<p>ಅಳ್ನಾವರ: ಸಮೀಪದ ಕಕ್ಕೇರಿ ಗ್ರಾಮದ ಕಕ್ಕಯ್ಯ ಶಿಕ್ಷಣ ಸಂಸ್ಥೆಯ ಶ್ರೀ ಬಿಷ್ಟಾದೇವಿ ಪ್ರೌಢ ಶಾಲೆಯ 1991-92ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಂದಶಾಲಾ ಆವರಣದಲ್ಲಿ ಈಚೆಗೆ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.</p>.<p>ಗುರುಗಳ ಪಾದಪೂಜೆ ನೆರವೇರಿಸಿ, ಸತ್ಕರಿಸಿ, ಗೌರವ ಸಲ್ಲಿಸಿದ ಹಳೆಯ ವಿದ್ಯಾರ್ಥಿಗಳು, ಶಾಲಾ ದಿನಗಳ ಸಿಹಿ ನೆನಪುಗಳನ್ನು ಸವಿದರು.</p>.<p>ಸಾನ್ನಿಧ್ಯ ವಹಿಸಿದ್ದ ಬಿಳಕಿ ಅವರೊಳ್ಳಿ ಮಠದ ಚನ್ನಬಸವದೇವರು ಆಶೀರ್ವಚನ ನೀಡಿ, ‘ಸೌಲಭ್ಯಗಳ ಕೊರತೆಯ ನಡುವೆಯೂ ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಈ ಶಾಲೆಯ ಹಳೆಯ ವಿದ್ಯಾರ್ಥಿಗಳ ಸೇವೆ ಶ್ಲಾಘನೀಯ. ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಬದುಕು ಕಟ್ಟಿಕೊಂಡು ಸಮಾಜ ನಿರ್ಮಾಣದಲ್ಲಿ ತೊಡಗಬೇಕು’ ಎಂದು ಹೇಳಿದರು.</p>.<p>ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಶೋಕ ಉಳ್ಳಾಗಡ್ಡಿ, ‘ಶಿಕ್ಷಣ ಸಂಸ್ಥೆ ವಿದ್ಯಾಭ್ಯಾಸವಷ್ಟೇ ಅಲ್ಲದೆ, ಮಾನವೀಯ ಮೌಲ್ಯಗಳನ್ನು ಬಿತ್ತಿ ಉತ್ತಮ ವ್ಯಕ್ತಿತ್ವ ರೂಪಿಸುವ ಕಾರ್ಯ ಮಾಡಿದೆ’ ಎಂದರು.</p>.<p>ಐ.ಜಿ. ಸಂಪಗಾವಿ, ಬಿ.ಜಿ. ಕಿಲಾರಿ, ಎ.ಎನ್.ಎಸ್. ಪಾಟೀಲ, ವಿ.ಡಿ. ಪಿರೋಜಿ, ಡಿ.ಎನ್. ಶಾಹಾಪೂರಮಠ, ಆರ್.ವೈ. ಬೆನ್ನೂರ, ಎಸ್.ಎಸ್. ಗಾಣಿಗೇರ, ಪ್ರಭು ಪ್ರಭುಣ್ಣವರ, ಬಿ.ಎ. ಹುಲಮನಿ, ಎಂ.ಬಿ. ಹೊಸಕೋಟಿ, ಎಸ್.ಎಸ್. ಜಾಧವ, ಪರಶುರಾಮ ಸೆಡೇಕರ ಹಾಗೂ ನಾಗಪ್ಪ ಮಾದರ ಅವರನ್ನು ಸತ್ಕರಿಸಲಾಯಿತು.</p>.<p>ಮುಖ್ಯ ಶಿಕ್ಷಕ ಐ.ಎಫ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-24-32401390</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಳ್ನಾವರ: ಸಮೀಪದ ಕಕ್ಕೇರಿ ಗ್ರಾಮದ ಕಕ್ಕಯ್ಯ ಶಿಕ್ಷಣ ಸಂಸ್ಥೆಯ ಶ್ರೀ ಬಿಷ್ಟಾದೇವಿ ಪ್ರೌಢ ಶಾಲೆಯ 1991-92ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಂದಶಾಲಾ ಆವರಣದಲ್ಲಿ ಈಚೆಗೆ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.</p>.<p>ಗುರುಗಳ ಪಾದಪೂಜೆ ನೆರವೇರಿಸಿ, ಸತ್ಕರಿಸಿ, ಗೌರವ ಸಲ್ಲಿಸಿದ ಹಳೆಯ ವಿದ್ಯಾರ್ಥಿಗಳು, ಶಾಲಾ ದಿನಗಳ ಸಿಹಿ ನೆನಪುಗಳನ್ನು ಸವಿದರು.</p>.<p>ಸಾನ್ನಿಧ್ಯ ವಹಿಸಿದ್ದ ಬಿಳಕಿ ಅವರೊಳ್ಳಿ ಮಠದ ಚನ್ನಬಸವದೇವರು ಆಶೀರ್ವಚನ ನೀಡಿ, ‘ಸೌಲಭ್ಯಗಳ ಕೊರತೆಯ ನಡುವೆಯೂ ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಈ ಶಾಲೆಯ ಹಳೆಯ ವಿದ್ಯಾರ್ಥಿಗಳ ಸೇವೆ ಶ್ಲಾಘನೀಯ. ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಬದುಕು ಕಟ್ಟಿಕೊಂಡು ಸಮಾಜ ನಿರ್ಮಾಣದಲ್ಲಿ ತೊಡಗಬೇಕು’ ಎಂದು ಹೇಳಿದರು.</p>.<p>ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಶೋಕ ಉಳ್ಳಾಗಡ್ಡಿ, ‘ಶಿಕ್ಷಣ ಸಂಸ್ಥೆ ವಿದ್ಯಾಭ್ಯಾಸವಷ್ಟೇ ಅಲ್ಲದೆ, ಮಾನವೀಯ ಮೌಲ್ಯಗಳನ್ನು ಬಿತ್ತಿ ಉತ್ತಮ ವ್ಯಕ್ತಿತ್ವ ರೂಪಿಸುವ ಕಾರ್ಯ ಮಾಡಿದೆ’ ಎಂದರು.</p>.<p>ಐ.ಜಿ. ಸಂಪಗಾವಿ, ಬಿ.ಜಿ. ಕಿಲಾರಿ, ಎ.ಎನ್.ಎಸ್. ಪಾಟೀಲ, ವಿ.ಡಿ. ಪಿರೋಜಿ, ಡಿ.ಎನ್. ಶಾಹಾಪೂರಮಠ, ಆರ್.ವೈ. ಬೆನ್ನೂರ, ಎಸ್.ಎಸ್. ಗಾಣಿಗೇರ, ಪ್ರಭು ಪ್ರಭುಣ್ಣವರ, ಬಿ.ಎ. ಹುಲಮನಿ, ಎಂ.ಬಿ. ಹೊಸಕೋಟಿ, ಎಸ್.ಎಸ್. ಜಾಧವ, ಪರಶುರಾಮ ಸೆಡೇಕರ ಹಾಗೂ ನಾಗಪ್ಪ ಮಾದರ ಅವರನ್ನು ಸತ್ಕರಿಸಲಾಯಿತು.</p>.<p>ಮುಖ್ಯ ಶಿಕ್ಷಕ ಐ.ಎಫ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-24-32401390</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>