<p>ಬೆಳಗಾವಿ: ‘ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿದ್ದು ಇಂದಿಗೂ ಅವುಗಳ ಪ್ರಸ್ತುತತೆ ತುಂಬಾ ಮಹತ್ವದ್ದಾಗಿದೆ. ಅವರು ಕೇವಲ ದಲಿತರ ನಾಯಕರಲ್ಲ; ಇಡೀ ಭಾರತದ ಸಾಮಾಜಿಕ, ಜಕೀಯ, ಆರ್ಥಿಕ ಮತ್ತು ಪ್ರಜಾಪ್ರಭುತ್ವದ ಚಿಂತಕ’ ಎಂದು ಸಂಗಮೇಶ ಐಟಿಐ ಕಾಲೇಜು ಉಪ ಪ್ರಾಚಾರ್ಯ ಎನ್.ಎಫ್ ಮಲಕಣ್ಣವರ ಹೇಳಿದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ, ಸಂಗಮೇಶ ಐಟಿಐ ಕಾಲೇಜು ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ವಿಶೇಷ ಉಪನ್ಯಾಸ ಮಾಲಿಕೆ-18ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಹಿಳಾ ಸಬಲೀಕರಣಕ್ಕಾಗಿ ಹಿಂದೂ ಕೋಡ್ ಬಿಲ್ ನೀಡಿದ ಅವರು ಮಹಿಳೆಯರಿಗೆ ಆಸ್ತಿ ಹಕ್ಕು, ವಿಚ್ಛೇದನ ಹಕ್ಕುಗಳನ್ನು ನೀಡಲು ಹೋರಾಡಿದರು. ನಾನು ಸಮಾಜದ ಪ್ರಗತಿಯನ್ನು ಮಹಿಳೆಯರು ಸಾಧಿಸಿದ ಪ್ರಗತಿಯಿಂದ ಅಳೆಯುತ್ತೇನೆ ಎಂಬ ಮಾತು ಲಿಂಗ ಸಮಾನತೆ ಚಳವಳಿಗೆ ದಾರಿದೀಪವಾಗಿದೆ’ ಎಂದರು.</p>.<p>ಪ್ರಾಚಾರ್ಯ ಬಸವರಾಜ ಸದಲಗೆ ಅಧ್ಯಕ್ಷೀಯ ಭಾಷಣ ಮಾಡಿದರು. ಜಿಲ್ಲಾ ಸಂಚಾಲಕ ಶಿವರಾಜ ಅರಳಿ, ಅಯ್ಯಪ್ಪ ಹುನಗುಂ, ವಿದ್ಯಾರ್ಥಿ ಮಂಜುನಾಥ ಹಗೆದಾಳ, ಮುತ್ತು ನಾಯಕ,ಯಲ್ಲೇಶ ಬೆಳಗಾವಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-21-169685206</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿದ್ದು ಇಂದಿಗೂ ಅವುಗಳ ಪ್ರಸ್ತುತತೆ ತುಂಬಾ ಮಹತ್ವದ್ದಾಗಿದೆ. ಅವರು ಕೇವಲ ದಲಿತರ ನಾಯಕರಲ್ಲ; ಇಡೀ ಭಾರತದ ಸಾಮಾಜಿಕ, ಜಕೀಯ, ಆರ್ಥಿಕ ಮತ್ತು ಪ್ರಜಾಪ್ರಭುತ್ವದ ಚಿಂತಕ’ ಎಂದು ಸಂಗಮೇಶ ಐಟಿಐ ಕಾಲೇಜು ಉಪ ಪ್ರಾಚಾರ್ಯ ಎನ್.ಎಫ್ ಮಲಕಣ್ಣವರ ಹೇಳಿದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ, ಸಂಗಮೇಶ ಐಟಿಐ ಕಾಲೇಜು ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ವಿಶೇಷ ಉಪನ್ಯಾಸ ಮಾಲಿಕೆ-18ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಹಿಳಾ ಸಬಲೀಕರಣಕ್ಕಾಗಿ ಹಿಂದೂ ಕೋಡ್ ಬಿಲ್ ನೀಡಿದ ಅವರು ಮಹಿಳೆಯರಿಗೆ ಆಸ್ತಿ ಹಕ್ಕು, ವಿಚ್ಛೇದನ ಹಕ್ಕುಗಳನ್ನು ನೀಡಲು ಹೋರಾಡಿದರು. ನಾನು ಸಮಾಜದ ಪ್ರಗತಿಯನ್ನು ಮಹಿಳೆಯರು ಸಾಧಿಸಿದ ಪ್ರಗತಿಯಿಂದ ಅಳೆಯುತ್ತೇನೆ ಎಂಬ ಮಾತು ಲಿಂಗ ಸಮಾನತೆ ಚಳವಳಿಗೆ ದಾರಿದೀಪವಾಗಿದೆ’ ಎಂದರು.</p>.<p>ಪ್ರಾಚಾರ್ಯ ಬಸವರಾಜ ಸದಲಗೆ ಅಧ್ಯಕ್ಷೀಯ ಭಾಷಣ ಮಾಡಿದರು. ಜಿಲ್ಲಾ ಸಂಚಾಲಕ ಶಿವರಾಜ ಅರಳಿ, ಅಯ್ಯಪ್ಪ ಹುನಗುಂ, ವಿದ್ಯಾರ್ಥಿ ಮಂಜುನಾಥ ಹಗೆದಾಳ, ಮುತ್ತು ನಾಯಕ,ಯಲ್ಲೇಶ ಬೆಳಗಾವಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-21-169685206</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>