<p>ಬೆಂಗಳೂರು: ‘ಭಾರತದ ಭವಿಷ್ಯ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರ ಧಾರೆಗಳ ಮೇಲೆ ನಿಂತಿದೆ’ ಎಂದು ನಾಟಕಕಾರ ಕೆ.ವೈ. ನಾರಾಯಣಸ್ವಾಮಿ ಹೇಳಿದರು.</p>.<p>ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪ್ರಾಥಮಿಕ ಶಿಕ್ಷಣದ ಪಠ್ಯಕ್ರಮ ದಲ್ಲಿಯೇ ಅಂಬೇಡ್ಕರ್ ಅವರ ವಿಚಾರಗಳನ್ನು ಮನಮುಟ್ಟುವಂತೆ ರೂಪಿಸ ಬೇಕು ’ ಎಂದು ಸಲಹೆ ನೀಡಿದರು.</p>.<p>ಕಾಲೇಜಿನ ಪ್ರಾಂಶುಪಾಲ ಬಿ.ಸಿ. ನಾಗೇಂದ್ರಕುಮಾರ್ ಮಾತನಾಡಿ,‘ಕೆ.ವೈ. ನಾರಾಯಣಸ್ವಾಮಿ ಅವರು ವರ್ಣ ಪಲ್ಲಟ ನಾಟಕದಲ್ಲಿ ಅಂಬೇಡ್ಕರರ ವಿಚಾರಧಾರೆಗಳನ್ನು ಕಲಾತ್ಮಕವಾಗಿ ಪ್ರಸ್ತುತಪಡಿಸಿದ್ದಾರೆ’ ಎಂದು ತಿಳಿಸಿದರು.</p>.<p>ಅನಾವರಣ ತಂಡ ಶಶಿಧರ್ ಭಾರಿಘಾಟ್ನ ನಿರ್ದೇಶನದಲ್ಲಿ ಕೆ.ವೈ. ನಾರಾ ಯಣಸ್ವಾಮಿ ಅವರು ರಚಿಸಿದ ವರ್ಣ ಪಲ್ಲಟ ನಾಟಕವನ್ನು ಪ್ರಸ್ತುತಪಡಿಸಿದರು.</p>.<p>ಕಾಲೇಜಿನ ಕನ್ನಡ ಸಂಘದ ಸಂಚಾಲಕ ರುದ್ರೇಶ್ ಅದರಂಗಿ, ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಚಾಲಕ ಚಲುವರಾಜು, ಐಕ್ಯುಎಸಿ ಸಂಚಾಲಕ ನಾಗೇಶ ಜಿ., ಕೆಜಿಸಿಟಿಎ ಕಾರ್ಯದರ್ಶಿ ನಾರಾಯಣ ಎಚ್.ಜಿ., ಅಧ್ಯಾಪಕರಾದ ನಾಜಿಯ ಒಬೇದ್, ಸುಮಾ ಡಿ. ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-4-325093221</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಭಾರತದ ಭವಿಷ್ಯ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರ ಧಾರೆಗಳ ಮೇಲೆ ನಿಂತಿದೆ’ ಎಂದು ನಾಟಕಕಾರ ಕೆ.ವೈ. ನಾರಾಯಣಸ್ವಾಮಿ ಹೇಳಿದರು.</p>.<p>ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪ್ರಾಥಮಿಕ ಶಿಕ್ಷಣದ ಪಠ್ಯಕ್ರಮ ದಲ್ಲಿಯೇ ಅಂಬೇಡ್ಕರ್ ಅವರ ವಿಚಾರಗಳನ್ನು ಮನಮುಟ್ಟುವಂತೆ ರೂಪಿಸ ಬೇಕು ’ ಎಂದು ಸಲಹೆ ನೀಡಿದರು.</p>.<p>ಕಾಲೇಜಿನ ಪ್ರಾಂಶುಪಾಲ ಬಿ.ಸಿ. ನಾಗೇಂದ್ರಕುಮಾರ್ ಮಾತನಾಡಿ,‘ಕೆ.ವೈ. ನಾರಾಯಣಸ್ವಾಮಿ ಅವರು ವರ್ಣ ಪಲ್ಲಟ ನಾಟಕದಲ್ಲಿ ಅಂಬೇಡ್ಕರರ ವಿಚಾರಧಾರೆಗಳನ್ನು ಕಲಾತ್ಮಕವಾಗಿ ಪ್ರಸ್ತುತಪಡಿಸಿದ್ದಾರೆ’ ಎಂದು ತಿಳಿಸಿದರು.</p>.<p>ಅನಾವರಣ ತಂಡ ಶಶಿಧರ್ ಭಾರಿಘಾಟ್ನ ನಿರ್ದೇಶನದಲ್ಲಿ ಕೆ.ವೈ. ನಾರಾ ಯಣಸ್ವಾಮಿ ಅವರು ರಚಿಸಿದ ವರ್ಣ ಪಲ್ಲಟ ನಾಟಕವನ್ನು ಪ್ರಸ್ತುತಪಡಿಸಿದರು.</p>.<p>ಕಾಲೇಜಿನ ಕನ್ನಡ ಸಂಘದ ಸಂಚಾಲಕ ರುದ್ರೇಶ್ ಅದರಂಗಿ, ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಚಾಲಕ ಚಲುವರಾಜು, ಐಕ್ಯುಎಸಿ ಸಂಚಾಲಕ ನಾಗೇಶ ಜಿ., ಕೆಜಿಸಿಟಿಎ ಕಾರ್ಯದರ್ಶಿ ನಾರಾಯಣ ಎಚ್.ಜಿ., ಅಧ್ಯಾಪಕರಾದ ನಾಜಿಯ ಒಬೇದ್, ಸುಮಾ ಡಿ. ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-4-325093221</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>