<p>ಬಳ್ಳಾರಿ: ಬೇಸಿಗೆ ರಜೆಯ ನಂತರ ಜಿಲ್ಲೆಯಾದ್ಯಂತ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು ಸೋಮವಾರ ಪುನರಾರಂಭಗೊಂಡಿದ್ದು, ಶಾಲಾ ಆವರಣಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು.</p>.<p>ಹೊಸ ಶೈಕ್ಷಣಿಕ ವರ್ಷದ ಮೊದಲ ದಿನ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲು ಶಾಲೆಗಳು ವಿಶೇಷ ಸಿದ್ಧತೆ ಮಾಡಿಕೊಂಡಿದ್ದವು. ಶಿಕ್ಷಕರು ಶನಿವಾರ ಮತ್ತು ಭಾನುವಾರವೇ ಶಾಲಾ ಕೊಠಡಿ, ಶೌಚಾಲಯ, ಅಡುಗೆ ಮನೆ ಹಾಗೂ ಆವರಣವನ್ನು ಸ್ವಚ್ಛಗೊಳಿಸಿದ್ದರು.</p>.<p>ಸರ್ಕಾರದ ಆದೇಶದಂತೆ 1ನೇ ತರಗತಿಯಿಂದ ಎಸ್ಎಸ್ಎಲ್ಸಿವರೆಗೆ ತರಗತಿಗಳು ಆರಂಭಗೊಂಡಿದ್ದು, ಪ್ರವೇಶ ದ್ವಾರದಲ್ಲೇ ವಿದ್ಯಾರ್ಥಿಗಳಿಗೆ ಹೂವು ನೀಡಿ ಬರಮಾಡಿಕೊಳ್ಳಲಾಯಿತು. ಶಾಲಾ ಕಟ್ಟಡಗಳನ್ನು ತಳಿರು ತೋರಣ, ಬಣ್ಣಬಣ್ಣದ ರಂಗೋಲಿ ಹಾಗೂ ಸ್ವಾಗತ ಫಲಕಗಳಿಂದ ಅಲಂಕೃತಗೊಂಡಿದ್ದವು.</p>.<p>ಆರಂಭೋತ್ಸವದ ಅಂಗವಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಸಿಹಿ ತಿಂಡಿ ನೀಡಲಾಯಿತು. ಮೊದಲ ದಿನವಾಗಿದ್ದರಿಂದ ಅನೇಕ ಕಡೆಗಳಲ್ಲಿ ಪೂರ್ಣ ಪ್ರಮಾಣದ ಪಾಠ-ಪ್ರವಚನಗಳು ನಡೆಯದೆ, ವಿದ್ಯಾರ್ಥಿಗಳ ಪರಿಚಯ ಹಾಗೂ ಪುಸ್ತಕ ವಿತರಣೆಗೆ ಸೀಮಿತವಾಗಿದ್ದವು. ಕೆಲವು ಶಾಲೆಗಳಲ್ಲಿ ಮಕ್ಕಳು ಇನ್ನು ಊರುಗಳಿಂದ ಮರಳದ ಕಾರಣ ಹಾಜರಾತಿ ಕೊಂಚ ಕಡಿಮೆಯಿತ್ತು. ಒಟ್ಟಾರೆ ಜಿಲ್ಲೆಯಾದ್ಯಂತ ಶಾಲೆಗಳ ಪುನರಾರಂಭವು ಉತ್ಸವದ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು.</p>.<p>ಶಾಲಾ ಪ್ರಾರಂಭೋತ್ಸವ ಅಚ್ಚುಕಟ್ಟಾಗಿ ನಡೆದಿದೆ. ಶೇ 80ರಷ್ಟು ಶಾಲೆಗಳಲ್ಲಿ ಪಠ್ಯ ಮತ್ತು ಸಮವಸ್ತ್ರಗಳನ್ನು ವಿತರಣೆ ಮಾಡಲಾಗಿದೆ. ಯಾವುದೇ ಸಮಸ್ಯೆಯಾಗದಂತೆ ಸೋಮವಾರ ಶಾಲೆಗಳು ಆರಂಭವಾಗಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಉಪ ನಿರ್ದೇಶಕರು ಜೆ.ಎನ್ ತಿಪ್ಪೇಸ್ವಾಮಿ ಪ್ರಜಾವಾಣಿಗೆ ತಿಳಿಸಿದರು.</p>.<p>ಕೂಡ್ಲಿಗಿ: ‘ಸರ್ಕಾರಿ ಶಾಲೆಗಳ ಬಲವರ್ಧನೆಗೆ ನಾವು ಬದ್ದರಾಗಿದ್ದೇವೆ’ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.</p>.<p>ತಾಲ್ಲೂಕಿನ ಬಣವಿಕಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ದಾಖಲಾತಿ ಆಂದೋಲನ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಈ ವೇಳೆ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಶಾಲೆಗೆ ಸ್ವಾಗತಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು, ಮುಖಂಡರಾದ ಪಾಪಣ್ಣ, ಲಿಂಗನಗೌಡ, ಆನಂದ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-25-2069158452</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಬೇಸಿಗೆ ರಜೆಯ ನಂತರ ಜಿಲ್ಲೆಯಾದ್ಯಂತ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು ಸೋಮವಾರ ಪುನರಾರಂಭಗೊಂಡಿದ್ದು, ಶಾಲಾ ಆವರಣಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು.</p>.<p>ಹೊಸ ಶೈಕ್ಷಣಿಕ ವರ್ಷದ ಮೊದಲ ದಿನ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲು ಶಾಲೆಗಳು ವಿಶೇಷ ಸಿದ್ಧತೆ ಮಾಡಿಕೊಂಡಿದ್ದವು. ಶಿಕ್ಷಕರು ಶನಿವಾರ ಮತ್ತು ಭಾನುವಾರವೇ ಶಾಲಾ ಕೊಠಡಿ, ಶೌಚಾಲಯ, ಅಡುಗೆ ಮನೆ ಹಾಗೂ ಆವರಣವನ್ನು ಸ್ವಚ್ಛಗೊಳಿಸಿದ್ದರು.</p>.<p>ಸರ್ಕಾರದ ಆದೇಶದಂತೆ 1ನೇ ತರಗತಿಯಿಂದ ಎಸ್ಎಸ್ಎಲ್ಸಿವರೆಗೆ ತರಗತಿಗಳು ಆರಂಭಗೊಂಡಿದ್ದು, ಪ್ರವೇಶ ದ್ವಾರದಲ್ಲೇ ವಿದ್ಯಾರ್ಥಿಗಳಿಗೆ ಹೂವು ನೀಡಿ ಬರಮಾಡಿಕೊಳ್ಳಲಾಯಿತು. ಶಾಲಾ ಕಟ್ಟಡಗಳನ್ನು ತಳಿರು ತೋರಣ, ಬಣ್ಣಬಣ್ಣದ ರಂಗೋಲಿ ಹಾಗೂ ಸ್ವಾಗತ ಫಲಕಗಳಿಂದ ಅಲಂಕೃತಗೊಂಡಿದ್ದವು.</p>.<p>ಆರಂಭೋತ್ಸವದ ಅಂಗವಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಸಿಹಿ ತಿಂಡಿ ನೀಡಲಾಯಿತು. ಮೊದಲ ದಿನವಾಗಿದ್ದರಿಂದ ಅನೇಕ ಕಡೆಗಳಲ್ಲಿ ಪೂರ್ಣ ಪ್ರಮಾಣದ ಪಾಠ-ಪ್ರವಚನಗಳು ನಡೆಯದೆ, ವಿದ್ಯಾರ್ಥಿಗಳ ಪರಿಚಯ ಹಾಗೂ ಪುಸ್ತಕ ವಿತರಣೆಗೆ ಸೀಮಿತವಾಗಿದ್ದವು. ಕೆಲವು ಶಾಲೆಗಳಲ್ಲಿ ಮಕ್ಕಳು ಇನ್ನು ಊರುಗಳಿಂದ ಮರಳದ ಕಾರಣ ಹಾಜರಾತಿ ಕೊಂಚ ಕಡಿಮೆಯಿತ್ತು. ಒಟ್ಟಾರೆ ಜಿಲ್ಲೆಯಾದ್ಯಂತ ಶಾಲೆಗಳ ಪುನರಾರಂಭವು ಉತ್ಸವದ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು.</p>.<p>ಶಾಲಾ ಪ್ರಾರಂಭೋತ್ಸವ ಅಚ್ಚುಕಟ್ಟಾಗಿ ನಡೆದಿದೆ. ಶೇ 80ರಷ್ಟು ಶಾಲೆಗಳಲ್ಲಿ ಪಠ್ಯ ಮತ್ತು ಸಮವಸ್ತ್ರಗಳನ್ನು ವಿತರಣೆ ಮಾಡಲಾಗಿದೆ. ಯಾವುದೇ ಸಮಸ್ಯೆಯಾಗದಂತೆ ಸೋಮವಾರ ಶಾಲೆಗಳು ಆರಂಭವಾಗಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಉಪ ನಿರ್ದೇಶಕರು ಜೆ.ಎನ್ ತಿಪ್ಪೇಸ್ವಾಮಿ ಪ್ರಜಾವಾಣಿಗೆ ತಿಳಿಸಿದರು.</p>.<p>ಕೂಡ್ಲಿಗಿ: ‘ಸರ್ಕಾರಿ ಶಾಲೆಗಳ ಬಲವರ್ಧನೆಗೆ ನಾವು ಬದ್ದರಾಗಿದ್ದೇವೆ’ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.</p>.<p>ತಾಲ್ಲೂಕಿನ ಬಣವಿಕಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ದಾಖಲಾತಿ ಆಂದೋಲನ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಈ ವೇಳೆ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಶಾಲೆಗೆ ಸ್ವಾಗತಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು, ಮುಖಂಡರಾದ ಪಾಪಣ್ಣ, ಲಿಂಗನಗೌಡ, ಆನಂದ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-25-2069158452</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>