<p>ಬಾಗಲಕೋಟೆ: ‘ಕಲೆ ಇದ್ದಲ್ಲಿ ವಿಕಾಸ ಇರುತ್ತದೆ. ಸರ್ವವ್ಯಾಪಿಯಾದ ಕಲಾ ಕೌಶಲದ ಜೊತೆಗೆ ಸೃಜನಶೀಲತೆ, ಜ್ಞಾನ ಮತ್ತು ಆತ್ಮಸ್ಥೈರ್ಯ ಬೆಳೆಸಿಕೊಂಡರೆ ಬಯಸಿದಂತಹ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ’ ಎಂದು ಬಿವಿವಿ ಸಂಘದ ಆಡಳಿತ ಅಧಿಕಾರಿ ವಿಜಯಕುಮಾರ ಕಟಗಿಹಳ್ಳಿಮಠ ಹೇಳಿದರು.</p>.<p>ಬಿವಿವಿ ಸಂಘದ ಬಸವೇಶ್ವರ ಕಲಾ ಕಾಲೇಜಿನ ಸಭಾಭವನದಲ್ಲಿ ಆಂತರಿಕ ಗುಣಮಟ್ಟ ಭರವಸೆ ಘಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆ ಸಹಯೋಗದಲ್ಲಿಬುಧವಾರ ನಡೆದ ‘ಕಲಾ ಸಿರಿ’ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಪ್ರಾಚಾರ್ಯ ಎಸ್.ಆರ್. ಮೂಗನೂರಮಠ ಮಾತನಾಡಿ, ‘ಕೀಳರಿಮೆಯ ಭಾವನೆ ಮೆಟ್ಟಿ ನಿಂತಾಗ ಸಾಧನೆ ಮಾಡಲು ಸಾಧ್ಯ’ ಎಂದರು.</p>.<p>ವಿದ್ಯಾರ್ಥಿನಿಯರ ಡೊಳ್ಳು ಕುಣಿತ ಮತ್ತು ಸಾಂಪ್ರದಾಯಿಕ ಉಡುಗೆಗಳು ಗಮನ ಸೆಳೆದವು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾಂಸ್ಕೃತಿಕ ಚಟುವಟಿಕೆಯ ಸಂಯೋಜಕ ಕೆ.ವಿ. ಮಠ, ಎ.ಯು. ರಾಠೋಡ, ತಾನಾಜಿ ವಿಭೂತಿ, ಗಾಯತ್ರಿ ರಾಠೋಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-19-1684379904</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಕಲೆ ಇದ್ದಲ್ಲಿ ವಿಕಾಸ ಇರುತ್ತದೆ. ಸರ್ವವ್ಯಾಪಿಯಾದ ಕಲಾ ಕೌಶಲದ ಜೊತೆಗೆ ಸೃಜನಶೀಲತೆ, ಜ್ಞಾನ ಮತ್ತು ಆತ್ಮಸ್ಥೈರ್ಯ ಬೆಳೆಸಿಕೊಂಡರೆ ಬಯಸಿದಂತಹ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ’ ಎಂದು ಬಿವಿವಿ ಸಂಘದ ಆಡಳಿತ ಅಧಿಕಾರಿ ವಿಜಯಕುಮಾರ ಕಟಗಿಹಳ್ಳಿಮಠ ಹೇಳಿದರು.</p>.<p>ಬಿವಿವಿ ಸಂಘದ ಬಸವೇಶ್ವರ ಕಲಾ ಕಾಲೇಜಿನ ಸಭಾಭವನದಲ್ಲಿ ಆಂತರಿಕ ಗುಣಮಟ್ಟ ಭರವಸೆ ಘಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆ ಸಹಯೋಗದಲ್ಲಿಬುಧವಾರ ನಡೆದ ‘ಕಲಾ ಸಿರಿ’ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಪ್ರಾಚಾರ್ಯ ಎಸ್.ಆರ್. ಮೂಗನೂರಮಠ ಮಾತನಾಡಿ, ‘ಕೀಳರಿಮೆಯ ಭಾವನೆ ಮೆಟ್ಟಿ ನಿಂತಾಗ ಸಾಧನೆ ಮಾಡಲು ಸಾಧ್ಯ’ ಎಂದರು.</p>.<p>ವಿದ್ಯಾರ್ಥಿನಿಯರ ಡೊಳ್ಳು ಕುಣಿತ ಮತ್ತು ಸಾಂಪ್ರದಾಯಿಕ ಉಡುಗೆಗಳು ಗಮನ ಸೆಳೆದವು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾಂಸ್ಕೃತಿಕ ಚಟುವಟಿಕೆಯ ಸಂಯೋಜಕ ಕೆ.ವಿ. ಮಠ, ಎ.ಯು. ರಾಠೋಡ, ತಾನಾಜಿ ವಿಭೂತಿ, ಗಾಯತ್ರಿ ರಾಠೋಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-19-1684379904</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>