<p>ಬೆಳಗಾವಿ: ನಮ್ಮೂರ ಶಾಲೆ ಮುಚ್ಚಿದರೆ ಬೇರೆ ಊರಿಗೆ ನಮ್ಮ ಮಕ್ಕಳನ್ನು ಕಳಿಸಲು ಸಾಧ್ಯವಿಲ್ಲ. ಯಾವ ಕಾರಣಕ್ಕೂ ನಮ್ಮೂರ ಶಾಲೆ ಮುಚ್ಚಬಾರದು ಎಂಬ ಘೋಷಣೆಗಳೊಂದಿಗೆ ತಾಲ್ಲೂಕಿನ ಹೊನ್ನಿಹಾಳದ ಗ್ರಾಮಸ್ಥರು ಮಂಗಳವಾರ ಶಾಲೆ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಭರಮ ಉಚಗಾಂವಕರ್ ಮಾತನಾಡಿ, ‘ಎಐಡಿಎಎಸ್ಒ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು 5 ತಿಂಗಳಿನಿಂದ ಹೋರಾಟ ನಡೆಸಿದ್ದೇವೆ ಎಂದರು.</p>.<p>ಎಐಡಿಎಸ್ಒ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ ಮಾತನಾಡಿದರು.</p>.<p>ಸರ್ಕಾರವು ತನ್ನ ಹಠಮಾರಿ ಧೋರಣೆಯನ್ನು ಕೈ ಬಿಟ್ಟು ಕೆಪಿಎಸ್ ಯೋಜನೆಯನ್ನು ಹಿಂಪಡೆಯಬೇಕು. ಊರಿನ ಶಾಲೆ ಮುಚ್ಚದಂತೆ ಗ್ರಾಮಸ್ಥರೆಲ್ಲರ ಸಹಿ ಸಂಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು.</p>.<p>ಗ್ರಾಮಸ್ಥರಾದ ಶಿವಣ್ಣ, ಯಲ್ಲಪ್ಪ, ಶೇಖವ್ವ, ಭಾಗ್ಯ, ಶುಶಮ್ಮ ಸೇರಿದಂತೆ ಪೋಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-21-1711507498</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ನಮ್ಮೂರ ಶಾಲೆ ಮುಚ್ಚಿದರೆ ಬೇರೆ ಊರಿಗೆ ನಮ್ಮ ಮಕ್ಕಳನ್ನು ಕಳಿಸಲು ಸಾಧ್ಯವಿಲ್ಲ. ಯಾವ ಕಾರಣಕ್ಕೂ ನಮ್ಮೂರ ಶಾಲೆ ಮುಚ್ಚಬಾರದು ಎಂಬ ಘೋಷಣೆಗಳೊಂದಿಗೆ ತಾಲ್ಲೂಕಿನ ಹೊನ್ನಿಹಾಳದ ಗ್ರಾಮಸ್ಥರು ಮಂಗಳವಾರ ಶಾಲೆ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಭರಮ ಉಚಗಾಂವಕರ್ ಮಾತನಾಡಿ, ‘ಎಐಡಿಎಎಸ್ಒ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು 5 ತಿಂಗಳಿನಿಂದ ಹೋರಾಟ ನಡೆಸಿದ್ದೇವೆ ಎಂದರು.</p>.<p>ಎಐಡಿಎಸ್ಒ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ ಮಾತನಾಡಿದರು.</p>.<p>ಸರ್ಕಾರವು ತನ್ನ ಹಠಮಾರಿ ಧೋರಣೆಯನ್ನು ಕೈ ಬಿಟ್ಟು ಕೆಪಿಎಸ್ ಯೋಜನೆಯನ್ನು ಹಿಂಪಡೆಯಬೇಕು. ಊರಿನ ಶಾಲೆ ಮುಚ್ಚದಂತೆ ಗ್ರಾಮಸ್ಥರೆಲ್ಲರ ಸಹಿ ಸಂಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು.</p>.<p>ಗ್ರಾಮಸ್ಥರಾದ ಶಿವಣ್ಣ, ಯಲ್ಲಪ್ಪ, ಶೇಖವ್ವ, ಭಾಗ್ಯ, ಶುಶಮ್ಮ ಸೇರಿದಂತೆ ಪೋಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-21-1711507498</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>