<p>ಕುರುಗೋಡು: ತಾಲ್ಲೂಕಿನ ಬಾದನಹಟ್ಟಿ ಗ್ರಾಮದ ಸರ್ಕಾರಿ ಶಾಲೆಯನ್ನು ಕೆಪಿಎಸ್ ಶಾಲೆಗೆ ವಿಲೀನಗೊಳಿಸುವುದನ್ನು ವಿರೋಧಿಸಿದ ಪಾಲಕರು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಶಾಲೆಯ ಮುಂದೆ ಬ್ಯಾನರ್ ಕಟ್ಟಿ ಪ್ರತಿಭಟನೆ ನಡೆಸಿದ ಪೋಷಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಐಕೆಕೆಎಂಎಸ್ ರೈತ ಸಂಘಟನೆ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆರಂಭಿಸುವ ಮೊದಲು ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸದೆ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.</p>.<p>ಎಐಡಿಎಸ್ಒ ಮುಖಂಡ ಜನಗದೀಶ ನೇಮಕಲ್ ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ ವಿರುದ್ಧ ರಾಜ್ಯವ್ಯಾಪಿ ಹೋರಾಟಗಳು ನಡೆಯುತ್ತಿವೆ. ಆದರೂ ಸರ್ಕಾರ ಈ ಬಗ್ಗೆ ಚಿಂತಿಸದೆ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಮುಚ್ಚಿ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಈ ಕುರಿತು ಸರ್ಕಾರ ಮರುಚಿಂತನೆ ಮಾಡಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಈ ವೇಳೆ ಅತಿಥಿ ಶಿಕ್ಷಕ ಶೇಖರ, ಮುಖಂಡರಾದ ಗಾದಿಲಿಂಗಪ್ಪ, ಕರಿಬಸಪ್ಪ, ನವೀನ್, ಮಲ್ಲಿಕಾರ್ಜುನ, ಕಾಂತೇಶ, ಶಾಂತಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-25-878270326</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುರುಗೋಡು: ತಾಲ್ಲೂಕಿನ ಬಾದನಹಟ್ಟಿ ಗ್ರಾಮದ ಸರ್ಕಾರಿ ಶಾಲೆಯನ್ನು ಕೆಪಿಎಸ್ ಶಾಲೆಗೆ ವಿಲೀನಗೊಳಿಸುವುದನ್ನು ವಿರೋಧಿಸಿದ ಪಾಲಕರು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಶಾಲೆಯ ಮುಂದೆ ಬ್ಯಾನರ್ ಕಟ್ಟಿ ಪ್ರತಿಭಟನೆ ನಡೆಸಿದ ಪೋಷಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಐಕೆಕೆಎಂಎಸ್ ರೈತ ಸಂಘಟನೆ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆರಂಭಿಸುವ ಮೊದಲು ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸದೆ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.</p>.<p>ಎಐಡಿಎಸ್ಒ ಮುಖಂಡ ಜನಗದೀಶ ನೇಮಕಲ್ ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ ವಿರುದ್ಧ ರಾಜ್ಯವ್ಯಾಪಿ ಹೋರಾಟಗಳು ನಡೆಯುತ್ತಿವೆ. ಆದರೂ ಸರ್ಕಾರ ಈ ಬಗ್ಗೆ ಚಿಂತಿಸದೆ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಮುಚ್ಚಿ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಈ ಕುರಿತು ಸರ್ಕಾರ ಮರುಚಿಂತನೆ ಮಾಡಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಈ ವೇಳೆ ಅತಿಥಿ ಶಿಕ್ಷಕ ಶೇಖರ, ಮುಖಂಡರಾದ ಗಾದಿಲಿಂಗಪ್ಪ, ಕರಿಬಸಪ್ಪ, ನವೀನ್, ಮಲ್ಲಿಕಾರ್ಜುನ, ಕಾಂತೇಶ, ಶಾಂತಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-25-878270326</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>