<p>ಬಸವನಬಾಗೇವಾಡಿ: ವಿಷಯ ಜ್ಞಾನಕ್ಕಿಂತ ಭಾಷಾಜ್ಞಾನ ನಮಗೆ ಹೆಚ್ಚಿನ ಯಶಸ್ಸನ್ನು ತಂದುಕೊಡುತ್ತಿದೆ. ಕಲಿಕಾ ಹಂತದಲ್ಲಿಯೇ ವಿವಿಧ ಭಾಷೆಗಳ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಮುಖ್ಯವಾಗಿ ಇಂಗ್ಲಿಷ್ ಭಾಷೆಯ ಪ್ರಭುತ್ವ ಗಳಿಸಿಕೊಳ್ಳುವುದು ತುಂಬಾ ಅವಶ್ಯಕವಾಗಿದೆ ಎಂದು ಪ್ರಾಧ್ಯಾಪಕಿ ಅರ್ಚನಾ ದಂಡಾವತಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಬಿ.ಎಲ್.ಡಿ.ಇ.ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ವಿಲಿಯಂ ಷೇಕ್ಸ್ಪಿಯರ್ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಇಂಗ್ಲಿಷ್ ಭಾಷಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>ಪ್ರಾಧ್ಯಾಪಕಿ ಆರ್.ಎಂ.ಮುಜಾವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಎ.ವಿ.ಸೂರ್ಯವಂಶಿ ಅದ್ಯಕ್ಷತೆ ವಹಿಸಿ ಮಾತನಾಡಿದರು. ಐ.ಕ್ಯೂ.ಎ.ಸಿ. ಸಂಯೋಜಕರಾದ ಪ್ರೊ.ಸಿ.ಪಿ.ಧಡೇಕರ, ಎಸ್.ಜೆ.ಸೂರ್ಯವಂಶಿ, ಎ.ಯು.ಪಾಟೀಲ, ಪ್ರಶಾಂತ ಗೂಳಪ್ಪನವರ, ಡಾ.ಕಿರಣ ಸೂಡಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-26-1751028576</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವನಬಾಗೇವಾಡಿ: ವಿಷಯ ಜ್ಞಾನಕ್ಕಿಂತ ಭಾಷಾಜ್ಞಾನ ನಮಗೆ ಹೆಚ್ಚಿನ ಯಶಸ್ಸನ್ನು ತಂದುಕೊಡುತ್ತಿದೆ. ಕಲಿಕಾ ಹಂತದಲ್ಲಿಯೇ ವಿವಿಧ ಭಾಷೆಗಳ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಮುಖ್ಯವಾಗಿ ಇಂಗ್ಲಿಷ್ ಭಾಷೆಯ ಪ್ರಭುತ್ವ ಗಳಿಸಿಕೊಳ್ಳುವುದು ತುಂಬಾ ಅವಶ್ಯಕವಾಗಿದೆ ಎಂದು ಪ್ರಾಧ್ಯಾಪಕಿ ಅರ್ಚನಾ ದಂಡಾವತಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಬಿ.ಎಲ್.ಡಿ.ಇ.ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ವಿಲಿಯಂ ಷೇಕ್ಸ್ಪಿಯರ್ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಇಂಗ್ಲಿಷ್ ಭಾಷಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>ಪ್ರಾಧ್ಯಾಪಕಿ ಆರ್.ಎಂ.ಮುಜಾವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಎ.ವಿ.ಸೂರ್ಯವಂಶಿ ಅದ್ಯಕ್ಷತೆ ವಹಿಸಿ ಮಾತನಾಡಿದರು. ಐ.ಕ್ಯೂ.ಎ.ಸಿ. ಸಂಯೋಜಕರಾದ ಪ್ರೊ.ಸಿ.ಪಿ.ಧಡೇಕರ, ಎಸ್.ಜೆ.ಸೂರ್ಯವಂಶಿ, ಎ.ಯು.ಪಾಟೀಲ, ಪ್ರಶಾಂತ ಗೂಳಪ್ಪನವರ, ಡಾ.ಕಿರಣ ಸೂಡಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-26-1751028576</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>