಿಎಚ್ಡಿ ಪದವಿ ಪಡೆದ ಹಿನ್ನೆಲೆಯಲ್ಲಿ ಅಭಿನಂದಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.</p>.<p>ಪ್ರಾಚಾರ್ಯೆ ಉಮಾ ಪೂಜಾರ್ ಅಧ್ಯಕ್ಷತೆ ವಹಿಸಿದ್ದರು. ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ವಿನಾಯಕ ಕುರುಬರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಜಯಶ್ರೀ ಉಡುಪಿ, ಅಶೋಕ್ ಟೆಂಕಪ್ಪನವರ್, ಚೆನ್ನಬಸವರಾಜ ಚಾರಿ, ಉಮೇಶ್ ದೊಡ್ಡಮನಿ, ನಿಸಾರ್ ಖತೀಬ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-24-20933411</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಳ್ಳಾವರ: ‘ವಿದ್ಯಾರ್ಥಿಗಳು ತಮ್ಮ ಸ್ವಸಾಮರ್ಥ್ಯ ಮತ್ತು ತಂತ್ರಜ್ಞಾನದ ಸದ್ಬಳಕೆಯಿಂದ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಪ್ರಗತಿಪರ ರೈತ ಮಹಿಳೆ ಲಕ್ಷ್ಮೀ ಲೋಕೂರ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಒಕ್ಕೂಟ, ಕ್ರೀಡಾ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್, ಯೂತ್ ರೆಡ್ಕ್ರಾಸ್ ಘಟಕಗಳ ಆಶ್ರಯದಲ್ಲಿ ಮಂಗಳವಾರ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಿದ್ದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಕಳೆದ ವರ್ಷದ ಬಿಎ ಮತ್ತು ಬಿಕಾಂ ವಿಭಾಗಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ಸೋನಿಯಾ, ತೃಪ್ತಿ ಬೋಬಾಟೆ, ಬಿಷ್ಟಮ್ಮ, ತೇಜಲ್, ಲಲಿತಾ ಸುಳಗೇಕರ್, ಶ್ವೇತಾ ದುಗ್ಗಾಣಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಕಾಲೇಜಿನ ಉಪನ್ಯಾಸಕರಾದ ಡಾ.ಬಿ.ಸೋನೇಖಾನ್ ಹಾಗೂ ರೂಪಾ ನಾಯ್ಕ್ ಅವರು ಪಿಎಚ್ಡಿ ಪದವಿ ಪಡೆದ ಹಿನ್ನೆಲೆಯಲ್ಲಿ ಅಭಿನಂದಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.</p>.<p>ಪ್ರಾಚಾರ್ಯೆ ಉಮಾ ಪೂಜಾರ್ ಅಧ್ಯಕ್ಷತೆ ವಹಿಸಿದ್ದರು. ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ವಿನಾಯಕ ಕುರುಬರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಜಯಶ್ರೀ ಉಡುಪಿ, ಅಶೋಕ್ ಟೆಂಕಪ್ಪನವರ್, ಚೆನ್ನಬಸವರಾಜ ಚಾರಿ, ಉಮೇಶ್ ದೊಡ್ಡಮನಿ, ನಿಸಾರ್ ಖತೀಬ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-24-20933411</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>