<p>ಬೆಂಗಳೂರು: ‘ಬುಡಕಟ್ಟು ಸಮುದಾಯದ ಮಕ್ಕಳಿಗೆ ಕೃತಕ ಬುದ್ಧಿಮತ್ತೆ(ಎ.ಐ) ತಂತ್ರಜ್ಞಾನ ಬಳಸಿಕೊಂಡು ಗುಣಮಟ್ಟದ ಶಿಕ್ಷಣವನ್ನು ನೀಡಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು’ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎಂ. ಕನಗವಲ್ಲಿ ತಿಳಿಸಿದರು.</p>.<p>ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯು ನಗರದಲ್ಲಿ ಆಯೋಜಿಸಿದ್ದ ‘ಬುಡಕಟ್ಟು ಜನರ ಅಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ’ಯ ಬಗ್ಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಎಸ್ಎಸ್ಎಲ್ಸಿ, ಪಿಯುಸಿ ಓದಿದ ಬುಡಕಟ್ಟು ಸಮುದಾಯದ ಯುವಕರಿಗೆ ಕೌಶಲ ತರಬೇತಿ ನೀಡಿ ಉದ್ಯೋಗ ಕೊಡಿಸಬೇಕು, ವಿವಿಧ ತರಬೇತಿ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ತರಬಹುದು ಎಂಬುದರ ಬಗ್ಗೆ ಚಿಂತನೆ ಮಾಡಬೇಕು. ಬುಡಕಟ್ಟು ಜನರು ತಯಾರಿಸುವ ಜೇನು, ಬಿದಿರಿನ ಉತ್ಪನ್ನ, ಗಿಡಮೂಲಿಕೆಗಳಿಗೆ ಮಾರುಕಟ್ಟೆ ರೂಪಿಸಿ’ ಎಂದು ಹೇಳಿದರು.</p>.<p>ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ.ಡಿ.ಆರ್.ಅಶೋಕ್ ಮಾತನಾಡಿ, ಎ.ಐ ತಂತ್ರಜ್ಞಾನ ಈಗ ಜೀವನದ ಎಲ್ಲಾ ರಂಗಗಳಲ್ಲೂ ವಿಸ್ತಾರವಾಗಿ ಬೆಳೆಯುತ್ತಿದೆ. ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಎ.ಐ ಅನ್ನು ಬಳಸಿಕೊಳ್ಳಬೇಕು. ಏಕಲವ್ಯ ಶಾಲೆಗಳಲ್ಲಿ ಎಐ ಬಳಸಿ ಎಸ್ಎಸ್ಎಲ್ಸಿ, ಪಿಯುಸಿ ತರಗತಿಗಳಲ್ಲಿ ಪಾಠ ಮಾಡಲು ಹಾಗೂ ನೀಟ್, ಸಿ.ಇ.ಟಿ ತರಬೇತಿ ಕೊಡಿಸಲು ಅನುಕೂಲವಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯನ್ನಾಗಿ ಮಾಡಬೇಕು ಎಂದರು.</p>.<p>ಕಾರ್ಯಾಗಾರದಲ್ಲಿ ಉಪ ಕಾರ್ಯದರ್ಶಿ ಜ್ಯೋತಿ, ಜಂಟಿ ನಿರ್ದೇಶಕ ರಾಜ್ಕುಮಾರ್, ಉಪ ನಿರ್ದೇಶಕ ಪ್ರಕಾಶ್, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಎಚ್.ಎಸ್. ಗಿರಿಜಾಂಬ, ಇಲಾಖೆ ಜಿಲ್ಲಾ ಅಧಿಕಾರಿಗಳಾದ ಎಂ.ಕೆ. ಮಲ್ಲೇಶ್, ಎಚ್.ಎಸ್. ಬಿಂದ್ಯಾ, ಬಸವರಾಜು, ನಾರಾಯಣಸ್ವಾಮಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-4-1049926162</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಬುಡಕಟ್ಟು ಸಮುದಾಯದ ಮಕ್ಕಳಿಗೆ ಕೃತಕ ಬುದ್ಧಿಮತ್ತೆ(ಎ.ಐ) ತಂತ್ರಜ್ಞಾನ ಬಳಸಿಕೊಂಡು ಗುಣಮಟ್ಟದ ಶಿಕ್ಷಣವನ್ನು ನೀಡಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು’ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎಂ. ಕನಗವಲ್ಲಿ ತಿಳಿಸಿದರು.</p>.<p>ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯು ನಗರದಲ್ಲಿ ಆಯೋಜಿಸಿದ್ದ ‘ಬುಡಕಟ್ಟು ಜನರ ಅಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ’ಯ ಬಗ್ಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಎಸ್ಎಸ್ಎಲ್ಸಿ, ಪಿಯುಸಿ ಓದಿದ ಬುಡಕಟ್ಟು ಸಮುದಾಯದ ಯುವಕರಿಗೆ ಕೌಶಲ ತರಬೇತಿ ನೀಡಿ ಉದ್ಯೋಗ ಕೊಡಿಸಬೇಕು, ವಿವಿಧ ತರಬೇತಿ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ತರಬಹುದು ಎಂಬುದರ ಬಗ್ಗೆ ಚಿಂತನೆ ಮಾಡಬೇಕು. ಬುಡಕಟ್ಟು ಜನರು ತಯಾರಿಸುವ ಜೇನು, ಬಿದಿರಿನ ಉತ್ಪನ್ನ, ಗಿಡಮೂಲಿಕೆಗಳಿಗೆ ಮಾರುಕಟ್ಟೆ ರೂಪಿಸಿ’ ಎಂದು ಹೇಳಿದರು.</p>.<p>ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ.ಡಿ.ಆರ್.ಅಶೋಕ್ ಮಾತನಾಡಿ, ಎ.ಐ ತಂತ್ರಜ್ಞಾನ ಈಗ ಜೀವನದ ಎಲ್ಲಾ ರಂಗಗಳಲ್ಲೂ ವಿಸ್ತಾರವಾಗಿ ಬೆಳೆಯುತ್ತಿದೆ. ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಎ.ಐ ಅನ್ನು ಬಳಸಿಕೊಳ್ಳಬೇಕು. ಏಕಲವ್ಯ ಶಾಲೆಗಳಲ್ಲಿ ಎಐ ಬಳಸಿ ಎಸ್ಎಸ್ಎಲ್ಸಿ, ಪಿಯುಸಿ ತರಗತಿಗಳಲ್ಲಿ ಪಾಠ ಮಾಡಲು ಹಾಗೂ ನೀಟ್, ಸಿ.ಇ.ಟಿ ತರಬೇತಿ ಕೊಡಿಸಲು ಅನುಕೂಲವಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯನ್ನಾಗಿ ಮಾಡಬೇಕು ಎಂದರು.</p>.<p>ಕಾರ್ಯಾಗಾರದಲ್ಲಿ ಉಪ ಕಾರ್ಯದರ್ಶಿ ಜ್ಯೋತಿ, ಜಂಟಿ ನಿರ್ದೇಶಕ ರಾಜ್ಕುಮಾರ್, ಉಪ ನಿರ್ದೇಶಕ ಪ್ರಕಾಶ್, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಎಚ್.ಎಸ್. ಗಿರಿಜಾಂಬ, ಇಲಾಖೆ ಜಿಲ್ಲಾ ಅಧಿಕಾರಿಗಳಾದ ಎಂ.ಕೆ. ಮಲ್ಲೇಶ್, ಎಚ್.ಎಸ್. ಬಿಂದ್ಯಾ, ಬಸವರಾಜು, ನಾರಾಯಣಸ್ವಾಮಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-4-1049926162</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>