<p>ಬಸವಕಲ್ಯಾಣ: ‘ಖೇರ್ಡಾ(ಬಿ) ಶಿವಲಿಂಗೇಶ್ವರರ ಮಠವು ಸರ್ವ ಸಮಾನತೆಯ ತತ್ವ ಸಾರುವ ಮಠವಾಗಿದೆ. ಇದು ಅತ್ಯಂತ ಪುರಾತನ ಹಾಗೂ ತನ್ನದೆಯಾದ ಐತಿಹಾಸ ಹೊಂದಿದೆ’ ಎಂದು ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಸತೀಶಕುಮಾರ ಹೊಸಮನಿ ಹೇಳಿದರು.</p>.<p>ತಾಲ್ಲೂಕಿನ ಖೇರ್ಡಾ(ಬಿ) ಶರಣ ಶಿವಲಿಂಗೇಶ್ವರ ಮಠದ 98ನೇ ಜಾತ್ರೆ ಅಂಗವಾಗಿ ಈಚೆಗೆ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಠದಲ್ಲಿ ಜಾತಿ ಭೇದವಿಲ್ಲ. 12ನೇ ಶತಮಾನದ ಬಸವಾದಿ ಶರಣರ ಸಂದೇಶ ಇಲ್ಲಿ ಪಾಲನೆಯಾಗುತ್ತಿದೆ. ಮಠ ಶೈಕ್ಷಣಿಕವಾಗಿಯೂ ಸೇವೆ ಸಲ್ಲಿಸುತ್ತಿದೆ’ ಎಂದರು.</p>.<p>ಪೀಠಾಧಿಪತಿ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಭಾಜನರಾದ ಸತೀಶಕುಮಾರ ಅವರು ಇದೇ ಗ್ರಾಮದವರಾಗಿದ್ದು, ಉನ್ನತ ಹುದ್ದೆಯಲ್ಲಿದ್ದು ಜನಸೇವೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ’ ಎಂದರು.</p>.<p>ಗ್ರಂಥಾಲಯ ಇಲಾಖೆಯಲ್ಲಿ ಅಧಿಕಾರಿಯಾಗಿ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿಯೂ ಉತ್ತಮ ಕಾರ್ಯ ನಿರ್ವಹಿಸಿದ್ದು, ಅವರ ಎಲ್ಲ ಸಾಧನೆಯನ್ನು ಪರಿಗಣಿಸಿ ಮಠದಿಂದ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ’ ಎಂದರು.</p>.<p>ಈ ಸಂದರ್ಭದಲ್ಲಿ ಸತೀಶಕುಮಾರ ಹೊಸಮನಿ ಅವರಿಗೆ ‘ಶಿಕ್ಷಣ ಸೇವಾ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.</p>.<p>ಮಂಠಾಳ ಅಭಿನವ ಚನ್ನಬಸವ ಸ್ವಾಮೀಜಿ ಸೇರಿದಂತೆ ಅನೇಕರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-33-1028683011</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ‘ಖೇರ್ಡಾ(ಬಿ) ಶಿವಲಿಂಗೇಶ್ವರರ ಮಠವು ಸರ್ವ ಸಮಾನತೆಯ ತತ್ವ ಸಾರುವ ಮಠವಾಗಿದೆ. ಇದು ಅತ್ಯಂತ ಪುರಾತನ ಹಾಗೂ ತನ್ನದೆಯಾದ ಐತಿಹಾಸ ಹೊಂದಿದೆ’ ಎಂದು ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಸತೀಶಕುಮಾರ ಹೊಸಮನಿ ಹೇಳಿದರು.</p>.<p>ತಾಲ್ಲೂಕಿನ ಖೇರ್ಡಾ(ಬಿ) ಶರಣ ಶಿವಲಿಂಗೇಶ್ವರ ಮಠದ 98ನೇ ಜಾತ್ರೆ ಅಂಗವಾಗಿ ಈಚೆಗೆ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಠದಲ್ಲಿ ಜಾತಿ ಭೇದವಿಲ್ಲ. 12ನೇ ಶತಮಾನದ ಬಸವಾದಿ ಶರಣರ ಸಂದೇಶ ಇಲ್ಲಿ ಪಾಲನೆಯಾಗುತ್ತಿದೆ. ಮಠ ಶೈಕ್ಷಣಿಕವಾಗಿಯೂ ಸೇವೆ ಸಲ್ಲಿಸುತ್ತಿದೆ’ ಎಂದರು.</p>.<p>ಪೀಠಾಧಿಪತಿ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಭಾಜನರಾದ ಸತೀಶಕುಮಾರ ಅವರು ಇದೇ ಗ್ರಾಮದವರಾಗಿದ್ದು, ಉನ್ನತ ಹುದ್ದೆಯಲ್ಲಿದ್ದು ಜನಸೇವೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ’ ಎಂದರು.</p>.<p>ಗ್ರಂಥಾಲಯ ಇಲಾಖೆಯಲ್ಲಿ ಅಧಿಕಾರಿಯಾಗಿ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿಯೂ ಉತ್ತಮ ಕಾರ್ಯ ನಿರ್ವಹಿಸಿದ್ದು, ಅವರ ಎಲ್ಲ ಸಾಧನೆಯನ್ನು ಪರಿಗಣಿಸಿ ಮಠದಿಂದ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ’ ಎಂದರು.</p>.<p>ಈ ಸಂದರ್ಭದಲ್ಲಿ ಸತೀಶಕುಮಾರ ಹೊಸಮನಿ ಅವರಿಗೆ ‘ಶಿಕ್ಷಣ ಸೇವಾ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.</p>.<p>ಮಂಠಾಳ ಅಭಿನವ ಚನ್ನಬಸವ ಸ್ವಾಮೀಜಿ ಸೇರಿದಂತೆ ಅನೇಕರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-33-1028683011</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>