<p>ಆನೇಕಲ್: ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಸೋಮವಾರ ಶೈಕ್ಷಣಿಕ ವರ್ಷ ಆರಂಭವಾದ ಹಿನ್ನೆಲೆ ಬೇಸಿಗೆ ರಜೆ ಮುಗಿಸಿದ ಮಕ್ಕಳು ಕೊಂಚ ಬೇಸರದೊಂದಿಗೆ ಸೋಮವಾರ ಶಾಲೆಗಳತ್ತ ಹೆಜ್ಜೆ ಹಾಕಿದರು. ತಾಲ್ಲೂಕಿನಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು.</p>.<p>ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು. ಜಿಗಣಿಯ ಪಿಎಂಶ್ರೀ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಬರ ಮಾಡಿಕೊಳ್ಳಲಾಯಿತು.</p>.<p>ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ತಳಿರು ತೋರಣಗಳು, ರಂಗೋಲಿ ಹಾಕಿ ಬಲೂನ್ಗಳಿಂದ ಸಿಂಗರಿಸಲಾಗಿತ್ತು. ಮೊದಲ ದಿನ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಿಸಿದ್ದರಿಂದ ಮಕ್ಕಳು ಖುಷಿಪಟ್ಟರು.</p>.<p>ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಶಾಲಾ ಆರಂಭೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳುನಡೆದವು.</p>.<p>ಬೊಮ್ಮಸಂದ್ರ ಪಿಎಂಶ್ರೀ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆಮಹೇಂದ್ರ ಹೋಮ್ಸ್ನ ಮುಖ್ಯಸ್ಥ ಬಿ.ಟಿ.ನಾಗರಾಜರೆಡ್ಡಿ ಚಾಲನೆ ನೀಡಿದರು. ಸರ್ಜಾಪುರ ಹೋಬಳಿಯ ಹಲಸಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಕೇಕ್ ಕತ್ತರಿಸಿ ಮಕ್ಕಳನ್ನು ಸ್ವಾಗತಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-15-512282876</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್: ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಸೋಮವಾರ ಶೈಕ್ಷಣಿಕ ವರ್ಷ ಆರಂಭವಾದ ಹಿನ್ನೆಲೆ ಬೇಸಿಗೆ ರಜೆ ಮುಗಿಸಿದ ಮಕ್ಕಳು ಕೊಂಚ ಬೇಸರದೊಂದಿಗೆ ಸೋಮವಾರ ಶಾಲೆಗಳತ್ತ ಹೆಜ್ಜೆ ಹಾಕಿದರು. ತಾಲ್ಲೂಕಿನಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು.</p>.<p>ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು. ಜಿಗಣಿಯ ಪಿಎಂಶ್ರೀ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಬರ ಮಾಡಿಕೊಳ್ಳಲಾಯಿತು.</p>.<p>ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ತಳಿರು ತೋರಣಗಳು, ರಂಗೋಲಿ ಹಾಕಿ ಬಲೂನ್ಗಳಿಂದ ಸಿಂಗರಿಸಲಾಗಿತ್ತು. ಮೊದಲ ದಿನ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಿಸಿದ್ದರಿಂದ ಮಕ್ಕಳು ಖುಷಿಪಟ್ಟರು.</p>.<p>ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಶಾಲಾ ಆರಂಭೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳುನಡೆದವು.</p>.<p>ಬೊಮ್ಮಸಂದ್ರ ಪಿಎಂಶ್ರೀ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆಮಹೇಂದ್ರ ಹೋಮ್ಸ್ನ ಮುಖ್ಯಸ್ಥ ಬಿ.ಟಿ.ನಾಗರಾಜರೆಡ್ಡಿ ಚಾಲನೆ ನೀಡಿದರು. ಸರ್ಜಾಪುರ ಹೋಬಳಿಯ ಹಲಸಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಕೇಕ್ ಕತ್ತರಿಸಿ ಮಕ್ಕಳನ್ನು ಸ್ವಾಗತಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-15-512282876</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>