<p>ಬೇಗೂರು(ಹೊಸಕೋಟೆ): ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಬೇಗೂರಿನಲ್ಲಿ ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿ ಶಾಲೆ ಕಟ್ಟಡ ಸಮುಚ್ಚಯ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಲಾಯಿತು.</p>.<p>ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿ, ಅಂದಾಜು ₹35 ಕೋಟಿ ವೆಚ್ಚದಲ್ಲಿ 10 ಎಕರೆ ಜಾಗದಲ್ಲಿ ಶ್ರಮಿಕ ವಸತಿ ಶಾಲಾ ಸಮುಚ್ಚಯ ನಿರ್ಮಾಣಗೊಳ್ಳಲಿದೆ. ಕಟ್ಟಡ ಕಾಮಗಾರಿಯು ಮುಂದಿನ 15 ತಿಂಗಳೊಳಗೆ ಶ್ರಮಿಕರ ಮಕ್ಕಳಿಗೆ ಜ್ಞಾನಾರ್ಜನೆ ನೀಡಲು ತ್ವರಿತವಾಗಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.</p>.<p>ದೇಶದಲ್ಲೇ ಗಿಗ್ ಕಾರ್ಮಿಕರ ರಕ್ಷಣೆಗಾಗಿ ರಾಜ್ಯ ಸರ್ಕಾರ ಮೊಟ್ಟ ಮೊದಲ ಬಾರಿಗೆ ಕಾನೂನು ಜಾರಿಗೊಳಿಸಿ ಕಾರ್ಮಿಕರ ಕನಿಷ್ಠ ವೇತನವನ್ನು ಶೇ 60ಕ್ಕೆ ಏರಿಕೆ ಮಾಡಿ ಕಾರ್ಮಿಕರಿಗೆ ವೇತನ ಭದ್ರತೆ ಒದಗಿಸಿದೆ ಎಂದರು.</p>.<p>ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಮದುವೆ ಸಹಾಯ ಧನವಾಗಿ ₹60 ಸಾವಿರ, ಅನುಗ್ರಹ ರಾಶಿ ಯೋಜನೆಯಡಿ ಅಂತಿಮ ಸಂಸ್ಕಾರಕ್ಕೆ ₹1.50 ಲಕ್ಷ ಸಹಾಯಧನ, ಸುರಕ್ಷತಾ ಕಿಟ್, ತ್ರಿಚಕ್ರ ವಾಹನ ವಿತರಿಸಲಾಯಿತು.</p>.<p>ಬಮೂಲ್ ನಿರ್ದೇಶಕ ಸತೀಶ್ ಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಚ್ಚೆಗೌಡ, ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯರಾದ ಶ್ರೀಯಾನ್ಸ್ ಕುಮಾರ್ ಜೈನ್, ಎಚ್.ಜಿ ರಮೇಶ್, ಜಾನಿ ಕೆ.ಪಿ, ಜಯಲಕ್ಷ್ಮೀ, ಜಿಲ್ಲಾ ಕಾರ್ಮಿಕ ಅಧಿಕಾರಿ ಮುಕ್ಕುಂದ ಸೇರಿದಂತೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-15-1010651227</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೇಗೂರು(ಹೊಸಕೋಟೆ): ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಬೇಗೂರಿನಲ್ಲಿ ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿ ಶಾಲೆ ಕಟ್ಟಡ ಸಮುಚ್ಚಯ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಲಾಯಿತು.</p>.<p>ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿ, ಅಂದಾಜು ₹35 ಕೋಟಿ ವೆಚ್ಚದಲ್ಲಿ 10 ಎಕರೆ ಜಾಗದಲ್ಲಿ ಶ್ರಮಿಕ ವಸತಿ ಶಾಲಾ ಸಮುಚ್ಚಯ ನಿರ್ಮಾಣಗೊಳ್ಳಲಿದೆ. ಕಟ್ಟಡ ಕಾಮಗಾರಿಯು ಮುಂದಿನ 15 ತಿಂಗಳೊಳಗೆ ಶ್ರಮಿಕರ ಮಕ್ಕಳಿಗೆ ಜ್ಞಾನಾರ್ಜನೆ ನೀಡಲು ತ್ವರಿತವಾಗಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.</p>.<p>ದೇಶದಲ್ಲೇ ಗಿಗ್ ಕಾರ್ಮಿಕರ ರಕ್ಷಣೆಗಾಗಿ ರಾಜ್ಯ ಸರ್ಕಾರ ಮೊಟ್ಟ ಮೊದಲ ಬಾರಿಗೆ ಕಾನೂನು ಜಾರಿಗೊಳಿಸಿ ಕಾರ್ಮಿಕರ ಕನಿಷ್ಠ ವೇತನವನ್ನು ಶೇ 60ಕ್ಕೆ ಏರಿಕೆ ಮಾಡಿ ಕಾರ್ಮಿಕರಿಗೆ ವೇತನ ಭದ್ರತೆ ಒದಗಿಸಿದೆ ಎಂದರು.</p>.<p>ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಮದುವೆ ಸಹಾಯ ಧನವಾಗಿ ₹60 ಸಾವಿರ, ಅನುಗ್ರಹ ರಾಶಿ ಯೋಜನೆಯಡಿ ಅಂತಿಮ ಸಂಸ್ಕಾರಕ್ಕೆ ₹1.50 ಲಕ್ಷ ಸಹಾಯಧನ, ಸುರಕ್ಷತಾ ಕಿಟ್, ತ್ರಿಚಕ್ರ ವಾಹನ ವಿತರಿಸಲಾಯಿತು.</p>.<p>ಬಮೂಲ್ ನಿರ್ದೇಶಕ ಸತೀಶ್ ಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಚ್ಚೆಗೌಡ, ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯರಾದ ಶ್ರೀಯಾನ್ಸ್ ಕುಮಾರ್ ಜೈನ್, ಎಚ್.ಜಿ ರಮೇಶ್, ಜಾನಿ ಕೆ.ಪಿ, ಜಯಲಕ್ಷ್ಮೀ, ಜಿಲ್ಲಾ ಕಾರ್ಮಿಕ ಅಧಿಕಾರಿ ಮುಕ್ಕುಂದ ಸೇರಿದಂತೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-15-1010651227</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>