<p>ಆನವಟ್ಟಿ: ‘ಇಲ್ಲಿನ ವಾಸವಿ ಕಲ್ಯಾಣ ಮಂಟಪದಲ್ಲಿ ಮೇ 30ರಂದು ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಪಕ್ಷಾತೀತ, ಜಾತ್ಯತೀತವಾಗಿ ಆಚರಿಸಲಾಗುವುದು’ ಎಂದು ಅಂಬೇಡ್ಕರ್ ಅಭಿಮಾನಿ ಬಳಗದ ಅಧ್ಯಕ್ಷ ಸಂಜೀವ್ ನೇರಲಗಿ ತಿಳಿಸಿದರು.</p>.<p>ಪಟ್ಟಣದಲ್ಲಿ ಭಾನುವಾರ ನಡೆದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜಯಂತ್ಯುತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕ್ರಿಕೆಟ್ ನಾಳೆ: ‘ಮೇ 26ರಂದು ಕೆಪಿಎಸ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಿ ಏರ್ಪಡಿಸಲಾಗಿದೆ. ಮೇ 30ರಂದು (ಶನಿವಾರ) ಪಟ್ಟಣದ ವಿಠ್ಠಲ ದೇವಸ್ಥಾನದಿಂದ ಹೆದ್ದಾರಿಯ ಮುಖ್ಯ ಬೀದಿಯಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು’ ಎಂದರು.</p>.<p>‘2025–26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಈ ಸಮಾರಂಭವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಅಂಬೇಡ್ಕರ್ ಭಾವಚಿತ್ರಕ್ಕೆ ಸಂಸದ ಬಿ.ವೈ ರಾಘವೇಂದ್ರ ಪುಷ್ಪಾರ್ಚನೆ ಮಾಡುವರು. ಸಮಾರಂಭದಲ್ಲಿ ಎಲ್ಲಾ ಸಮಾಜದ ಜನರು ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಸಭೆಯಲ್ಲಿ ವಿವಿಧ ಸಂಘ- ಸಂಸ್ಥೆಗಳ ಮುಖಂಡರಾದ ಕೆ.ಮಂಜುನಾಥ, ಕೆ.ಆರ್. ರವೀಂದ್ರ, ರಾಜಶೇಖರ್, ಅರುಣ ಸಮನವಳ್ಳಿ, ನಾಗರಾಜ ಶುಂಠಿ, ಬಸವರಾಜ್ ಅಗಸನಹಳ್ಳಿ, ನಾಗರಾಜ ಹುರುಳಿಕೊಪ್ಪ, ಅಜಿತ್ ಆಟೋ, ಶ್ರೀಪಾದ, ನಾಗರಾಜ್, ಚನ್ನಬಸಪ್ಪ ಕೋಡಿಹಳ್ಳಿ, ಮುದ್ದಪ್ಪ, ದಾದಾಪೀರ್, ನಿಂಗರಾಜ್, ವಕೀಲ ಸಂಪತ್, ಶಶಾಂಕ್, ಕೃಷ್ಣಪ್ಪ ಲಕ್ಕವಳ್ಳಿ, ನವೀನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-42-1433993682</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನವಟ್ಟಿ: ‘ಇಲ್ಲಿನ ವಾಸವಿ ಕಲ್ಯಾಣ ಮಂಟಪದಲ್ಲಿ ಮೇ 30ರಂದು ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಪಕ್ಷಾತೀತ, ಜಾತ್ಯತೀತವಾಗಿ ಆಚರಿಸಲಾಗುವುದು’ ಎಂದು ಅಂಬೇಡ್ಕರ್ ಅಭಿಮಾನಿ ಬಳಗದ ಅಧ್ಯಕ್ಷ ಸಂಜೀವ್ ನೇರಲಗಿ ತಿಳಿಸಿದರು.</p>.<p>ಪಟ್ಟಣದಲ್ಲಿ ಭಾನುವಾರ ನಡೆದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜಯಂತ್ಯುತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕ್ರಿಕೆಟ್ ನಾಳೆ: ‘ಮೇ 26ರಂದು ಕೆಪಿಎಸ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಿ ಏರ್ಪಡಿಸಲಾಗಿದೆ. ಮೇ 30ರಂದು (ಶನಿವಾರ) ಪಟ್ಟಣದ ವಿಠ್ಠಲ ದೇವಸ್ಥಾನದಿಂದ ಹೆದ್ದಾರಿಯ ಮುಖ್ಯ ಬೀದಿಯಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು’ ಎಂದರು.</p>.<p>‘2025–26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಈ ಸಮಾರಂಭವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಅಂಬೇಡ್ಕರ್ ಭಾವಚಿತ್ರಕ್ಕೆ ಸಂಸದ ಬಿ.ವೈ ರಾಘವೇಂದ್ರ ಪುಷ್ಪಾರ್ಚನೆ ಮಾಡುವರು. ಸಮಾರಂಭದಲ್ಲಿ ಎಲ್ಲಾ ಸಮಾಜದ ಜನರು ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಸಭೆಯಲ್ಲಿ ವಿವಿಧ ಸಂಘ- ಸಂಸ್ಥೆಗಳ ಮುಖಂಡರಾದ ಕೆ.ಮಂಜುನಾಥ, ಕೆ.ಆರ್. ರವೀಂದ್ರ, ರಾಜಶೇಖರ್, ಅರುಣ ಸಮನವಳ್ಳಿ, ನಾಗರಾಜ ಶುಂಠಿ, ಬಸವರಾಜ್ ಅಗಸನಹಳ್ಳಿ, ನಾಗರಾಜ ಹುರುಳಿಕೊಪ್ಪ, ಅಜಿತ್ ಆಟೋ, ಶ್ರೀಪಾದ, ನಾಗರಾಜ್, ಚನ್ನಬಸಪ್ಪ ಕೋಡಿಹಳ್ಳಿ, ಮುದ್ದಪ್ಪ, ದಾದಾಪೀರ್, ನಿಂಗರಾಜ್, ವಕೀಲ ಸಂಪತ್, ಶಶಾಂಕ್, ಕೃಷ್ಣಪ್ಪ ಲಕ್ಕವಳ್ಳಿ, ನವೀನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-42-1433993682</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>