<p>ಅಂಕೋಲಾ: ‘ಸಾರ್ವಜನಿಕರಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ, ತಂಬಾಕು ಮುಕ್ತ ಸಮಾಜ ನಿರ್ಮಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು. ಪಿ.ಎಂ.ಹೈಸ್ಕೂಲ್ನ ಎನ್.ಸಿ.ಸಿ ಘಟಕವು ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಂಡು ಜನಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ’ ಎಂದು ಪಿಎಸ್ಐ ಲಲಿತಾ ರಜಪೂತ ಹೇಳಿದರು.</p>.<p>ಪಟ್ಟಣದ ಕೆನರಾ ವೆಲ್ಫೇರ್ ಟ್ರಸ್ಟ್ನ ಪಿ.ಎಂ.ಹೈಸ್ಕೂಲ್ನ ಎನ್.ಸಿ.ಸಿ ಘಟಕ ಮತ್ತು ಅಂಕೋಲಾ ಪೊಲೀಸ್ ಠಾಣೆಯ ವತಿಯಿಂದ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಎನ್.ಸಿ.ಸಿ ಕಮಾಂಡರ್ ಜಿ.ಆರ್.ತಾಂಡೇಲ ಮಾತನಾಡಿ, ‘ಇಂದಿನ ದಿನಗಳಲ್ಲಿ ತಂಬಾಕು, ದೂಮಪಾನದಂತಹ ದುಶ್ಚಟಗಳಿಗೆ ಯುವಜನ ಬಲಿಯಾಗುತ್ತಿರುವುದು ಆತಂಕಕಾರಿ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.</p>.<p>ಮುಖ್ಯಶಿಕ್ಷಕ ಚಂದ್ರಶೇಖರ ಕಡೆಮನಿ ಮಾತನಾಡಿದರು. ಅಂಕೋಲಾ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಹವಾಲ್ದಾರ್ ಪಂಡರಿನಾಥ ಮುಂಬೈಕರ, ಬಾಬು ಹರಿಕಂತ್ರ, ಮಹಾಬಲೇಶ್ವರ ನಾಯಕ ಹಾಗೂ ಎನ್.ಸಿ.ಸಿ. ಕೆಡೆಟ್ ಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-20-49322259</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಂಕೋಲಾ: ‘ಸಾರ್ವಜನಿಕರಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ, ತಂಬಾಕು ಮುಕ್ತ ಸಮಾಜ ನಿರ್ಮಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು. ಪಿ.ಎಂ.ಹೈಸ್ಕೂಲ್ನ ಎನ್.ಸಿ.ಸಿ ಘಟಕವು ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಂಡು ಜನಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ’ ಎಂದು ಪಿಎಸ್ಐ ಲಲಿತಾ ರಜಪೂತ ಹೇಳಿದರು.</p>.<p>ಪಟ್ಟಣದ ಕೆನರಾ ವೆಲ್ಫೇರ್ ಟ್ರಸ್ಟ್ನ ಪಿ.ಎಂ.ಹೈಸ್ಕೂಲ್ನ ಎನ್.ಸಿ.ಸಿ ಘಟಕ ಮತ್ತು ಅಂಕೋಲಾ ಪೊಲೀಸ್ ಠಾಣೆಯ ವತಿಯಿಂದ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಎನ್.ಸಿ.ಸಿ ಕಮಾಂಡರ್ ಜಿ.ಆರ್.ತಾಂಡೇಲ ಮಾತನಾಡಿ, ‘ಇಂದಿನ ದಿನಗಳಲ್ಲಿ ತಂಬಾಕು, ದೂಮಪಾನದಂತಹ ದುಶ್ಚಟಗಳಿಗೆ ಯುವಜನ ಬಲಿಯಾಗುತ್ತಿರುವುದು ಆತಂಕಕಾರಿ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.</p>.<p>ಮುಖ್ಯಶಿಕ್ಷಕ ಚಂದ್ರಶೇಖರ ಕಡೆಮನಿ ಮಾತನಾಡಿದರು. ಅಂಕೋಲಾ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಹವಾಲ್ದಾರ್ ಪಂಡರಿನಾಥ ಮುಂಬೈಕರ, ಬಾಬು ಹರಿಕಂತ್ರ, ಮಹಾಬಲೇಶ್ವರ ನಾಯಕ ಹಾಗೂ ಎನ್.ಸಿ.ಸಿ. ಕೆಡೆಟ್ ಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-20-49322259</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>