<p>ಬೆಂಗಳೂರು: ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಸದ್ಯದಲ್ಲೇ ಕೃತಕ ಬುದ್ಧಿಮತ್ತೆ ಪ್ರಯೋಗಾಲಯ ಪ್ರಾರಂಭಿಸಲಾಗುವುದು ಎಂದು ಕುಲಪತಿ ಪ್ರೊ.ಬಿ.ರಮೇಶ್ ಹೇಳಿದರು.</p>.<p>ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ್ದ ‘ಇನ್ನೋವೆಕ್ಸ್-2.0’ ತಂತ್ರಜ್ಞಾನ ಕೌಶಲ ಮೇಳದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೈಬರ್ ಭದ್ರತೆ ಮತ್ತು ಬಯೋ ಇನ್ಫರ್ಮೆಟಿಕ್ಸ್ ವಿಷಯಗಳಲ್ಲಿ ಡಿಪ್ಲೊಮಾ ಕೋರ್ಸ್ ಆರಂಭಿಸಲಾಗುವುದು ಎಂದರು.</p>.<p>ಅತಿಥಿಗಳಾದ ವರದರಾಜನ್ ಕೃಷ್ಣ, ಡಾ.ಜ್ಞಾನವೇಲ್ ಮುತ್ತರಸು, ಪವನ್ ಕುಮಾರ್ ಮತ್ತು ಡಾ.ಬಿ.ಆರ್.ಸುಪ್ರೀತ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಅನ್ವೇಷಣಾತ್ಮಕ ಮತ್ತು ಸೃಜನಶೀಲ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿದರು.</p>.<p>ಶಿಕ್ಷಣವನ್ನು ಕೇವಲ ಪದವಿ ಗಳಿಕೆಗೆ ಸೀಮಿತಗೊಳಿಸದೆ ತರಗತಿ ಕೋಣೆಗಳನ್ನು ತಾಂತ್ರಿಕ ಕೌಶಲ ತರಬೇತಿಯ ಪ್ರಯೋಗಾಲಯವಾಗಿ ಪರಿವರ್ತಿಸಿಕೊಳ್ಳಬೇಕು. ಸ್ಟಾರ್ಟ್ಅಪ್ ಉದ್ಯಮಗಳ ಆರಂಭಕ್ಕೆ ಅಗತ್ಯವಾದ ಅನುಭವ ಪಡೆದುಕೊಳ್ಳುವಂತೆ ಸಲಹೆ ನೀಡಿದರು.</p>.<p>ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಮೇಧಾ ಇಟಗಿ ಹುಯಿಲಗೋಳ ಅವರು ಮೇಳದ ಉದ್ದೇಶವನ್ನು ವಿವರಿಸಿದರು. ಉಪನ್ಯಾಸಕಿ ನಿಖಿತಾ ನಿರೂಪಿಸಿದರು. ಜ್ಞಾನಾಕ್ಷಿ ಕತ್ತಿ ಸ್ವಾಗತಿಸಿ, ಸುಷ್ಮಾ ವಂದಿಸಿದರು.</p>.<p>ಎರಡು ದಿನಗಳ 'ಇನ್ನೋವೆಕ್ಸ್ -2.0' ಕೌಶಲ ಮೇಳದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವೆಬ್ ವಿನ್ಯಾಸ, ರಸಪ್ರಶ್ನೆ, ಚರ್ಚಾ ಸ್ಪರ್ಧೆ, ಭಾಷಣ ಸ್ಪರ್ಧೆ, ಕಿರುಚಿತ್ರ ನಿರ್ಮಾಣ, ಸ್ಟಾರ್ಟ್ ಅಪ್ ಪಿಚ್, ಗೇಮಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-254098546</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಸದ್ಯದಲ್ಲೇ ಕೃತಕ ಬುದ್ಧಿಮತ್ತೆ ಪ್ರಯೋಗಾಲಯ ಪ್ರಾರಂಭಿಸಲಾಗುವುದು ಎಂದು ಕುಲಪತಿ ಪ್ರೊ.ಬಿ.ರಮೇಶ್ ಹೇಳಿದರು.</p>.<p>ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ್ದ ‘ಇನ್ನೋವೆಕ್ಸ್-2.0’ ತಂತ್ರಜ್ಞಾನ ಕೌಶಲ ಮೇಳದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೈಬರ್ ಭದ್ರತೆ ಮತ್ತು ಬಯೋ ಇನ್ಫರ್ಮೆಟಿಕ್ಸ್ ವಿಷಯಗಳಲ್ಲಿ ಡಿಪ್ಲೊಮಾ ಕೋರ್ಸ್ ಆರಂಭಿಸಲಾಗುವುದು ಎಂದರು.</p>.<p>ಅತಿಥಿಗಳಾದ ವರದರಾಜನ್ ಕೃಷ್ಣ, ಡಾ.ಜ್ಞಾನವೇಲ್ ಮುತ್ತರಸು, ಪವನ್ ಕುಮಾರ್ ಮತ್ತು ಡಾ.ಬಿ.ಆರ್.ಸುಪ್ರೀತ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಅನ್ವೇಷಣಾತ್ಮಕ ಮತ್ತು ಸೃಜನಶೀಲ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿದರು.</p>.<p>ಶಿಕ್ಷಣವನ್ನು ಕೇವಲ ಪದವಿ ಗಳಿಕೆಗೆ ಸೀಮಿತಗೊಳಿಸದೆ ತರಗತಿ ಕೋಣೆಗಳನ್ನು ತಾಂತ್ರಿಕ ಕೌಶಲ ತರಬೇತಿಯ ಪ್ರಯೋಗಾಲಯವಾಗಿ ಪರಿವರ್ತಿಸಿಕೊಳ್ಳಬೇಕು. ಸ್ಟಾರ್ಟ್ಅಪ್ ಉದ್ಯಮಗಳ ಆರಂಭಕ್ಕೆ ಅಗತ್ಯವಾದ ಅನುಭವ ಪಡೆದುಕೊಳ್ಳುವಂತೆ ಸಲಹೆ ನೀಡಿದರು.</p>.<p>ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಮೇಧಾ ಇಟಗಿ ಹುಯಿಲಗೋಳ ಅವರು ಮೇಳದ ಉದ್ದೇಶವನ್ನು ವಿವರಿಸಿದರು. ಉಪನ್ಯಾಸಕಿ ನಿಖಿತಾ ನಿರೂಪಿಸಿದರು. ಜ್ಞಾನಾಕ್ಷಿ ಕತ್ತಿ ಸ್ವಾಗತಿಸಿ, ಸುಷ್ಮಾ ವಂದಿಸಿದರು.</p>.<p>ಎರಡು ದಿನಗಳ 'ಇನ್ನೋವೆಕ್ಸ್ -2.0' ಕೌಶಲ ಮೇಳದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವೆಬ್ ವಿನ್ಯಾಸ, ರಸಪ್ರಶ್ನೆ, ಚರ್ಚಾ ಸ್ಪರ್ಧೆ, ಭಾಷಣ ಸ್ಪರ್ಧೆ, ಕಿರುಚಿತ್ರ ನಿರ್ಮಾಣ, ಸ್ಟಾರ್ಟ್ ಅಪ್ ಪಿಚ್, ಗೇಮಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-254098546</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>