<p>ಬಳ್ಳಾರಿ: ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಾಂಸ್ಕೃತಿಕ ಅಭಿವ್ಯಕ್ತಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ರಂಗತೋರಣ ಸಂಸ್ಥೆ ಬಯಲಾಟ ತರಬೇತಿ ಶಿಬಿರ ಆಯೋಜಿಸಿದೆ.</p>.<p>ಏಪ್ರಿಲ್ 28ರಿಂದ ಮೇ 18ರವರೆಗೆ ಪ್ರತಿದಿನ ಸಂಜೆ 4ರಿಂದ 7ರವರೆಗೆ ನಗರದ ರಾಜಕುಮಾರ ರಸ್ತೆಯ ಕೆ.ಎಂ. ಟ್ರೇಡರ್ಸ್ ಹಿಂಭಾಗದ ‘ಪಾಂಚಜನ್ಯ’ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ. 10ನೇ ತರಗತಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಈ ಶಿಬಿರ ರೂಪಿಸಲಾಗಿದೆ.</p>.<p>ಜಾನಪದ ವಿದ್ವಾಂಸ ಮುದ್ದಟನೂರು ಎಚ್. ತಿಪ್ಪೇಸ್ವಾಮಿ ಅವರು ಮಕ್ಕಳಿಗೆ ಬಯಲಾಟದ ಪ್ರಸಂಗ ಕಲಿಸಿ ಕೊಡಲಿದ್ದಾರೆ. ಶಿಬಿರದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಬಯಲಾಟ ಪ್ರದರ್ಶನವೂ ನಡೆಯಲಿದೆ.</p>.<p>ಆಯ್ದ 15 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ: 95133 13113 ಸಂಪರ್ಕಿಸಬಹುದು ಎಂದು ರಂಗತೋರಣ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-25-733247201</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಾಂಸ್ಕೃತಿಕ ಅಭಿವ್ಯಕ್ತಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ರಂಗತೋರಣ ಸಂಸ್ಥೆ ಬಯಲಾಟ ತರಬೇತಿ ಶಿಬಿರ ಆಯೋಜಿಸಿದೆ.</p>.<p>ಏಪ್ರಿಲ್ 28ರಿಂದ ಮೇ 18ರವರೆಗೆ ಪ್ರತಿದಿನ ಸಂಜೆ 4ರಿಂದ 7ರವರೆಗೆ ನಗರದ ರಾಜಕುಮಾರ ರಸ್ತೆಯ ಕೆ.ಎಂ. ಟ್ರೇಡರ್ಸ್ ಹಿಂಭಾಗದ ‘ಪಾಂಚಜನ್ಯ’ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ. 10ನೇ ತರಗತಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಈ ಶಿಬಿರ ರೂಪಿಸಲಾಗಿದೆ.</p>.<p>ಜಾನಪದ ವಿದ್ವಾಂಸ ಮುದ್ದಟನೂರು ಎಚ್. ತಿಪ್ಪೇಸ್ವಾಮಿ ಅವರು ಮಕ್ಕಳಿಗೆ ಬಯಲಾಟದ ಪ್ರಸಂಗ ಕಲಿಸಿ ಕೊಡಲಿದ್ದಾರೆ. ಶಿಬಿರದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಬಯಲಾಟ ಪ್ರದರ್ಶನವೂ ನಡೆಯಲಿದೆ.</p>.<p>ಆಯ್ದ 15 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ: 95133 13113 ಸಂಪರ್ಕಿಸಬಹುದು ಎಂದು ರಂಗತೋರಣ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-25-733247201</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>