<p>ಬಾಗಲಕೋಟೆ: ಶೂನ್ಯ ನೆರಳು ದಿನದ ಬಗ್ಗೆ ತಿಳಿದುಕೊಂಡು ಖಗೋಳ ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಬ್ರಿಲಿಯಂಟ್ ಅಕಾಡೆಮಿ ಕಾರ್ಯದರ್ಶಿ ಆನಂದ ರಾಠೋಡ ಹೇಳಿದರು.</p>.<p>ನಗರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಬ್ರಿಲಿಯಂಟ್ ಅಕಾಡೆಮಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶೂನ್ಯ ನೆರಳು ದಿನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿದ್ದ ಶಂಕ್ರಪ್ಪ ಸಕ್ರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ವಿಜಯಕುಮಾರ ಕೆ ಮಾತನಾಡಿ, ಶೂನ್ಯ ನೆರಳಿನ ದಿನದ ಸ್ವಾರಸ್ಯಕರ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು. ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದಂತೆ ವಿವಿಧ ಆಕಾಶ ಕಾಯಗಳು, ನಕ್ಷತ್ರ ಪುಂಜಗಳ ಅಧ್ಯಯನದ ಮಾಹಿತಿ ನೀಡಿದರು.</p>.<p>ಸೂರ್ಯನ ಚಲನೆಯನ್ನು ವಿಶೇಷ ಸೂರ್ಯ ಮಸೂರಗಳನ್ನು ಬಳಸಿಕೊಂಡು ನೋಡಲಾಯಿತು. ಮಧ್ಯಾಹ್ನ 12.24ಕ್ಕೆ ಸೂರ್ಯನ ಕಿರಣಗಳು ಲಂಬವಾಗಿ ಬೀಳುವ ಮೂಲಕ ಸಂಭವಿಸಿದ ಶೂನ್ಯ ನೆರಳನ್ನು ಪ್ರಾಯೋಗಿಕ ಚಟುವಟಿಕೆಯ ಮೂಲಕ ತಿಳಿಸಿಕೊಡಲಾಯಿತು.</p>.<p>ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಈರಣ್ಣ ಬುಳ್ಳಾ, ತಾಂತ್ರಿಕ ಸಹಾಯಕ ಆಸೀಫ್ ಬಾಗವಾನ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-19-823567064</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಶೂನ್ಯ ನೆರಳು ದಿನದ ಬಗ್ಗೆ ತಿಳಿದುಕೊಂಡು ಖಗೋಳ ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಬ್ರಿಲಿಯಂಟ್ ಅಕಾಡೆಮಿ ಕಾರ್ಯದರ್ಶಿ ಆನಂದ ರಾಠೋಡ ಹೇಳಿದರು.</p>.<p>ನಗರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಬ್ರಿಲಿಯಂಟ್ ಅಕಾಡೆಮಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶೂನ್ಯ ನೆರಳು ದಿನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿದ್ದ ಶಂಕ್ರಪ್ಪ ಸಕ್ರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ವಿಜಯಕುಮಾರ ಕೆ ಮಾತನಾಡಿ, ಶೂನ್ಯ ನೆರಳಿನ ದಿನದ ಸ್ವಾರಸ್ಯಕರ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು. ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದಂತೆ ವಿವಿಧ ಆಕಾಶ ಕಾಯಗಳು, ನಕ್ಷತ್ರ ಪುಂಜಗಳ ಅಧ್ಯಯನದ ಮಾಹಿತಿ ನೀಡಿದರು.</p>.<p>ಸೂರ್ಯನ ಚಲನೆಯನ್ನು ವಿಶೇಷ ಸೂರ್ಯ ಮಸೂರಗಳನ್ನು ಬಳಸಿಕೊಂಡು ನೋಡಲಾಯಿತು. ಮಧ್ಯಾಹ್ನ 12.24ಕ್ಕೆ ಸೂರ್ಯನ ಕಿರಣಗಳು ಲಂಬವಾಗಿ ಬೀಳುವ ಮೂಲಕ ಸಂಭವಿಸಿದ ಶೂನ್ಯ ನೆರಳನ್ನು ಪ್ರಾಯೋಗಿಕ ಚಟುವಟಿಕೆಯ ಮೂಲಕ ತಿಳಿಸಿಕೊಡಲಾಯಿತು.</p>.<p>ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಈರಣ್ಣ ಬುಳ್ಳಾ, ತಾಂತ್ರಿಕ ಸಹಾಯಕ ಆಸೀಫ್ ಬಾಗವಾನ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-19-823567064</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>