<p>ಔರಾದ್(ಎಸ್)(ಜನವಾಡ): ‘ಮಕ್ಕಳಲ್ಲಿ ಶಿಕ್ಷಣದ ಜತೆ ಮಾನವೀಯ ಮೌಲ್ಯಗಳನ್ನೂ ಬೆಳೆಸಬೇಕು’ ಎಂದು ಬಿಜೆಪಿ ಮುಖಂಡ ರಾಜರೆಡ್ಡಿ ಶಹಾಬಾದ್ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಔರಾದ್(ಎಸ್) ಗ್ರಾಮದ ಮಾರುತಿ ಮಾಸ್ಟರ್ ಶಿಕ್ಷಣ ಸಂಸ್ಥೆಯ ಸಂಚಾಲಿತ ವಿದ್ಯಾ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಕ್ಷಣ ಹಾಗೂ ಸಂಸ್ಕಾರ ಒಂದೇ ನಾಣ್ಯದ ಎರಡು ಮುಖಗಳು. ಮಕ್ಕಳಿಗೆ ಸಂಸ್ಕಾರ ನೀಡುವ ಕೆಲಸ ಮನೆಯಿಂದಲೇ ಆರಂಭವಾಗಬೇಕು’ ಎಂದು ತಿಳಿಸಿದರು.</p>.<p>ಸಂಸ್ಥೆಯ ಕಾರ್ಯದರ್ಶಿ ಮಾರುತಿ ಮಾಸ್ಟರ್ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮಿ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರಾಜರೆಡ್ಡಿ ಗಂಗ್ವಾರ್, ಸೂರ್ಯಕಾಂತ ಪಾಟೀಲ, ವಿಜಯಕುಮಾರ ಚೌಡಾ, ನಾಗಶೆಟ್ಟಿ ಚಟ್ನಳ್ಳಿ, ಸಂಗ್ರಾಮ ಹೊಕ್ರಾಣ, ರಾಜಮತಿ ಸೌದಾಗರ್ ಇದ್ದರು.</p>.<p>ಕಾವೇರಿ ಸ್ವಾಗತಿಸಿದರು. ನಿಕಿತಾ ನಿರೂಪಿಸಿದರು. ವಿದ್ಯಾಸಾಗರ ಧಡೆ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-33-89886520</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್(ಎಸ್)(ಜನವಾಡ): ‘ಮಕ್ಕಳಲ್ಲಿ ಶಿಕ್ಷಣದ ಜತೆ ಮಾನವೀಯ ಮೌಲ್ಯಗಳನ್ನೂ ಬೆಳೆಸಬೇಕು’ ಎಂದು ಬಿಜೆಪಿ ಮುಖಂಡ ರಾಜರೆಡ್ಡಿ ಶಹಾಬಾದ್ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಔರಾದ್(ಎಸ್) ಗ್ರಾಮದ ಮಾರುತಿ ಮಾಸ್ಟರ್ ಶಿಕ್ಷಣ ಸಂಸ್ಥೆಯ ಸಂಚಾಲಿತ ವಿದ್ಯಾ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಕ್ಷಣ ಹಾಗೂ ಸಂಸ್ಕಾರ ಒಂದೇ ನಾಣ್ಯದ ಎರಡು ಮುಖಗಳು. ಮಕ್ಕಳಿಗೆ ಸಂಸ್ಕಾರ ನೀಡುವ ಕೆಲಸ ಮನೆಯಿಂದಲೇ ಆರಂಭವಾಗಬೇಕು’ ಎಂದು ತಿಳಿಸಿದರು.</p>.<p>ಸಂಸ್ಥೆಯ ಕಾರ್ಯದರ್ಶಿ ಮಾರುತಿ ಮಾಸ್ಟರ್ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮಿ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರಾಜರೆಡ್ಡಿ ಗಂಗ್ವಾರ್, ಸೂರ್ಯಕಾಂತ ಪಾಟೀಲ, ವಿಜಯಕುಮಾರ ಚೌಡಾ, ನಾಗಶೆಟ್ಟಿ ಚಟ್ನಳ್ಳಿ, ಸಂಗ್ರಾಮ ಹೊಕ್ರಾಣ, ರಾಜಮತಿ ಸೌದಾಗರ್ ಇದ್ದರು.</p>.<p>ಕಾವೇರಿ ಸ್ವಾಗತಿಸಿದರು. ನಿಕಿತಾ ನಿರೂಪಿಸಿದರು. ವಿದ್ಯಾಸಾಗರ ಧಡೆ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-33-89886520</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>