<p>ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಅನುಷ್ಠಾನ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತಿಳಿಸಿದೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಗೋಪಿ ರಂಗಸ್ವಾಮಿ, ‘ಪ್ರಸ್ತುತ ಜಾರಿಯಲ್ಲಿರುವಂತೆ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ಉರ್ದು, ಮರಾಠಿ ಮೊದಲಾದವನ್ನು ತೃತೀಯ ಭಾಷೆಯಾಗಿ ಮುಂದುವರಿಸಬೇಕು. ತ್ರಿಭಾಷಾ ನೀತಿಯು ದೇಶವನ್ನು ಒಂದುಗೂಡಿಸುವ ಭಾವನಾತ್ಮಕ ವಿಚಾರವಾಗಿದೆ’ ಎಂದು ಹೇಳಿದರು.</p>.<p>‘ತ್ರಿಭಾಷಾ ಸೂತ್ರ ಎಂಬುದು ಯಾವುದೇ ಭಾಷೆಯ ಹೇರಿಕೆಗಾಗಿ ಅಥವಾ ಯಾವುದೋ ಹೋರಾಟದ ಫಲವಾಗಿ ಬಂದಿಲ್ಲ. ಶಿಕ್ಷಣ ತಜ್ಞರ ಅನೇಕ ವರ್ಷಗಳ ಚಿಂತನೆಯಿಂದ ಬಂದಿದೆ. ಇದು ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವುದಕ್ಕೆ ಈ ನೀತಿ ಸಹಾಯಕವಾಗಿದೆ’ ಎಂದರು.</p>.<p>‘ಎಸ್ಎಸ್ಎಲ್ಸಿ ಪರೀಕ್ಷೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಲ್ಲಿ ದ್ವಿಭಾಷಾ ನೀತಿ ಎಂಬ ಗೊಂದಲ ಸೃಷ್ಟಿಸಿದೆ. ಈ ನೀತಿಯನ್ನು ಘೋಷಿಸುವ ಮೊದಲು ಸಾರ್ವಜನಿಕ ಚರ್ಚೆಗೆ ಒಳಪಡಿಸಬೇಕಿತ್ತು. ಅದನ್ನು ಬಿಟ್ಟು ಯಾರದೋ ಒತ್ತಡಕ್ಕೆ ಮಣಿದು, ಪರೀಕ್ಷೆಯ ಸಂದರ್ಭದಲ್ಲಿ ದ್ವಿಭಾಷಾ ನೀತಿಯನ್ನು ಅನುಷ್ಠಾನ ಮಾಡಲು ಹೊರಟಿರುವುದು ಸರಿಯಲ್ಲ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-4-1470447193</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಅನುಷ್ಠಾನ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತಿಳಿಸಿದೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಗೋಪಿ ರಂಗಸ್ವಾಮಿ, ‘ಪ್ರಸ್ತುತ ಜಾರಿಯಲ್ಲಿರುವಂತೆ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ಉರ್ದು, ಮರಾಠಿ ಮೊದಲಾದವನ್ನು ತೃತೀಯ ಭಾಷೆಯಾಗಿ ಮುಂದುವರಿಸಬೇಕು. ತ್ರಿಭಾಷಾ ನೀತಿಯು ದೇಶವನ್ನು ಒಂದುಗೂಡಿಸುವ ಭಾವನಾತ್ಮಕ ವಿಚಾರವಾಗಿದೆ’ ಎಂದು ಹೇಳಿದರು.</p>.<p>‘ತ್ರಿಭಾಷಾ ಸೂತ್ರ ಎಂಬುದು ಯಾವುದೇ ಭಾಷೆಯ ಹೇರಿಕೆಗಾಗಿ ಅಥವಾ ಯಾವುದೋ ಹೋರಾಟದ ಫಲವಾಗಿ ಬಂದಿಲ್ಲ. ಶಿಕ್ಷಣ ತಜ್ಞರ ಅನೇಕ ವರ್ಷಗಳ ಚಿಂತನೆಯಿಂದ ಬಂದಿದೆ. ಇದು ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವುದಕ್ಕೆ ಈ ನೀತಿ ಸಹಾಯಕವಾಗಿದೆ’ ಎಂದರು.</p>.<p>‘ಎಸ್ಎಸ್ಎಲ್ಸಿ ಪರೀಕ್ಷೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಲ್ಲಿ ದ್ವಿಭಾಷಾ ನೀತಿ ಎಂಬ ಗೊಂದಲ ಸೃಷ್ಟಿಸಿದೆ. ಈ ನೀತಿಯನ್ನು ಘೋಷಿಸುವ ಮೊದಲು ಸಾರ್ವಜನಿಕ ಚರ್ಚೆಗೆ ಒಳಪಡಿಸಬೇಕಿತ್ತು. ಅದನ್ನು ಬಿಟ್ಟು ಯಾರದೋ ಒತ್ತಡಕ್ಕೆ ಮಣಿದು, ಪರೀಕ್ಷೆಯ ಸಂದರ್ಭದಲ್ಲಿ ದ್ವಿಭಾಷಾ ನೀತಿಯನ್ನು ಅನುಷ್ಠಾನ ಮಾಡಲು ಹೊರಟಿರುವುದು ಸರಿಯಲ್ಲ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-4-1470447193</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>