<p>ತೆಕ್ಕಲಕೋಟೆ: 'ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣ ಇಂದಿನ ಅವಶ್ಯಕತೆ ಆಗಿದೆ. ಮದರಸಾಗಳು ಔಪಚಾರಿಕ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ' ಎಂದು ಬಳ್ಳಾರಿ ಜಿಲ್ಲಾ ಎಸ್ಎಫ್ಐ ಕಾರ್ಯದರ್ಶಿ ಬುರ್ಹಾನುದ್ದೀನ್ ಹೇಳಿದರು.</p>.<p>ಪಟ್ಟಣದ ನಿಟ್ಟೂರು ರಸ್ತೆಯ ಆದೋನಿ ಸಾಹೇಬ್ ದರ್ಗಾದ ಆವರಣ ದಲ್ಲಿ ಮಂಗಳವಾರ ಝೀಲ್ ಶೈಕ್ಷಣಿಕ ಸಂಸ್ಥೆ ಆಯೋಜಿಸಿದ್ದ 20 ದಿನಗಳ ಉಚಿತ ಬೇಸಿಗೆ ಶಿಬಿರ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಬಳ್ಳಾರಿಯ ಹಾಫಿಝ್ ಶಬ್ಬೀರ್ ಹಝ್ರತ್ ಗಜ್ಜೆಹಳ್ಳಿ ಮಾತನಾಡಿದರು.</p>.<p>ಶಿಬಿರದಲ್ಲಿ 67 ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ, ಇಂಗ್ಲಿಷ್ ಬುನಾದಿ ಕಲಿಕೆ, ಭಾಷಣ ಕಲೆ, ಗಾಯನ, ಕಂಠಪಾಠ, ಕುರಾನ್ ಪಾರಾಯಣ ಸೇರಿದಂತೆ ಹಲವು ಸ್ಪರ್ಧೆ ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿ ದವರಿಗೆ ಬಹುಮಾನ ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ತೆಕ್ಕಲಕೋಟೆ ಝೀಲ್ ಸಂಸ್ಥೆಯ ಕಾರ್ಯದರ್ಶಿ ಸಿದ್ದೀಕ್ ಸಖಾಫಿ , ಸಯ್ಯಿದ್ ಚಾಂದ್ ಪೀರ್ ಷಾ ಖಾದ್ರಿ, ಜಾಮಿಅ ಮಸ್ಜಿದ್ ಅಧ್ಯಕ್ಷ ಖಾದರ್ ವಲಿ ವೈ, ಮನ್ಸೂರಿ ಮಸ್ಜಿದ್ ಅಧ್ಯಕ್ಷ ಪೀರಾವಲಿ, ಸಹೀದ್ ಸಖಾಫಿ ಅಲ್-ಮಳ್'ಹರಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-25-1012293565</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಕ್ಕಲಕೋಟೆ: 'ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣ ಇಂದಿನ ಅವಶ್ಯಕತೆ ಆಗಿದೆ. ಮದರಸಾಗಳು ಔಪಚಾರಿಕ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ' ಎಂದು ಬಳ್ಳಾರಿ ಜಿಲ್ಲಾ ಎಸ್ಎಫ್ಐ ಕಾರ್ಯದರ್ಶಿ ಬುರ್ಹಾನುದ್ದೀನ್ ಹೇಳಿದರು.</p>.<p>ಪಟ್ಟಣದ ನಿಟ್ಟೂರು ರಸ್ತೆಯ ಆದೋನಿ ಸಾಹೇಬ್ ದರ್ಗಾದ ಆವರಣ ದಲ್ಲಿ ಮಂಗಳವಾರ ಝೀಲ್ ಶೈಕ್ಷಣಿಕ ಸಂಸ್ಥೆ ಆಯೋಜಿಸಿದ್ದ 20 ದಿನಗಳ ಉಚಿತ ಬೇಸಿಗೆ ಶಿಬಿರ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಬಳ್ಳಾರಿಯ ಹಾಫಿಝ್ ಶಬ್ಬೀರ್ ಹಝ್ರತ್ ಗಜ್ಜೆಹಳ್ಳಿ ಮಾತನಾಡಿದರು.</p>.<p>ಶಿಬಿರದಲ್ಲಿ 67 ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ, ಇಂಗ್ಲಿಷ್ ಬುನಾದಿ ಕಲಿಕೆ, ಭಾಷಣ ಕಲೆ, ಗಾಯನ, ಕಂಠಪಾಠ, ಕುರಾನ್ ಪಾರಾಯಣ ಸೇರಿದಂತೆ ಹಲವು ಸ್ಪರ್ಧೆ ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿ ದವರಿಗೆ ಬಹುಮಾನ ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ತೆಕ್ಕಲಕೋಟೆ ಝೀಲ್ ಸಂಸ್ಥೆಯ ಕಾರ್ಯದರ್ಶಿ ಸಿದ್ದೀಕ್ ಸಖಾಫಿ , ಸಯ್ಯಿದ್ ಚಾಂದ್ ಪೀರ್ ಷಾ ಖಾದ್ರಿ, ಜಾಮಿಅ ಮಸ್ಜಿದ್ ಅಧ್ಯಕ್ಷ ಖಾದರ್ ವಲಿ ವೈ, ಮನ್ಸೂರಿ ಮಸ್ಜಿದ್ ಅಧ್ಯಕ್ಷ ಪೀರಾವಲಿ, ಸಹೀದ್ ಸಖಾಫಿ ಅಲ್-ಮಳ್'ಹರಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-25-1012293565</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>