<p>ಬಸವಕಲ್ಯಾಣ: ‘ಸತತ ಪರಿಶ್ರಮವೇ ಯಶಸ್ಸಿನ ಗುಟ್ಟು. ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಲು ನಿರಂತರ ಪ್ರಯತ್ನ ಅಗತ್ಯ’ ಎಂದು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ವಿಭಾಗೀಯ ಕಾರ್ಯದರ್ಶಿ ನರಸಿಂಗರೆಡ್ಡಿ ಗದ್ಲೇಗಾಂವ ಹೇಳಿದ್ದಾರೆ.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜ್ಞಾನ ಗಳಿಕೆ ಮತ್ತು ಸತತ ಪ್ರಯತ್ನಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆಯನ್ನೇ ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು. ರಾಷ್ಟ್ರಪುರುಷರು, ಮಹನೀಯರಿಂದ ಪ್ರೇರಣೆ ಪಡೆಯಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರಹ್ಲಾದ್ ಚೆಂಗಟೆ ಮಾತನಾಡಿ, ‘ಶಿಸ್ತು, ಸಂಯಮವಿದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಬಹುದು. ನಿಷ್ಠೆ, ಪ್ರಾಮಾಣಿಕತೆಗೆ ಸಮಾಜದಿಂದ ಮನ್ನಣೆ ದೊರಕುವುದು ನಿಶ್ಚಿತ’ ಎಂದರು.</p>.<p>ಮಹಾಲೇಶ ಡಿ.ಎಸ್.ಮಾತನಾಡಿ, ‘ಉದ್ಯೋಗ ಪಡೆದುಕೊಳ್ಳುವುದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸವುದು ಅವಶ್ಯಕ. ಈ ಬಗ್ಗೆಯೂ ಸಿದ್ಧತೆ ಕೈಗೊಳ್ಳಬೇಕು. ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು’ ಎಂದರು.</p>.<p>ಹುಮನಾಬಾದ್ ಪ್ರಥಮದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ ಡೊಂಗ್ರೆ ಸಸಿಗೆ ನೀರೆರೆದು ಉದ್ಘಾಟಿಸಿದರು. ಚಂದ್ರಕಾಂತ ಗಾಯಕವಾಡ, ಶ್ರೀಕಾಂತ ಚೌಹಾಣ್, ಮೀನಾಕ್ಷಿ ಬಿರಾದಾರ, ಶರಣಬಸಪ್ಪ ಜನ್ನಾ, ಸುಭಾಷ ಮಚಕೂರಿ, ವಿಶ್ವನಾಥ ಬನಸೋಡೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-33-1199544487</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ‘ಸತತ ಪರಿಶ್ರಮವೇ ಯಶಸ್ಸಿನ ಗುಟ್ಟು. ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಲು ನಿರಂತರ ಪ್ರಯತ್ನ ಅಗತ್ಯ’ ಎಂದು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ವಿಭಾಗೀಯ ಕಾರ್ಯದರ್ಶಿ ನರಸಿಂಗರೆಡ್ಡಿ ಗದ್ಲೇಗಾಂವ ಹೇಳಿದ್ದಾರೆ.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜ್ಞಾನ ಗಳಿಕೆ ಮತ್ತು ಸತತ ಪ್ರಯತ್ನಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆಯನ್ನೇ ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು. ರಾಷ್ಟ್ರಪುರುಷರು, ಮಹನೀಯರಿಂದ ಪ್ರೇರಣೆ ಪಡೆಯಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರಹ್ಲಾದ್ ಚೆಂಗಟೆ ಮಾತನಾಡಿ, ‘ಶಿಸ್ತು, ಸಂಯಮವಿದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಬಹುದು. ನಿಷ್ಠೆ, ಪ್ರಾಮಾಣಿಕತೆಗೆ ಸಮಾಜದಿಂದ ಮನ್ನಣೆ ದೊರಕುವುದು ನಿಶ್ಚಿತ’ ಎಂದರು.</p>.<p>ಮಹಾಲೇಶ ಡಿ.ಎಸ್.ಮಾತನಾಡಿ, ‘ಉದ್ಯೋಗ ಪಡೆದುಕೊಳ್ಳುವುದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸವುದು ಅವಶ್ಯಕ. ಈ ಬಗ್ಗೆಯೂ ಸಿದ್ಧತೆ ಕೈಗೊಳ್ಳಬೇಕು. ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು’ ಎಂದರು.</p>.<p>ಹುಮನಾಬಾದ್ ಪ್ರಥಮದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ ಡೊಂಗ್ರೆ ಸಸಿಗೆ ನೀರೆರೆದು ಉದ್ಘಾಟಿಸಿದರು. ಚಂದ್ರಕಾಂತ ಗಾಯಕವಾಡ, ಶ್ರೀಕಾಂತ ಚೌಹಾಣ್, ಮೀನಾಕ್ಷಿ ಬಿರಾದಾರ, ಶರಣಬಸಪ್ಪ ಜನ್ನಾ, ಸುಭಾಷ ಮಚಕೂರಿ, ವಿಶ್ವನಾಥ ಬನಸೋಡೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-33-1199544487</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>