<p>ಬಾಗಲಕೋಟೆ: ‘ಶ್ರಮದಾನ, ಸೇವಾ ಭಾವನೆ ಮೂಲಕ ಶ್ರಮ ಸಂಸ್ಕೃತಿ ಕಲಿಸಿದರೆ, ಸಹೋದರತ್ವ ಭಾವ, ಸಹಬಾಳ್ವೆ, ಸಹಕಾರ ಮನೋಭಾವ ಬೆಳೆಸುವಲ್ಲಿ ಎನ್ಎಸ್ಎಸ್ ಶಿಬಿರಗಳು ಪೂರಕವಾಗಿವೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಬಾಗಲಕೋಟೆ ತಾಲ್ಲೂಕು ಘಟಕದ ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ ಹೇಳಿದರು.</p>.<p>ಬಾಗಲಕೋಟೆ ಸಮೀಪದ ಮುಚಖಂಡಿ ಗ್ರಾಮದ ವೀರಭದ್ರೇಶ್ವರ ಸಭಾ ಮಂಟಪದಲ್ಲಿ ಭಾನುವಾರ ನಡೆದ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಬದುಕಿನ ಜೀವನದ ಮೌಲ್ಯಗಳನ್ನು ಕಲಿಸಿ, ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ’ ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಗುಳೇದಗುಡ್ಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ರೇವಣಸಿದ್ಧಪ್ಪ ಮಾತನಾಡಿ, ‘ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ, ಅವುಗಳ ಪ್ರೋತ್ಸಾಹಕ್ಕೆ ಶಿಬಿರಗಳು ಅಗತ್ಯವಾಗಿವೆ’ ಎಂದು ತಿಳಿಸಿದರು.</p>.<p>ಅತಿಥಿಗಳಾಗಿದ್ದ ಹಿರಿಯ ಯೋಗ ತರಬೇತುದಾರ ರಾಜಶೇಖರ ಅಡಿಕೆನವರ, ಸಂಗಮೇಶ ಬಡಿಗೇರ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿ, ‘ಎನ್ಎಸ್ಎಸ್ ಶಿಬಿರಗಳು ಶಿಬಿರಾರ್ಥಿಗಳಲ್ಲಿ ಸೇವಾ ಮನೋಭಾವ, ಸಮಯ ಪಾಲನೆ, ಶಿಸ್ತು, ಪ್ರಾಮಾಣಿಕತೆ ಬೆಳೆಸುತ್ತವೆ. ಶಿಬಿರಾರ್ಥಿಗಳು ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಂಡು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಎನ್ಎಸ್ಎಸ್. ಘಟಕದ ಕ್ರಾರ್ಯಕ್ರಮಾಧಿಕಾರಿ ಪ್ರೊ.ಸಂಪತ್ ಲಮಾಣಿ, ಐಕ್ಯೂಎಸಿ ಸಂಚಾಲಕ ಬಸವರಾಜ ಬೀಳಗಿ, ಚಂದ್ರಶೇಖರ ಕಾಳನ್ನವರ, ಕ್ರೀಡಾ ನಿರ್ದೇಶಕ ನೀಲಪ್ಪ ಕುರಿ, ಪ್ರೊ.ಶಿವಶಂಕರ ಪ್ರಸಾದ, ಪ್ರೇಮಾ ಗೆಜ್ಜಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-19-1652151945</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಶ್ರಮದಾನ, ಸೇವಾ ಭಾವನೆ ಮೂಲಕ ಶ್ರಮ ಸಂಸ್ಕೃತಿ ಕಲಿಸಿದರೆ, ಸಹೋದರತ್ವ ಭಾವ, ಸಹಬಾಳ್ವೆ, ಸಹಕಾರ ಮನೋಭಾವ ಬೆಳೆಸುವಲ್ಲಿ ಎನ್ಎಸ್ಎಸ್ ಶಿಬಿರಗಳು ಪೂರಕವಾಗಿವೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಬಾಗಲಕೋಟೆ ತಾಲ್ಲೂಕು ಘಟಕದ ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ ಹೇಳಿದರು.</p>.<p>ಬಾಗಲಕೋಟೆ ಸಮೀಪದ ಮುಚಖಂಡಿ ಗ್ರಾಮದ ವೀರಭದ್ರೇಶ್ವರ ಸಭಾ ಮಂಟಪದಲ್ಲಿ ಭಾನುವಾರ ನಡೆದ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಬದುಕಿನ ಜೀವನದ ಮೌಲ್ಯಗಳನ್ನು ಕಲಿಸಿ, ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ’ ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಗುಳೇದಗುಡ್ಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ರೇವಣಸಿದ್ಧಪ್ಪ ಮಾತನಾಡಿ, ‘ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ, ಅವುಗಳ ಪ್ರೋತ್ಸಾಹಕ್ಕೆ ಶಿಬಿರಗಳು ಅಗತ್ಯವಾಗಿವೆ’ ಎಂದು ತಿಳಿಸಿದರು.</p>.<p>ಅತಿಥಿಗಳಾಗಿದ್ದ ಹಿರಿಯ ಯೋಗ ತರಬೇತುದಾರ ರಾಜಶೇಖರ ಅಡಿಕೆನವರ, ಸಂಗಮೇಶ ಬಡಿಗೇರ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿ, ‘ಎನ್ಎಸ್ಎಸ್ ಶಿಬಿರಗಳು ಶಿಬಿರಾರ್ಥಿಗಳಲ್ಲಿ ಸೇವಾ ಮನೋಭಾವ, ಸಮಯ ಪಾಲನೆ, ಶಿಸ್ತು, ಪ್ರಾಮಾಣಿಕತೆ ಬೆಳೆಸುತ್ತವೆ. ಶಿಬಿರಾರ್ಥಿಗಳು ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಂಡು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಎನ್ಎಸ್ಎಸ್. ಘಟಕದ ಕ್ರಾರ್ಯಕ್ರಮಾಧಿಕಾರಿ ಪ್ರೊ.ಸಂಪತ್ ಲಮಾಣಿ, ಐಕ್ಯೂಎಸಿ ಸಂಚಾಲಕ ಬಸವರಾಜ ಬೀಳಗಿ, ಚಂದ್ರಶೇಖರ ಕಾಳನ್ನವರ, ಕ್ರೀಡಾ ನಿರ್ದೇಶಕ ನೀಲಪ್ಪ ಕುರಿ, ಪ್ರೊ.ಶಿವಶಂಕರ ಪ್ರಸಾದ, ಪ್ರೇಮಾ ಗೆಜ್ಜಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-19-1652151945</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>