<p>ಬೆಂಗಳೂರು: ಮಕ್ಕಳ ಬದುಕು ರೂಪಿಸಲು ಪೋಷಕರು ಶ್ರಮಿಸುತ್ತಾರೆ. ಇದನ್ನು ಮನಗಂಡು ಪೋಷಕರ ಮನೋಭಿಲಾಶೆಯಂತೆ ಮಕ್ಕಳು ಉತ್ತಮ ಬದುಕು ರೂಪಿಸಿಕೊಳ್ಳಬೇಕುಎಂದು ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ ಡಿ.ಕೆ. ಸುರೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಬೆಂಗಳೂರು ಸಹಕಾರ ಹಾಲು ಒಕ್ಕೂಟ, ಬಮೂಲ್ ಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಮತ್ತು ಸಿಬ್ಬಂದಿಯ ಸುಮಾರು 500 ಮಕ್ಕಳಿಗೆ ಪ್ರತಿಭಾ ಪುರಸ್ಕಾರದ ಚೆಕ್ ವಿತರಿಸಿ ಮಾತನಾಡಿದರು.</p>.<p>‘ಮಕ್ಕಳು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಮಯ ವ್ಯರ್ಥ ಮಾಡುತ್ತಿದ್ದಾರೆ. ಪೋಷಕರು ಯಾರ ಹಿತಕ್ಕಾಗಿ ಕಷ್ಟ ಪಡುತ್ತಿದ್ದಾರೆ ಎಂಬುದನ್ನು ಮಕ್ಕಳು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಲೋಕಸಭಾ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ಬಮೂಲ್ ಅಧ್ಯಕ್ಷನಾಗಿಲ್ಲ. ಬದುಕಿನಲ್ಲಿ ಸೋಲು–ಗೆಲುವು ಇರುತ್ತದೆ. ಗೆಲುವಿಗಿಂತ ಸೋಲಿನಿಂದಲೇ ಹೆಚ್ಚು ಪಾಠ ಕಲಿಯುವುದಿದೆ. ನಷ್ಟದಲ್ಲಿದ್ದ ಬಮೂಲ್ ಸಂಸ್ಥೆಯನ್ನು ಎಲ್ಲಾ ನಿರ್ದೇಶಕರ ಸಲಹೆ, ಸಹಕಾರದೊಂದಿಗೆ ಲಾಭದಲ್ಲಿ ನಡೆಯುವಂತೆ ಮಾಡಿದ್ದೇವೆ’ ಎಂದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಹೈನುಗಾರಿಕೆ ಅತ್ಯಂತ ಸವಾಲಿನ ಕೆಲಸವಾಗಿ ಪರಿಣಮಿಸಿದೆ. ಒಬ್ಬ ಕೃಷಿಕನಾಗಿ ಹತ್ತಾರು ಹಸುಗಳನ್ನು ಸಾಕುತ್ತಿದ್ದೇನೆ’ ಎಂದರು.</p>.<p>ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ ಮಾತನಾಡಿ, ರೈತರಿಗೆ ಹಸು ಖರೀದಿಗೆ, ಶೆಡ್ ನಿರ್ಮಾಣಕ್ಕೆ ಸಾಲ, ಆರ್ಥಿಕ ನೆರವು ನೀಡಿದ್ದೇವೆ ಎಂದರು.</p>.<p>ಸಹಕಾರ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಎಂಟು ಜನ ಗಣ್ಯರನ್ನು ಸನ್ಮಾನಿಸಲಾಯಿತು.</p>.<p>ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಉಪಾಧ್ಯಕ್ಷ ಡಾ.ರಾಜಣ್ಣ, ನಿರ್ದೇಶಕರಾದ ಬಿ.ಸಿ.ಆನಂದ್ ಕುಮಾರ್, ಆರ್.ಕೆ.ರಮೇಶ್, ಎಚ್.ಎನ್. ಅಶೋಕ್, ಎಸ್.ಲಿಂಗೇಶ್ ಕುಮಾರ್, ಎಚ್.ಎಸ್.ಹರೀಶ್ ಕುಮಾರ್, ಬೈರೇಗೌಡ, ಬಿ.ವಿ.ಸತೀಶ್ ಗೌಡ, ಎಸ್.ಪಿ. ಮುನಿರಾಜು, ರಾಜಾನುಕುಂಟೆ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಪ್ರಸನ್ನ ವಿ.ಪಿ. ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-4-1555563359</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಕ್ಕಳ ಬದುಕು ರೂಪಿಸಲು ಪೋಷಕರು ಶ್ರಮಿಸುತ್ತಾರೆ. ಇದನ್ನು ಮನಗಂಡು ಪೋಷಕರ ಮನೋಭಿಲಾಶೆಯಂತೆ ಮಕ್ಕಳು ಉತ್ತಮ ಬದುಕು ರೂಪಿಸಿಕೊಳ್ಳಬೇಕುಎಂದು ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ ಡಿ.ಕೆ. ಸುರೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಬೆಂಗಳೂರು ಸಹಕಾರ ಹಾಲು ಒಕ್ಕೂಟ, ಬಮೂಲ್ ಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಮತ್ತು ಸಿಬ್ಬಂದಿಯ ಸುಮಾರು 500 ಮಕ್ಕಳಿಗೆ ಪ್ರತಿಭಾ ಪುರಸ್ಕಾರದ ಚೆಕ್ ವಿತರಿಸಿ ಮಾತನಾಡಿದರು.</p>.<p>‘ಮಕ್ಕಳು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಮಯ ವ್ಯರ್ಥ ಮಾಡುತ್ತಿದ್ದಾರೆ. ಪೋಷಕರು ಯಾರ ಹಿತಕ್ಕಾಗಿ ಕಷ್ಟ ಪಡುತ್ತಿದ್ದಾರೆ ಎಂಬುದನ್ನು ಮಕ್ಕಳು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಲೋಕಸಭಾ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ಬಮೂಲ್ ಅಧ್ಯಕ್ಷನಾಗಿಲ್ಲ. ಬದುಕಿನಲ್ಲಿ ಸೋಲು–ಗೆಲುವು ಇರುತ್ತದೆ. ಗೆಲುವಿಗಿಂತ ಸೋಲಿನಿಂದಲೇ ಹೆಚ್ಚು ಪಾಠ ಕಲಿಯುವುದಿದೆ. ನಷ್ಟದಲ್ಲಿದ್ದ ಬಮೂಲ್ ಸಂಸ್ಥೆಯನ್ನು ಎಲ್ಲಾ ನಿರ್ದೇಶಕರ ಸಲಹೆ, ಸಹಕಾರದೊಂದಿಗೆ ಲಾಭದಲ್ಲಿ ನಡೆಯುವಂತೆ ಮಾಡಿದ್ದೇವೆ’ ಎಂದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಹೈನುಗಾರಿಕೆ ಅತ್ಯಂತ ಸವಾಲಿನ ಕೆಲಸವಾಗಿ ಪರಿಣಮಿಸಿದೆ. ಒಬ್ಬ ಕೃಷಿಕನಾಗಿ ಹತ್ತಾರು ಹಸುಗಳನ್ನು ಸಾಕುತ್ತಿದ್ದೇನೆ’ ಎಂದರು.</p>.<p>ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ ಮಾತನಾಡಿ, ರೈತರಿಗೆ ಹಸು ಖರೀದಿಗೆ, ಶೆಡ್ ನಿರ್ಮಾಣಕ್ಕೆ ಸಾಲ, ಆರ್ಥಿಕ ನೆರವು ನೀಡಿದ್ದೇವೆ ಎಂದರು.</p>.<p>ಸಹಕಾರ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಎಂಟು ಜನ ಗಣ್ಯರನ್ನು ಸನ್ಮಾನಿಸಲಾಯಿತು.</p>.<p>ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಉಪಾಧ್ಯಕ್ಷ ಡಾ.ರಾಜಣ್ಣ, ನಿರ್ದೇಶಕರಾದ ಬಿ.ಸಿ.ಆನಂದ್ ಕುಮಾರ್, ಆರ್.ಕೆ.ರಮೇಶ್, ಎಚ್.ಎನ್. ಅಶೋಕ್, ಎಸ್.ಲಿಂಗೇಶ್ ಕುಮಾರ್, ಎಚ್.ಎಸ್.ಹರೀಶ್ ಕುಮಾರ್, ಬೈರೇಗೌಡ, ಬಿ.ವಿ.ಸತೀಶ್ ಗೌಡ, ಎಸ್.ಪಿ. ಮುನಿರಾಜು, ರಾಜಾನುಕುಂಟೆ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಪ್ರಸನ್ನ ವಿ.ಪಿ. ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-4-1555563359</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>