<p>ಬಾಗಲಕೋಟೆ: ಕೇಂದ್ರದ ಸಂಸ್ಕೃತಿ ಸಚಿವಾಲಯದ ವತಿಯಿಂದ ಜ್ಞಾನ ಭಾರತಮ್ ಮಿಷನ್ ಯೋಜನೆಯಡಿ ದೇಶದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಹಾಗೂ ದಾಖಲೆಗಳ ಸಮಗ್ರ ಸಮೀಕ್ಷೆ ಮಾಡಲಾಗುತ್ತಿದೆ.</p>.<p>ಅವುಗಳನ್ನು ತಂತ್ರಜ್ಞಾನ ಬಳಸಿ ಶಾಶ್ವತವಾಗಿ ಸಂರಕ್ಷಿಸುವ ಉದ್ದೇಶದಿಂದ ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ, ಅನುದಾನ ಹಾಗೂ ಪ್ರಕಟಣೆ ಕಾರ್ಯ ಕೈಗೊಳ್ಳಲಾಗುತ್ತಿದೆ.</p>.<p>ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಒಂದೇ ರಾಷ್ಟ್ರೀಯ ವೇದಿಕೆಯ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗುತ್ತಿದ್ದು, ಭವಿಷ್ಯದ ಪೀಳಿಗೆಗೆ ಜ್ಞಾನ ಸಂಪತ್ತನ್ನು ಉಳಿಸಿ ಬಳಸಿಕೊಳ್ಳುವ ಅವಕಾಶ ಕಲ್ಪಿಸಲಾಗುತ್ತಿದೆ.</p>.<p>ಈ ಮಹತ್ವದ ಜ್ಞಾನ ಭಾರತ ಮಿಷನ್ ಯೋಜನೆಯನ್ನು ರಾಜ್ಯದಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ. ಇದರ ಭಾಗವಾಗಿ ಹಸ್ತಪ್ರತಿಗಳ ಸಮಗ್ರ ಸರ್ವೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳುವ ಉದ್ದೇಶ ಹೊಂದಲಾಗಿದೆ.</p>.<p>ಜಿಲ್ಲೆಯ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಬಳಿ ಹಸ್ತಪ್ರತಿಗಳ ಸಂಗ್ರಹವಿದ್ದಲ್ಲಿ, ಉಪನಿರ್ದೇಶಕರು ಪ್ರವಾಸೋದ್ಯಮ ಇಲಾಖೆ, ಕೊಠಡಿ ಸಂ.137, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಕಚೇರಿಗೆ ಅಥವಾ ಮೊ.ಸಂ.78295 38950, 73386 28536 ಮಾಹಿತಿ ನೀಡುವಂತೆ ಉಪ ನಿರ್ದೇಶಕ ಜಿ.ಎಸ್.ಹಿತ್ತಲಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-19-1108331434</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಕೇಂದ್ರದ ಸಂಸ್ಕೃತಿ ಸಚಿವಾಲಯದ ವತಿಯಿಂದ ಜ್ಞಾನ ಭಾರತಮ್ ಮಿಷನ್ ಯೋಜನೆಯಡಿ ದೇಶದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಹಾಗೂ ದಾಖಲೆಗಳ ಸಮಗ್ರ ಸಮೀಕ್ಷೆ ಮಾಡಲಾಗುತ್ತಿದೆ.</p>.<p>ಅವುಗಳನ್ನು ತಂತ್ರಜ್ಞಾನ ಬಳಸಿ ಶಾಶ್ವತವಾಗಿ ಸಂರಕ್ಷಿಸುವ ಉದ್ದೇಶದಿಂದ ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ, ಅನುದಾನ ಹಾಗೂ ಪ್ರಕಟಣೆ ಕಾರ್ಯ ಕೈಗೊಳ್ಳಲಾಗುತ್ತಿದೆ.</p>.<p>ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಒಂದೇ ರಾಷ್ಟ್ರೀಯ ವೇದಿಕೆಯ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗುತ್ತಿದ್ದು, ಭವಿಷ್ಯದ ಪೀಳಿಗೆಗೆ ಜ್ಞಾನ ಸಂಪತ್ತನ್ನು ಉಳಿಸಿ ಬಳಸಿಕೊಳ್ಳುವ ಅವಕಾಶ ಕಲ್ಪಿಸಲಾಗುತ್ತಿದೆ.</p>.<p>ಈ ಮಹತ್ವದ ಜ್ಞಾನ ಭಾರತ ಮಿಷನ್ ಯೋಜನೆಯನ್ನು ರಾಜ್ಯದಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ. ಇದರ ಭಾಗವಾಗಿ ಹಸ್ತಪ್ರತಿಗಳ ಸಮಗ್ರ ಸರ್ವೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳುವ ಉದ್ದೇಶ ಹೊಂದಲಾಗಿದೆ.</p>.<p>ಜಿಲ್ಲೆಯ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಬಳಿ ಹಸ್ತಪ್ರತಿಗಳ ಸಂಗ್ರಹವಿದ್ದಲ್ಲಿ, ಉಪನಿರ್ದೇಶಕರು ಪ್ರವಾಸೋದ್ಯಮ ಇಲಾಖೆ, ಕೊಠಡಿ ಸಂ.137, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಕಚೇರಿಗೆ ಅಥವಾ ಮೊ.ಸಂ.78295 38950, 73386 28536 ಮಾಹಿತಿ ನೀಡುವಂತೆ ಉಪ ನಿರ್ದೇಶಕ ಜಿ.ಎಸ್.ಹಿತ್ತಲಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-19-1108331434</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>