<p>ಬಳ್ಳಾರಿ: ‘ಪ್ರಾಥಮಿಕ ಶಾಲೆಯಿಂದ ವಿಶ್ವವಿದ್ಯಾಲಯದವರೆಗೆ ಕನ್ನಡ ಶಿಕ್ಷಕರ ಕೊರತೆ ಕಾಣಿಸುತ್ತಿದೆ. ಭಾಷೆಯ ಅಭಿವೃದ್ಧಿಗೆ ನಿರಂತರ ಪ್ರಯತ್ನ ಅಗತ್ಯವಿದೆ’ ಎಂದು ಸಾಹಿತಿ ಹಾಗೂ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಅರವಿಂದ್ ಪಟೀಲ್ ಹೇಳಿದರು.</p>.<p>ವೀರಶೈವ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಕವನ ಪ್ರಕಾಶನ, ಕೊಟ್ಟೂರು ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ನಿಷ್ಠಿ ರುದ್ರಪ್ಪ ಅವರ ‘ಸ್ವಾದ ಬೇಕ್ರಿ’ ಪ್ರಬಂಧ ಸಂಕಲನ ಬಿಡುಗಡೆ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡದಲ್ಲಿ ಲಲಿತ ಪ್ರಬಂಧ ಬರೆಯುವ ಅಭ್ಯಾಸವನ್ನು ಉಪನ್ಯಾಸಕರು ಬೆಳೆಸಿಕೊಳ್ಳಬೇಕು’ ಎಂದು ಕರೆ ನೀಡಿದರು.</p>.<p>ಕೃತಿಯನ್ನು ಬಿಡುಗಡೆ ಮಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಿ.ಬಿ. ಚಿಲ್ಕರಾಗಿ, ‘ಸ್ಥಳೀಯ ವಿಷಯಗಳನ್ನು ಒಳಗೊಂಡ ಈ ಕೃತಿ ವಸ್ತುನಿಷ್ಠವಾಗಿ ಉಳಿಯುವ ಶಕ್ತಿಯಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಖ್ಯಾತ ಕಥೆಗಾರ ವೀರೇಂದ್ರ ರಾವಿಹಾಳ್ ಕೃತಿಯ ಆಳವಾದ ಚಿಂತನೆ ಹಾಗೂ ವೈವಿಧ್ಯವನ್ನು ಪರಿಚಯಿಸಿದರು.</p>.<p>ಅಬ್ದುಲ್ ಹೈ ತೋರಣಗಲ್ಲು, ಶರಣಬಸವ ಮತ್ತು ಭ್ರಮರಾಂಭ ಯಾಟಿ ಅವರನ್ನು ಸನ್ಮಾನಿಸಲಾಯಿತು. ಗಣ್ಯರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-25-1982853691</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ‘ಪ್ರಾಥಮಿಕ ಶಾಲೆಯಿಂದ ವಿಶ್ವವಿದ್ಯಾಲಯದವರೆಗೆ ಕನ್ನಡ ಶಿಕ್ಷಕರ ಕೊರತೆ ಕಾಣಿಸುತ್ತಿದೆ. ಭಾಷೆಯ ಅಭಿವೃದ್ಧಿಗೆ ನಿರಂತರ ಪ್ರಯತ್ನ ಅಗತ್ಯವಿದೆ’ ಎಂದು ಸಾಹಿತಿ ಹಾಗೂ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಅರವಿಂದ್ ಪಟೀಲ್ ಹೇಳಿದರು.</p>.<p>ವೀರಶೈವ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಕವನ ಪ್ರಕಾಶನ, ಕೊಟ್ಟೂರು ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ನಿಷ್ಠಿ ರುದ್ರಪ್ಪ ಅವರ ‘ಸ್ವಾದ ಬೇಕ್ರಿ’ ಪ್ರಬಂಧ ಸಂಕಲನ ಬಿಡುಗಡೆ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡದಲ್ಲಿ ಲಲಿತ ಪ್ರಬಂಧ ಬರೆಯುವ ಅಭ್ಯಾಸವನ್ನು ಉಪನ್ಯಾಸಕರು ಬೆಳೆಸಿಕೊಳ್ಳಬೇಕು’ ಎಂದು ಕರೆ ನೀಡಿದರು.</p>.<p>ಕೃತಿಯನ್ನು ಬಿಡುಗಡೆ ಮಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಿ.ಬಿ. ಚಿಲ್ಕರಾಗಿ, ‘ಸ್ಥಳೀಯ ವಿಷಯಗಳನ್ನು ಒಳಗೊಂಡ ಈ ಕೃತಿ ವಸ್ತುನಿಷ್ಠವಾಗಿ ಉಳಿಯುವ ಶಕ್ತಿಯಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಖ್ಯಾತ ಕಥೆಗಾರ ವೀರೇಂದ್ರ ರಾವಿಹಾಳ್ ಕೃತಿಯ ಆಳವಾದ ಚಿಂತನೆ ಹಾಗೂ ವೈವಿಧ್ಯವನ್ನು ಪರಿಚಯಿಸಿದರು.</p>.<p>ಅಬ್ದುಲ್ ಹೈ ತೋರಣಗಲ್ಲು, ಶರಣಬಸವ ಮತ್ತು ಭ್ರಮರಾಂಭ ಯಾಟಿ ಅವರನ್ನು ಸನ್ಮಾನಿಸಲಾಯಿತು. ಗಣ್ಯರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-25-1982853691</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>